Homeಮುಖಪುಟನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ.

- Advertisement -
- Advertisement -

ಸರ್ಕಾರಿ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತನ ಕೊಲೆ ಖಂಡಿಸಿ ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಶ್ರೀನಗರದ ವಿಮಾನ ನಿಲ್ದಾಣದ ಕಡೆ ಮೆರವಣಿಗೆ ಹೊರಟಿದ್ದ ಕಾಶ್ಮೀರಿ ಪಂಡಿತರನ್ನು ಚದುರಿಸಲು ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ನಗರಗಳಲ್ಲಿ ಸಾರಿಗೆ ಶಿಬಿರಗಳಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ನಡೆಸಿದ್ದಾರೆ. ಹಲವೆಡೆ ಮೊಂಬತ್ತಿ ಬೆಳಗಿ ಪ್ರತಿಭಟನೆ ದಾಖಲಿಸಲಾಗಿದೆ. ನಮಗೆ ರಕ್ಷಣೆ ಕೊಡಲು ವಿಫಲವಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ವಿರುದ್ಧ ಘೋಷಣೆ ಕೂಗಿರುವ ಪ್ರತಿಭಟನಾಕಾರರು ನಮ್ಮನ್ನು ಕೊಲ್ಲುವುದಕ್ಕಾಗಿ ಕಣಿವೆಗೆ ವಾಪಸ್ ಕರೆತಂದಿರಾ ಎಂದು ಪ್ರಶ್ನಿಸಿದ್ದಾರೆ.

ಕಾಶ್ಮೀರಿ ಪಂಡಿತನ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇಲ್ಲಿ ನಮಗೆ ಯಾವುದೇ ರಕ್ಷಣೆ ಇಲ್ಲ. ಇದನ್ನು ಪುನರ್ವಸತಿ ಎಂದು ಕರೆಯಲಾಗುತ್ತದೆಯೇ? ನಮ್ಮನ್ನು ಕೊಲ್ಲುವುದಕ್ಕಾಗಿ ಇಲ್ಲಿಗೆ ಕರೆತರಲಾಗಿದೆಯೇ? ಎಂಬ ರಂಜನ್ ಝುತ್ಸಿ ಎಂಬ ಪ್ರತಿಭಟನಾಕಾರರ ಹೇಳಿಕೆಯನ್ನು ಎನ್‌ಡಿಟಿವ ಉಲ್ಲೇಖಿಸಿದೆ.

ನಾವಿಲ್ಲಿ ಕೆಲಸ ಮಾಡಲು ಬಂದಿದ್ದೇವೆ. ಅದನ್ನು ಬಿಟ್ಟು ಬೇರೆನನ್ನೂ ಮಾಡುತ್ತಿಲ್ಲ. ಆದರೂ ನಮ್ಮನ್ನು ಏಕೆ ಕೊಲ್ಲಲಾಗುತ್ತಿದೆ? ನಾವು ಮಾಡಿದ ಅಪರಾಧವಾದರೂ ಏನು? ಇಲ್ಲಿನ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರಿಗಳು ಭರವಸೆ ನೀಡುತ್ತಾರೆ. ಆದರೆ ಮತ್ತೊಂದು ಕಡೆ ನಮ್ಮ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಪರಿಸ್ಥಿತಿಯ ಗಂಭೀರವಾಗಿದೆ. ಸುರಕ್ಷಿತವಾದ ತಹಸೀಲ್ದಾರ್ ಕಚೇರಿಯಲ್ಲಿಯೇ ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತಿದೆ ಅಂದರೆ ಇಲ್ಲಿನ ವ್ಯವಸ್ಥೆ ಕುಸಿದಿದೆ, ಭದ್ರತೆ ಕುಸಿದಿದೆ, ಸುರಕ್ಷತೆ ಕುಸಿದಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ. ನೀರು ಮತ್ತಿತರ ಆಹಾರ ಒದಗಿಸಿರುವ ಮುಸ್ಲಿಮರು, ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲಿ ಮುಸ್ಲಿಂ ಸಹೋದರರು ನಮ್ಮ ಪರವಾಗಿ ನಿಂತಿದ್ದಾರೆ. ನಮ್ಮ ಸೇವೆ ಮಾಡುತ್ತಿದ್ದಾರೆ. ನಮಗೆ ಹೆಗಲು ಕೊಟ್ಟ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಸಂಜಯ್ ಎಂಬ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದರುವ ಜಾವೇದ್ ಇಕ್ಬಾಲ್ ಮಾತನಾಡಿ ”ಕಾಶ್ಮೀರದಲ್ಲಿರುವ ಎಲ್ಲ ಮುಸ್ಲಿಮರು ಮುಂದೆ ಬಂದು ಪ್ರತಿಭಟಿಸಲು ನಾನು ಮನವಿ ಮಾಡುತ್ತೇನೆ. ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ, ತಹಶೀಲ್ದಾರ್ ಕಚೇರಿಯಲ್ಲಿಯೇ ಒಬ್ಬ ವ್ಯಕ್ತಿಯನ್ನು ಕೊಂದರೆ, ಕಾಶ್ಮೀರಿ ಪಂಡಿತರು ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

ಗುರುವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚಾದೂರ ಗ್ರಾಮದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಎಂಬುವವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ರಾಹುಲ್ ಭಟ್ ಅವರ ಹಣೆಗೆ ಗುಂಡಿಟ್ಟು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲೆ ಕಳೆದ ಎಂಟು ತಿಂಗಳಿನಿಂದ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉದ್ದೇಶಿತ ದಾಳಿಗೆ ಇದು ಮತ್ತೊಂದು ಸೇರ್ಪಡೆಯಾಗಿದೆ. ಅಕ್ಟೋಬರ್‌ ತಿಂಗಳಿನಿಂದ ಹೆಚ್ಚಾಗಿ ಹೊರಗಿನಿಂದ ಉದ್ಯೋಗ ಅರಸಿ ಬಂದ ವಲಸಿಗರು ಮತ್ತು ಸ್ಥಳೀಯ ಕಾಶ್ಮೀರಿ ಪಂಡಿತರ ಮೇಲೆ ದಾಳಿಗಳಾಗುತ್ತಿವೆ ಎಂದು ವರದಿಯಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಕೊಲೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ತಹಶೀಲ್ದಾರ್ ಕಚೇರಿಯಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತನ ಹತ್ಯೆ: ವರದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸ್ಥಳೀಯರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಎಂದು ವಿರೋಧ ಪಕ್ಷವಾದ ಕಾಂಗ್ರೆಸ್ ಆರೋಪಿಸಿದೆ. ಕಾಶ್ಮೀರ ಪಂಡಿತರ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಪಂಡಿತರು ಬೀದಿಯಲ್ಲಿ ಕೊಲೆಯಾಗುತ್ತಿರುವಾಗ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...