Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...