Homeಮುಖಪುಟನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ.

- Advertisement -
- Advertisement -

ಸರ್ಕಾರಿ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತನ ಕೊಲೆ ಖಂಡಿಸಿ ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಶ್ರೀನಗರದ ವಿಮಾನ ನಿಲ್ದಾಣದ ಕಡೆ ಮೆರವಣಿಗೆ ಹೊರಟಿದ್ದ ಕಾಶ್ಮೀರಿ ಪಂಡಿತರನ್ನು ಚದುರಿಸಲು ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ನಗರಗಳಲ್ಲಿ ಸಾರಿಗೆ ಶಿಬಿರಗಳಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ನಡೆಸಿದ್ದಾರೆ. ಹಲವೆಡೆ ಮೊಂಬತ್ತಿ ಬೆಳಗಿ ಪ್ರತಿಭಟನೆ ದಾಖಲಿಸಲಾಗಿದೆ. ನಮಗೆ ರಕ್ಷಣೆ ಕೊಡಲು ವಿಫಲವಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ವಿರುದ್ಧ ಘೋಷಣೆ ಕೂಗಿರುವ ಪ್ರತಿಭಟನಾಕಾರರು ನಮ್ಮನ್ನು ಕೊಲ್ಲುವುದಕ್ಕಾಗಿ ಕಣಿವೆಗೆ ವಾಪಸ್ ಕರೆತಂದಿರಾ ಎಂದು ಪ್ರಶ್ನಿಸಿದ್ದಾರೆ.

ಕಾಶ್ಮೀರಿ ಪಂಡಿತನ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇಲ್ಲಿ ನಮಗೆ ಯಾವುದೇ ರಕ್ಷಣೆ ಇಲ್ಲ. ಇದನ್ನು ಪುನರ್ವಸತಿ ಎಂದು ಕರೆಯಲಾಗುತ್ತದೆಯೇ? ನಮ್ಮನ್ನು ಕೊಲ್ಲುವುದಕ್ಕಾಗಿ ಇಲ್ಲಿಗೆ ಕರೆತರಲಾಗಿದೆಯೇ? ಎಂಬ ರಂಜನ್ ಝುತ್ಸಿ ಎಂಬ ಪ್ರತಿಭಟನಾಕಾರರ ಹೇಳಿಕೆಯನ್ನು ಎನ್‌ಡಿಟಿವ ಉಲ್ಲೇಖಿಸಿದೆ.

ನಾವಿಲ್ಲಿ ಕೆಲಸ ಮಾಡಲು ಬಂದಿದ್ದೇವೆ. ಅದನ್ನು ಬಿಟ್ಟು ಬೇರೆನನ್ನೂ ಮಾಡುತ್ತಿಲ್ಲ. ಆದರೂ ನಮ್ಮನ್ನು ಏಕೆ ಕೊಲ್ಲಲಾಗುತ್ತಿದೆ? ನಾವು ಮಾಡಿದ ಅಪರಾಧವಾದರೂ ಏನು? ಇಲ್ಲಿನ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರಿಗಳು ಭರವಸೆ ನೀಡುತ್ತಾರೆ. ಆದರೆ ಮತ್ತೊಂದು ಕಡೆ ನಮ್ಮ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಪರಿಸ್ಥಿತಿಯ ಗಂಭೀರವಾಗಿದೆ. ಸುರಕ್ಷಿತವಾದ ತಹಸೀಲ್ದಾರ್ ಕಚೇರಿಯಲ್ಲಿಯೇ ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತಿದೆ ಅಂದರೆ ಇಲ್ಲಿನ ವ್ಯವಸ್ಥೆ ಕುಸಿದಿದೆ, ಭದ್ರತೆ ಕುಸಿದಿದೆ, ಸುರಕ್ಷತೆ ಕುಸಿದಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ. ನೀರು ಮತ್ತಿತರ ಆಹಾರ ಒದಗಿಸಿರುವ ಮುಸ್ಲಿಮರು, ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲಿ ಮುಸ್ಲಿಂ ಸಹೋದರರು ನಮ್ಮ ಪರವಾಗಿ ನಿಂತಿದ್ದಾರೆ. ನಮ್ಮ ಸೇವೆ ಮಾಡುತ್ತಿದ್ದಾರೆ. ನಮಗೆ ಹೆಗಲು ಕೊಟ್ಟ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಸಂಜಯ್ ಎಂಬ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದರುವ ಜಾವೇದ್ ಇಕ್ಬಾಲ್ ಮಾತನಾಡಿ ”ಕಾಶ್ಮೀರದಲ್ಲಿರುವ ಎಲ್ಲ ಮುಸ್ಲಿಮರು ಮುಂದೆ ಬಂದು ಪ್ರತಿಭಟಿಸಲು ನಾನು ಮನವಿ ಮಾಡುತ್ತೇನೆ. ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ, ತಹಶೀಲ್ದಾರ್ ಕಚೇರಿಯಲ್ಲಿಯೇ ಒಬ್ಬ ವ್ಯಕ್ತಿಯನ್ನು ಕೊಂದರೆ, ಕಾಶ್ಮೀರಿ ಪಂಡಿತರು ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

ಗುರುವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚಾದೂರ ಗ್ರಾಮದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಎಂಬುವವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ರಾಹುಲ್ ಭಟ್ ಅವರ ಹಣೆಗೆ ಗುಂಡಿಟ್ಟು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲೆ ಕಳೆದ ಎಂಟು ತಿಂಗಳಿನಿಂದ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉದ್ದೇಶಿತ ದಾಳಿಗೆ ಇದು ಮತ್ತೊಂದು ಸೇರ್ಪಡೆಯಾಗಿದೆ. ಅಕ್ಟೋಬರ್‌ ತಿಂಗಳಿನಿಂದ ಹೆಚ್ಚಾಗಿ ಹೊರಗಿನಿಂದ ಉದ್ಯೋಗ ಅರಸಿ ಬಂದ ವಲಸಿಗರು ಮತ್ತು ಸ್ಥಳೀಯ ಕಾಶ್ಮೀರಿ ಪಂಡಿತರ ಮೇಲೆ ದಾಳಿಗಳಾಗುತ್ತಿವೆ ಎಂದು ವರದಿಯಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಕೊಲೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ತಹಶೀಲ್ದಾರ್ ಕಚೇರಿಯಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತನ ಹತ್ಯೆ: ವರದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸ್ಥಳೀಯರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಎಂದು ವಿರೋಧ ಪಕ್ಷವಾದ ಕಾಂಗ್ರೆಸ್ ಆರೋಪಿಸಿದೆ. ಕಾಶ್ಮೀರ ಪಂಡಿತರ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಪಂಡಿತರು ಬೀದಿಯಲ್ಲಿ ಕೊಲೆಯಾಗುತ್ತಿರುವಾಗ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...