Homeಕರ್ನಾಟಕಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ. ವ್ಯಾಪ್ತಿಗೆ ತನ್ನಿ: ಕೇಂದ್ರಕ್ಕೆ ಎನ್.ಚಲುವರಾಯ ಸ್ವಾಮಿ ಮನವಿ

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ. ವ್ಯಾಪ್ತಿಗೆ ತನ್ನಿ: ಕೇಂದ್ರಕ್ಕೆ ಎನ್.ಚಲುವರಾಯ ಸ್ವಾಮಿ ಮನವಿ

- Advertisement -
- Advertisement -

ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌ರವರು ದೇಶದ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿ ಕರ್ನಾಟಕದ ಪರವಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ರಾಜ್ಯದಲ್ಲಿ ಸರ್ಕಾರಿ ಬೀಜೋತ್ಪಾದನಾ ಕೇಂದ್ರಗಳು ಮತ್ತು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಗಳನ್ನು ಬಲಪಡಿಸಲು ಹೊಸ ಯೋಜನೆಗಳನ್ನು ರೂಪಿಸಿ ನೆರವು ನೀಡುವಂತೆ ಚಲುವರಾಯಸ್ವಾಮಿರವರು ಮನವಿ ಮಾಡಿದರು.

ಜೋಳ(ಮಾಲ್ದಂಡಿ)ಕ್ಕೆ ಹಿಂಗಾರು ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆಯೂ ಸಹ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಾಜ್ಯದ ಕೃಷಿ ಹಾಗೂ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿರವರು ಕೋರಿದರು.

ಇದೇ ವೇಳೆ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18 ರಿಂದ 5ಕ್ಕೆ ಇಳಿಸುವಂತೆ ಅವರು ಕೋರಿದರು.

ಬೆಂಗಳೂರು ಜಿಲ್ಲೆಯ ಆನೇಕಲ್‌ನಲ್ಲಿರುವ ಸರ್ಕಾರಿ ಭೂಮಿಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಪೆಸ್ಟಿಸೈಡ್ ಫಾರ್ಮುಲೇಶನ್ ಟೆಕ್ನಾಲಜಿಯ ಸ್ಥಾಪನೆಗೂ ಧನಸಹಾಯ ಒದಗಿಸುವಂತೆ ರಾಜ್ಯ ಕೃಷಿ ಸಚಿವರು ಮನವಿ ಮಾಡಿದರು.

ಕೃಷಿ ವಿಶ್ವವಿದ್ಯಾಲಯಗಳ ಕ್ಷೇತ್ರ ಬೆಳೆಗಳ ವಿಶೇಷವಾಗಿ ಎಣ್ಣೆಕಾಳು ಬೆಳೆಗಳ ತಳಿವರ್ಧೆನೆಗೆ ಕೇಂದ್ರೀಯ ಕೃಷಿ ಸಂಶೋಧನೆ ಹಾಗೂ ವಿಸ್ತರಣೆ ಇಲಾಖೆ (DARE) ಮೂಲಕ ಹೆಚ್ಚಿನ ಹಣವನ್ನು ಮಂಜೂರು ಮಾಡಲು ಕೇಂದ್ರ ಸಚಿವರಿಗೆ ವಿನಂತಿಸಿದರು.

ರಾಜ್ಯದಲ್ಲಿ ಸವಳು ಮತ್ತು ಜವಳು ಮಣ್ಣು ಸುಧಾರಣೆಗೆ ಹೊಸ ಯೋಜನೆಯನ್ನು ಪ್ರಾರಂಭಿಸಬಹುದಾಗಿದೆ ಎಂದು ಕೇಂದ್ರ ಸಚಿವರ ಗಮನ ಸೆಳೆದ ಎನ್‌.ಚಲುವರಾಯಸ್ವಾಮಿ ರೈತರ ಹೊಲಗಳಲ್ಲಿ ಕೃಷಿ ಅರಣ್ಯೀಕರಣ ಪ್ರದೇಶ ವಿಸ್ತರಣೆಗೆ ಧನಸಹಾಯ ಹೆಚ್ಚಿಸಲು ಕೋರಿದರು.

ಕರ್ನಾಟಕದಲ್ಲಿ ಕ್ಲಸ್ಟರ್ ಆಧಾರದ ಮೇಲೆ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಅಗ್ರಿ-ಟೆಕ್ ಸ್ಟಾರ್ಟ್ಅಪ್‌ಗಳ ಮೂಲಕ ಕೋಲ್ಡ್ ಚೈನ್ ಅಭಿವೃದ್ಧಿ ಮಾಡಿ ಸಂಸ್ಕರಣೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಮಾರ್ಕೆಟಿಂಗ್, ರಫ್ತು ಮುಂತಾದ ತಂತ್ರಜ್ಞಾನಗಳನ್ನು ಉತ್ತೇಜಿಸಲು ಯೋಜನೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌, ಕೃಷಿ ರಾಜ್ಯ ಸಚಿವರು ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ-2025ಕ್ಕೆ ಆಗಮಿಸುವಂತೆ ಎನ್.ಚಲುವರಾಯಸ್ವಾಮಿರವರು ಅಹ್ವಾನಿಸಿದರು.

18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ: ಕೇಂದ್ರದಿಂದ ಕರಡು ನಿಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...