Homeಮುಖಪುಟನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ.

- Advertisement -
- Advertisement -

ಸರ್ಕಾರಿ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತನ ಕೊಲೆ ಖಂಡಿಸಿ ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಶ್ರೀನಗರದ ವಿಮಾನ ನಿಲ್ದಾಣದ ಕಡೆ ಮೆರವಣಿಗೆ ಹೊರಟಿದ್ದ ಕಾಶ್ಮೀರಿ ಪಂಡಿತರನ್ನು ಚದುರಿಸಲು ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ನಗರಗಳಲ್ಲಿ ಸಾರಿಗೆ ಶಿಬಿರಗಳಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ನಡೆಸಿದ್ದಾರೆ. ಹಲವೆಡೆ ಮೊಂಬತ್ತಿ ಬೆಳಗಿ ಪ್ರತಿಭಟನೆ ದಾಖಲಿಸಲಾಗಿದೆ. ನಮಗೆ ರಕ್ಷಣೆ ಕೊಡಲು ವಿಫಲವಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ವಿರುದ್ಧ ಘೋಷಣೆ ಕೂಗಿರುವ ಪ್ರತಿಭಟನಾಕಾರರು ನಮ್ಮನ್ನು ಕೊಲ್ಲುವುದಕ್ಕಾಗಿ ಕಣಿವೆಗೆ ವಾಪಸ್ ಕರೆತಂದಿರಾ ಎಂದು ಪ್ರಶ್ನಿಸಿದ್ದಾರೆ.

ಕಾಶ್ಮೀರಿ ಪಂಡಿತನ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇಲ್ಲಿ ನಮಗೆ ಯಾವುದೇ ರಕ್ಷಣೆ ಇಲ್ಲ. ಇದನ್ನು ಪುನರ್ವಸತಿ ಎಂದು ಕರೆಯಲಾಗುತ್ತದೆಯೇ? ನಮ್ಮನ್ನು ಕೊಲ್ಲುವುದಕ್ಕಾಗಿ ಇಲ್ಲಿಗೆ ಕರೆತರಲಾಗಿದೆಯೇ? ಎಂಬ ರಂಜನ್ ಝುತ್ಸಿ ಎಂಬ ಪ್ರತಿಭಟನಾಕಾರರ ಹೇಳಿಕೆಯನ್ನು ಎನ್‌ಡಿಟಿವ ಉಲ್ಲೇಖಿಸಿದೆ.

ನಾವಿಲ್ಲಿ ಕೆಲಸ ಮಾಡಲು ಬಂದಿದ್ದೇವೆ. ಅದನ್ನು ಬಿಟ್ಟು ಬೇರೆನನ್ನೂ ಮಾಡುತ್ತಿಲ್ಲ. ಆದರೂ ನಮ್ಮನ್ನು ಏಕೆ ಕೊಲ್ಲಲಾಗುತ್ತಿದೆ? ನಾವು ಮಾಡಿದ ಅಪರಾಧವಾದರೂ ಏನು? ಇಲ್ಲಿನ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರಿಗಳು ಭರವಸೆ ನೀಡುತ್ತಾರೆ. ಆದರೆ ಮತ್ತೊಂದು ಕಡೆ ನಮ್ಮ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಪರಿಸ್ಥಿತಿಯ ಗಂಭೀರವಾಗಿದೆ. ಸುರಕ್ಷಿತವಾದ ತಹಸೀಲ್ದಾರ್ ಕಚೇರಿಯಲ್ಲಿಯೇ ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತಿದೆ ಅಂದರೆ ಇಲ್ಲಿನ ವ್ಯವಸ್ಥೆ ಕುಸಿದಿದೆ, ಭದ್ರತೆ ಕುಸಿದಿದೆ, ಸುರಕ್ಷತೆ ಕುಸಿದಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ. ನೀರು ಮತ್ತಿತರ ಆಹಾರ ಒದಗಿಸಿರುವ ಮುಸ್ಲಿಮರು, ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲಿ ಮುಸ್ಲಿಂ ಸಹೋದರರು ನಮ್ಮ ಪರವಾಗಿ ನಿಂತಿದ್ದಾರೆ. ನಮ್ಮ ಸೇವೆ ಮಾಡುತ್ತಿದ್ದಾರೆ. ನಮಗೆ ಹೆಗಲು ಕೊಟ್ಟ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಸಂಜಯ್ ಎಂಬ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದರುವ ಜಾವೇದ್ ಇಕ್ಬಾಲ್ ಮಾತನಾಡಿ ”ಕಾಶ್ಮೀರದಲ್ಲಿರುವ ಎಲ್ಲ ಮುಸ್ಲಿಮರು ಮುಂದೆ ಬಂದು ಪ್ರತಿಭಟಿಸಲು ನಾನು ಮನವಿ ಮಾಡುತ್ತೇನೆ. ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ, ತಹಶೀಲ್ದಾರ್ ಕಚೇರಿಯಲ್ಲಿಯೇ ಒಬ್ಬ ವ್ಯಕ್ತಿಯನ್ನು ಕೊಂದರೆ, ಕಾಶ್ಮೀರಿ ಪಂಡಿತರು ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

ಗುರುವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚಾದೂರ ಗ್ರಾಮದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಎಂಬುವವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ರಾಹುಲ್ ಭಟ್ ಅವರ ಹಣೆಗೆ ಗುಂಡಿಟ್ಟು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲೆ ಕಳೆದ ಎಂಟು ತಿಂಗಳಿನಿಂದ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉದ್ದೇಶಿತ ದಾಳಿಗೆ ಇದು ಮತ್ತೊಂದು ಸೇರ್ಪಡೆಯಾಗಿದೆ. ಅಕ್ಟೋಬರ್‌ ತಿಂಗಳಿನಿಂದ ಹೆಚ್ಚಾಗಿ ಹೊರಗಿನಿಂದ ಉದ್ಯೋಗ ಅರಸಿ ಬಂದ ವಲಸಿಗರು ಮತ್ತು ಸ್ಥಳೀಯ ಕಾಶ್ಮೀರಿ ಪಂಡಿತರ ಮೇಲೆ ದಾಳಿಗಳಾಗುತ್ತಿವೆ ಎಂದು ವರದಿಯಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಕೊಲೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ತಹಶೀಲ್ದಾರ್ ಕಚೇರಿಯಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತನ ಹತ್ಯೆ: ವರದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸ್ಥಳೀಯರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಎಂದು ವಿರೋಧ ಪಕ್ಷವಾದ ಕಾಂಗ್ರೆಸ್ ಆರೋಪಿಸಿದೆ. ಕಾಶ್ಮೀರ ಪಂಡಿತರ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಪಂಡಿತರು ಬೀದಿಯಲ್ಲಿ ಕೊಲೆಯಾಗುತ್ತಿರುವಾಗ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...