Homeಮುಖಪುಟಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳನ್ನು ಪೂರೈಸುವಂತಿರಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಂದಿರಿಗೆ ಹೆರಿಗೆ ರಜೆ ನೀಡಬೇಕು ಎಂಬ ನಿರ್ಬಂಧದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ಪೀಠವು ಈ ಸೂಚನೆ ನೀಡಿದೆ.

ಸಾಮಾಜಿಕ ಭದ್ರತಾ ಸಂಹಿತೆ, 2020ರ ಸೆಕ್ಷನ್ 60(4) ಅಡಿಯಲ್ಲಿ ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಿಗೆ 12 ವಾರಗಳ ಹೆರಿಗೆ ರಜೆ ನೀಡಬೇಕು ಎಂಬ ನಿಬಂಧನೆಯು ಅಸಂವಿಧಾನಿಕ ಎಂದು ಪೀಠ ತೀರ್ಪು ನೀಡಿದೆ. ಈ ನಿಬಂಧನೆಯನ್ನು ತಿದ್ದುಪಡಿ ಮಾಡಿ, ಕಾನೂನುಬದ್ಧವಾಗಿ ಮಗುವನ್ನು ದತ್ತು ಪಡೆದ ಮಹಿಳೆಯು ಮಗುವಿನ ವಯಸ್ಸಿನ ಮಿತಿಯಿಲ್ಲದೆ 12 ವಾರಗಳ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಘೋಷಿಸಿದೆ.

“ಪಿತೃತ್ವ ರಜೆಯ ಅಗತ್ಯತೆಯ ಕುರಿತು ಹೇಳುವುದಾದರೆ, ಪಿತೃತ್ವ ರಜೆಯನ್ನು ಸಾಮಾಜಿಕ ಭದ್ರತಾ ಸೌಲಭ್ಯವೆಂದು ಗುರುತಿಸುವ ಕಾನೂನು ರೂಪಸಿಲು ನಾವು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಅಂತಹ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳಿಗೆ ಸ್ಪಂದಿಸುವ ರೀತಿಯಲ್ಲಿ ನಿರ್ಧರಿಸಲ್ಪಡಬೇಕು ಎಂದು” ಎಂದು ನ್ಯಾಯಮೂರ್ತಿ ಪಾರ್ದೀವಾಲಾ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.

ಪಿತೃತ್ವ ರಜೆ ಎಂದರೆ ಮಗುವಿನ ಜನನ ಅಥವಾ ದತ್ತು ಸ್ವೀಕಾರದ ನಂತರ ತಂದೆಗೆ ನೀಡಲಾಗುವ ವೇತನ ಸಹಿತ ಅಥವಾ ವೇತನ ರಹಿತ ರಜೆಯಾಗಿದೆ. ಇದು ಮಗುವಿನ ಆರಂಭಿಕ ಆರೈಕೆಯಲ್ಲಿ ಪಾಲ್ಗೊಳ್ಳಲು ಮತ್ತು ಹೆರಿಗೆಯ ನಂತರದ ಹಂತದಲ್ಲಿ ತಾಯಿಗೆ ಬೆಂಬಲ ನೀಡಲು ಸಹಕಾರಿಯಾಗುತ್ತದೆ. ಪೋಷಣೆ ಎಂಬುದು ಇಬ್ಬರ ಹಂಚಿಕೆಯ ಜವಾಬ್ದಾರಿಯಾಗಿದ್ದು, ಮಗುವಿನ ಆರಂಭಿಕ ಜೀವನದಲ್ಲಿ ಪೋಷಕರಿಬ್ಬರ ಉಪಸ್ಥಿತಿಯು ಮಗುವಿನ ಉತ್ತಮ ಬೆಳವಣಿಗೆಗೆ ಪೂರಕ ಎಂಬ ಮಾನ್ಯತೆಯ ಮೇಲೆ ಈ ಪರಿಕಲ್ಪನೆಯು ಆಧಾರಿತವಾಗಿದೆ. ಇದು ಕೇವಲ ಮಹಿಳೆಯರಿಗೆ ಸೀಮಿತವಾಗಿರುವ ಸಾಂಪ್ರದಾಯಿಕ ಪೋಷಣೆಯ ಜವಾಬ್ದಾರಿಯನ್ನು ಪ್ರಶ್ನಿಸುವ ಮೂಲಕ ಲಿಂಗ ಸಮಾನತೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ಮನೆಗೆಲಸದ ಜವಾಬ್ದಾರಿಗಳನ್ನು ಸಮಾನವಾಗಿ ಹಂಚಿಕೊಳ್ಳಲು ಮತ್ತು ಮಹಿಳೆಯರು ನಿರಂತರವಾಗಿ ಉದ್ಯೋಗದಲ್ಲಿ ಮುಂದುವರಿಯಲು ಸಹಾಯ ಮಾಡುತ್ತದೆ.

ಭಾರತದಲ್ಲಿ ಇನ್ನೂ ಪಿತೃತ್ವ ರಜೆಯನ್ನು ಕಾನೂನುಬದ್ಧವಾಗಿ ಗುರುತಿಸಲಾಗಿಲ್ಲ, ಆದರೆ ಮಹಿಳೆಯರಿಗೆ 26 ವಾರಗಳವರೆಗೆ ವೇತನ ಸಹಿತ ಹೆರಿಗೆ ರಜೆಗೆ ಅವಕಾಶವಿದೆ. ಇಬ್ಬರಿಗಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳೆಯರಿಗೆ 26 ವಾರಗಳ ವೇತನ ಸಹಿತ ಹೆರಿಗೆ ರಜೆ ಮತ್ತು ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ 12 ವಾರಗಳ ರಜೆಯನ್ನು ಕಾನೂನು ಒದಗಿಸುತ್ತದೆ. ಇದರಲ್ಲಿ ಹೆರಿಗೆಗೆ ಮುನ್ನ 8 ವಾರಗಳವರೆಗೆ ರಜೆ ಪಡೆಯಲು ಅವಕಾಶವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...