Homeಮುಖಪುಟನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ.

- Advertisement -
- Advertisement -

ಸರ್ಕಾರಿ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತನ ಕೊಲೆ ಖಂಡಿಸಿ ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಶ್ರೀನಗರದ ವಿಮಾನ ನಿಲ್ದಾಣದ ಕಡೆ ಮೆರವಣಿಗೆ ಹೊರಟಿದ್ದ ಕಾಶ್ಮೀರಿ ಪಂಡಿತರನ್ನು ಚದುರಿಸಲು ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ನಗರಗಳಲ್ಲಿ ಸಾರಿಗೆ ಶಿಬಿರಗಳಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ನಡೆಸಿದ್ದಾರೆ. ಹಲವೆಡೆ ಮೊಂಬತ್ತಿ ಬೆಳಗಿ ಪ್ರತಿಭಟನೆ ದಾಖಲಿಸಲಾಗಿದೆ. ನಮಗೆ ರಕ್ಷಣೆ ಕೊಡಲು ವಿಫಲವಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ವಿರುದ್ಧ ಘೋಷಣೆ ಕೂಗಿರುವ ಪ್ರತಿಭಟನಾಕಾರರು ನಮ್ಮನ್ನು ಕೊಲ್ಲುವುದಕ್ಕಾಗಿ ಕಣಿವೆಗೆ ವಾಪಸ್ ಕರೆತಂದಿರಾ ಎಂದು ಪ್ರಶ್ನಿಸಿದ್ದಾರೆ.

ಕಾಶ್ಮೀರಿ ಪಂಡಿತನ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇಲ್ಲಿ ನಮಗೆ ಯಾವುದೇ ರಕ್ಷಣೆ ಇಲ್ಲ. ಇದನ್ನು ಪುನರ್ವಸತಿ ಎಂದು ಕರೆಯಲಾಗುತ್ತದೆಯೇ? ನಮ್ಮನ್ನು ಕೊಲ್ಲುವುದಕ್ಕಾಗಿ ಇಲ್ಲಿಗೆ ಕರೆತರಲಾಗಿದೆಯೇ? ಎಂಬ ರಂಜನ್ ಝುತ್ಸಿ ಎಂಬ ಪ್ರತಿಭಟನಾಕಾರರ ಹೇಳಿಕೆಯನ್ನು ಎನ್‌ಡಿಟಿವ ಉಲ್ಲೇಖಿಸಿದೆ.

ನಾವಿಲ್ಲಿ ಕೆಲಸ ಮಾಡಲು ಬಂದಿದ್ದೇವೆ. ಅದನ್ನು ಬಿಟ್ಟು ಬೇರೆನನ್ನೂ ಮಾಡುತ್ತಿಲ್ಲ. ಆದರೂ ನಮ್ಮನ್ನು ಏಕೆ ಕೊಲ್ಲಲಾಗುತ್ತಿದೆ? ನಾವು ಮಾಡಿದ ಅಪರಾಧವಾದರೂ ಏನು? ಇಲ್ಲಿನ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರಿಗಳು ಭರವಸೆ ನೀಡುತ್ತಾರೆ. ಆದರೆ ಮತ್ತೊಂದು ಕಡೆ ನಮ್ಮ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಪರಿಸ್ಥಿತಿಯ ಗಂಭೀರವಾಗಿದೆ. ಸುರಕ್ಷಿತವಾದ ತಹಸೀಲ್ದಾರ್ ಕಚೇರಿಯಲ್ಲಿಯೇ ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತಿದೆ ಅಂದರೆ ಇಲ್ಲಿನ ವ್ಯವಸ್ಥೆ ಕುಸಿದಿದೆ, ಭದ್ರತೆ ಕುಸಿದಿದೆ, ಸುರಕ್ಷತೆ ಕುಸಿದಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ. ನೀರು ಮತ್ತಿತರ ಆಹಾರ ಒದಗಿಸಿರುವ ಮುಸ್ಲಿಮರು, ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲಿ ಮುಸ್ಲಿಂ ಸಹೋದರರು ನಮ್ಮ ಪರವಾಗಿ ನಿಂತಿದ್ದಾರೆ. ನಮ್ಮ ಸೇವೆ ಮಾಡುತ್ತಿದ್ದಾರೆ. ನಮಗೆ ಹೆಗಲು ಕೊಟ್ಟ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಸಂಜಯ್ ಎಂಬ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದರುವ ಜಾವೇದ್ ಇಕ್ಬಾಲ್ ಮಾತನಾಡಿ ”ಕಾಶ್ಮೀರದಲ್ಲಿರುವ ಎಲ್ಲ ಮುಸ್ಲಿಮರು ಮುಂದೆ ಬಂದು ಪ್ರತಿಭಟಿಸಲು ನಾನು ಮನವಿ ಮಾಡುತ್ತೇನೆ. ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ, ತಹಶೀಲ್ದಾರ್ ಕಚೇರಿಯಲ್ಲಿಯೇ ಒಬ್ಬ ವ್ಯಕ್ತಿಯನ್ನು ಕೊಂದರೆ, ಕಾಶ್ಮೀರಿ ಪಂಡಿತರು ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

ಗುರುವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚಾದೂರ ಗ್ರಾಮದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಎಂಬುವವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ರಾಹುಲ್ ಭಟ್ ಅವರ ಹಣೆಗೆ ಗುಂಡಿಟ್ಟು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲೆ ಕಳೆದ ಎಂಟು ತಿಂಗಳಿನಿಂದ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉದ್ದೇಶಿತ ದಾಳಿಗೆ ಇದು ಮತ್ತೊಂದು ಸೇರ್ಪಡೆಯಾಗಿದೆ. ಅಕ್ಟೋಬರ್‌ ತಿಂಗಳಿನಿಂದ ಹೆಚ್ಚಾಗಿ ಹೊರಗಿನಿಂದ ಉದ್ಯೋಗ ಅರಸಿ ಬಂದ ವಲಸಿಗರು ಮತ್ತು ಸ್ಥಳೀಯ ಕಾಶ್ಮೀರಿ ಪಂಡಿತರ ಮೇಲೆ ದಾಳಿಗಳಾಗುತ್ತಿವೆ ಎಂದು ವರದಿಯಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಕೊಲೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ತಹಶೀಲ್ದಾರ್ ಕಚೇರಿಯಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತನ ಹತ್ಯೆ: ವರದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸ್ಥಳೀಯರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಎಂದು ವಿರೋಧ ಪಕ್ಷವಾದ ಕಾಂಗ್ರೆಸ್ ಆರೋಪಿಸಿದೆ. ಕಾಶ್ಮೀರ ಪಂಡಿತರ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಪಂಡಿತರು ಬೀದಿಯಲ್ಲಿ ಕೊಲೆಯಾಗುತ್ತಿರುವಾಗ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...