Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...