Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...