Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...