Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...