Homeಕರ್ನಾಟಕಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ. ವ್ಯಾಪ್ತಿಗೆ ತನ್ನಿ: ಕೇಂದ್ರಕ್ಕೆ ಎನ್.ಚಲುವರಾಯ ಸ್ವಾಮಿ ಮನವಿ

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ. ವ್ಯಾಪ್ತಿಗೆ ತನ್ನಿ: ಕೇಂದ್ರಕ್ಕೆ ಎನ್.ಚಲುವರಾಯ ಸ್ವಾಮಿ ಮನವಿ

- Advertisement -
- Advertisement -

ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌ರವರು ದೇಶದ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿ ಕರ್ನಾಟಕದ ಪರವಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ರಾಜ್ಯದಲ್ಲಿ ಸರ್ಕಾರಿ ಬೀಜೋತ್ಪಾದನಾ ಕೇಂದ್ರಗಳು ಮತ್ತು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಗಳನ್ನು ಬಲಪಡಿಸಲು ಹೊಸ ಯೋಜನೆಗಳನ್ನು ರೂಪಿಸಿ ನೆರವು ನೀಡುವಂತೆ ಚಲುವರಾಯಸ್ವಾಮಿರವರು ಮನವಿ ಮಾಡಿದರು.

ಜೋಳ(ಮಾಲ್ದಂಡಿ)ಕ್ಕೆ ಹಿಂಗಾರು ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆಯೂ ಸಹ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಾಜ್ಯದ ಕೃಷಿ ಹಾಗೂ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿರವರು ಕೋರಿದರು.

ಇದೇ ವೇಳೆ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18 ರಿಂದ 5ಕ್ಕೆ ಇಳಿಸುವಂತೆ ಅವರು ಕೋರಿದರು.

ಬೆಂಗಳೂರು ಜಿಲ್ಲೆಯ ಆನೇಕಲ್‌ನಲ್ಲಿರುವ ಸರ್ಕಾರಿ ಭೂಮಿಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಪೆಸ್ಟಿಸೈಡ್ ಫಾರ್ಮುಲೇಶನ್ ಟೆಕ್ನಾಲಜಿಯ ಸ್ಥಾಪನೆಗೂ ಧನಸಹಾಯ ಒದಗಿಸುವಂತೆ ರಾಜ್ಯ ಕೃಷಿ ಸಚಿವರು ಮನವಿ ಮಾಡಿದರು.

ಕೃಷಿ ವಿಶ್ವವಿದ್ಯಾಲಯಗಳ ಕ್ಷೇತ್ರ ಬೆಳೆಗಳ ವಿಶೇಷವಾಗಿ ಎಣ್ಣೆಕಾಳು ಬೆಳೆಗಳ ತಳಿವರ್ಧೆನೆಗೆ ಕೇಂದ್ರೀಯ ಕೃಷಿ ಸಂಶೋಧನೆ ಹಾಗೂ ವಿಸ್ತರಣೆ ಇಲಾಖೆ (DARE) ಮೂಲಕ ಹೆಚ್ಚಿನ ಹಣವನ್ನು ಮಂಜೂರು ಮಾಡಲು ಕೇಂದ್ರ ಸಚಿವರಿಗೆ ವಿನಂತಿಸಿದರು.

ರಾಜ್ಯದಲ್ಲಿ ಸವಳು ಮತ್ತು ಜವಳು ಮಣ್ಣು ಸುಧಾರಣೆಗೆ ಹೊಸ ಯೋಜನೆಯನ್ನು ಪ್ರಾರಂಭಿಸಬಹುದಾಗಿದೆ ಎಂದು ಕೇಂದ್ರ ಸಚಿವರ ಗಮನ ಸೆಳೆದ ಎನ್‌.ಚಲುವರಾಯಸ್ವಾಮಿ ರೈತರ ಹೊಲಗಳಲ್ಲಿ ಕೃಷಿ ಅರಣ್ಯೀಕರಣ ಪ್ರದೇಶ ವಿಸ್ತರಣೆಗೆ ಧನಸಹಾಯ ಹೆಚ್ಚಿಸಲು ಕೋರಿದರು.

ಕರ್ನಾಟಕದಲ್ಲಿ ಕ್ಲಸ್ಟರ್ ಆಧಾರದ ಮೇಲೆ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಅಗ್ರಿ-ಟೆಕ್ ಸ್ಟಾರ್ಟ್ಅಪ್‌ಗಳ ಮೂಲಕ ಕೋಲ್ಡ್ ಚೈನ್ ಅಭಿವೃದ್ಧಿ ಮಾಡಿ ಸಂಸ್ಕರಣೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಮಾರ್ಕೆಟಿಂಗ್, ರಫ್ತು ಮುಂತಾದ ತಂತ್ರಜ್ಞಾನಗಳನ್ನು ಉತ್ತೇಜಿಸಲು ಯೋಜನೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌, ಕೃಷಿ ರಾಜ್ಯ ಸಚಿವರು ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ-2025ಕ್ಕೆ ಆಗಮಿಸುವಂತೆ ಎನ್.ಚಲುವರಾಯಸ್ವಾಮಿರವರು ಅಹ್ವಾನಿಸಿದರು.

18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ: ಕೇಂದ್ರದಿಂದ ಕರಡು ನಿಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...