Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಜುಕೇಶನ್ ಸ್ಟಾರ್ಟ್‌ಅಪ್‌ಗೆ ಭಯೋತ್ಪಾದನೆಯ ಲಿಂಕ್ : ಸ್ವಘೋಷಿತ ಝಿಯೋನಿಸ್ಟ್ ಆರಿಫ್ ಹುಸೇನ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

'ಎಕ್ಸ್ ಅಂಡ್ ವೈ ಲರ್ನಿಂಗ್' ಎಂಬ ಶಿಕ್ಷಣ ಸ್ಟಾರ್ಟ್‌ಅಪ್ ಅನ್ನು ಭಯೋತ್ಪಾದನೆಗೆ ಲಿಂಕ್ ಮಾಡಿದ, ಸಾಮಾಜಿಕ ಜಾಲತಾಣಗಳ ಮೂಲಕ ಸಂಸ್ಥೆಯ ವಿರುದ್ಧ ದ್ವೇಷ ಅಭಿಯಾನ ನಡೆಸಿದ ಆರೋಪ ಹೊತ್ತಿರುವ ಸ್ವಘೋಷಿತ ಎಕ್ಸ್ ಮುಸ್ಲಿಂ...

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...