Homeಕರ್ನಾಟಕಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ. ವ್ಯಾಪ್ತಿಗೆ ತನ್ನಿ: ಕೇಂದ್ರಕ್ಕೆ ಎನ್.ಚಲುವರಾಯ ಸ್ವಾಮಿ ಮನವಿ

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ. ವ್ಯಾಪ್ತಿಗೆ ತನ್ನಿ: ಕೇಂದ್ರಕ್ಕೆ ಎನ್.ಚಲುವರಾಯ ಸ್ವಾಮಿ ಮನವಿ

- Advertisement -
- Advertisement -

ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌ರವರು ದೇಶದ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿ ಕರ್ನಾಟಕದ ಪರವಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ರಾಜ್ಯದಲ್ಲಿ ಸರ್ಕಾರಿ ಬೀಜೋತ್ಪಾದನಾ ಕೇಂದ್ರಗಳು ಮತ್ತು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಗಳನ್ನು ಬಲಪಡಿಸಲು ಹೊಸ ಯೋಜನೆಗಳನ್ನು ರೂಪಿಸಿ ನೆರವು ನೀಡುವಂತೆ ಚಲುವರಾಯಸ್ವಾಮಿರವರು ಮನವಿ ಮಾಡಿದರು.

ಜೋಳ(ಮಾಲ್ದಂಡಿ)ಕ್ಕೆ ಹಿಂಗಾರು ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆಯೂ ಸಹ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಾಜ್ಯದ ಕೃಷಿ ಹಾಗೂ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿರವರು ಕೋರಿದರು.

ಇದೇ ವೇಳೆ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18 ರಿಂದ 5ಕ್ಕೆ ಇಳಿಸುವಂತೆ ಅವರು ಕೋರಿದರು.

ಬೆಂಗಳೂರು ಜಿಲ್ಲೆಯ ಆನೇಕಲ್‌ನಲ್ಲಿರುವ ಸರ್ಕಾರಿ ಭೂಮಿಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಪೆಸ್ಟಿಸೈಡ್ ಫಾರ್ಮುಲೇಶನ್ ಟೆಕ್ನಾಲಜಿಯ ಸ್ಥಾಪನೆಗೂ ಧನಸಹಾಯ ಒದಗಿಸುವಂತೆ ರಾಜ್ಯ ಕೃಷಿ ಸಚಿವರು ಮನವಿ ಮಾಡಿದರು.

ಕೃಷಿ ವಿಶ್ವವಿದ್ಯಾಲಯಗಳ ಕ್ಷೇತ್ರ ಬೆಳೆಗಳ ವಿಶೇಷವಾಗಿ ಎಣ್ಣೆಕಾಳು ಬೆಳೆಗಳ ತಳಿವರ್ಧೆನೆಗೆ ಕೇಂದ್ರೀಯ ಕೃಷಿ ಸಂಶೋಧನೆ ಹಾಗೂ ವಿಸ್ತರಣೆ ಇಲಾಖೆ (DARE) ಮೂಲಕ ಹೆಚ್ಚಿನ ಹಣವನ್ನು ಮಂಜೂರು ಮಾಡಲು ಕೇಂದ್ರ ಸಚಿವರಿಗೆ ವಿನಂತಿಸಿದರು.

ರಾಜ್ಯದಲ್ಲಿ ಸವಳು ಮತ್ತು ಜವಳು ಮಣ್ಣು ಸುಧಾರಣೆಗೆ ಹೊಸ ಯೋಜನೆಯನ್ನು ಪ್ರಾರಂಭಿಸಬಹುದಾಗಿದೆ ಎಂದು ಕೇಂದ್ರ ಸಚಿವರ ಗಮನ ಸೆಳೆದ ಎನ್‌.ಚಲುವರಾಯಸ್ವಾಮಿ ರೈತರ ಹೊಲಗಳಲ್ಲಿ ಕೃಷಿ ಅರಣ್ಯೀಕರಣ ಪ್ರದೇಶ ವಿಸ್ತರಣೆಗೆ ಧನಸಹಾಯ ಹೆಚ್ಚಿಸಲು ಕೋರಿದರು.

ಕರ್ನಾಟಕದಲ್ಲಿ ಕ್ಲಸ್ಟರ್ ಆಧಾರದ ಮೇಲೆ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಅಗ್ರಿ-ಟೆಕ್ ಸ್ಟಾರ್ಟ್ಅಪ್‌ಗಳ ಮೂಲಕ ಕೋಲ್ಡ್ ಚೈನ್ ಅಭಿವೃದ್ಧಿ ಮಾಡಿ ಸಂಸ್ಕರಣೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಮಾರ್ಕೆಟಿಂಗ್, ರಫ್ತು ಮುಂತಾದ ತಂತ್ರಜ್ಞಾನಗಳನ್ನು ಉತ್ತೇಜಿಸಲು ಯೋಜನೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌, ಕೃಷಿ ರಾಜ್ಯ ಸಚಿವರು ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ-2025ಕ್ಕೆ ಆಗಮಿಸುವಂತೆ ಎನ್.ಚಲುವರಾಯಸ್ವಾಮಿರವರು ಅಹ್ವಾನಿಸಿದರು.

18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ: ಕೇಂದ್ರದಿಂದ ಕರಡು ನಿಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...