Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...