Homeಮುಖಪುಟಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳನ್ನು ಪೂರೈಸುವಂತಿರಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಂದಿರಿಗೆ ಹೆರಿಗೆ ರಜೆ ನೀಡಬೇಕು ಎಂಬ ನಿರ್ಬಂಧದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ಪೀಠವು ಈ ಸೂಚನೆ ನೀಡಿದೆ.

ಸಾಮಾಜಿಕ ಭದ್ರತಾ ಸಂಹಿತೆ, 2020ರ ಸೆಕ್ಷನ್ 60(4) ಅಡಿಯಲ್ಲಿ ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಿಗೆ 12 ವಾರಗಳ ಹೆರಿಗೆ ರಜೆ ನೀಡಬೇಕು ಎಂಬ ನಿಬಂಧನೆಯು ಅಸಂವಿಧಾನಿಕ ಎಂದು ಪೀಠ ತೀರ್ಪು ನೀಡಿದೆ. ಈ ನಿಬಂಧನೆಯನ್ನು ತಿದ್ದುಪಡಿ ಮಾಡಿ, ಕಾನೂನುಬದ್ಧವಾಗಿ ಮಗುವನ್ನು ದತ್ತು ಪಡೆದ ಮಹಿಳೆಯು ಮಗುವಿನ ವಯಸ್ಸಿನ ಮಿತಿಯಿಲ್ಲದೆ 12 ವಾರಗಳ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಘೋಷಿಸಿದೆ.

“ಪಿತೃತ್ವ ರಜೆಯ ಅಗತ್ಯತೆಯ ಕುರಿತು ಹೇಳುವುದಾದರೆ, ಪಿತೃತ್ವ ರಜೆಯನ್ನು ಸಾಮಾಜಿಕ ಭದ್ರತಾ ಸೌಲಭ್ಯವೆಂದು ಗುರುತಿಸುವ ಕಾನೂನು ರೂಪಸಿಲು ನಾವು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಅಂತಹ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳಿಗೆ ಸ್ಪಂದಿಸುವ ರೀತಿಯಲ್ಲಿ ನಿರ್ಧರಿಸಲ್ಪಡಬೇಕು ಎಂದು” ಎಂದು ನ್ಯಾಯಮೂರ್ತಿ ಪಾರ್ದೀವಾಲಾ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.

ಪಿತೃತ್ವ ರಜೆ ಎಂದರೆ ಮಗುವಿನ ಜನನ ಅಥವಾ ದತ್ತು ಸ್ವೀಕಾರದ ನಂತರ ತಂದೆಗೆ ನೀಡಲಾಗುವ ವೇತನ ಸಹಿತ ಅಥವಾ ವೇತನ ರಹಿತ ರಜೆಯಾಗಿದೆ. ಇದು ಮಗುವಿನ ಆರಂಭಿಕ ಆರೈಕೆಯಲ್ಲಿ ಪಾಲ್ಗೊಳ್ಳಲು ಮತ್ತು ಹೆರಿಗೆಯ ನಂತರದ ಹಂತದಲ್ಲಿ ತಾಯಿಗೆ ಬೆಂಬಲ ನೀಡಲು ಸಹಕಾರಿಯಾಗುತ್ತದೆ. ಪೋಷಣೆ ಎಂಬುದು ಇಬ್ಬರ ಹಂಚಿಕೆಯ ಜವಾಬ್ದಾರಿಯಾಗಿದ್ದು, ಮಗುವಿನ ಆರಂಭಿಕ ಜೀವನದಲ್ಲಿ ಪೋಷಕರಿಬ್ಬರ ಉಪಸ್ಥಿತಿಯು ಮಗುವಿನ ಉತ್ತಮ ಬೆಳವಣಿಗೆಗೆ ಪೂರಕ ಎಂಬ ಮಾನ್ಯತೆಯ ಮೇಲೆ ಈ ಪರಿಕಲ್ಪನೆಯು ಆಧಾರಿತವಾಗಿದೆ. ಇದು ಕೇವಲ ಮಹಿಳೆಯರಿಗೆ ಸೀಮಿತವಾಗಿರುವ ಸಾಂಪ್ರದಾಯಿಕ ಪೋಷಣೆಯ ಜವಾಬ್ದಾರಿಯನ್ನು ಪ್ರಶ್ನಿಸುವ ಮೂಲಕ ಲಿಂಗ ಸಮಾನತೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ಮನೆಗೆಲಸದ ಜವಾಬ್ದಾರಿಗಳನ್ನು ಸಮಾನವಾಗಿ ಹಂಚಿಕೊಳ್ಳಲು ಮತ್ತು ಮಹಿಳೆಯರು ನಿರಂತರವಾಗಿ ಉದ್ಯೋಗದಲ್ಲಿ ಮುಂದುವರಿಯಲು ಸಹಾಯ ಮಾಡುತ್ತದೆ.

ಭಾರತದಲ್ಲಿ ಇನ್ನೂ ಪಿತೃತ್ವ ರಜೆಯನ್ನು ಕಾನೂನುಬದ್ಧವಾಗಿ ಗುರುತಿಸಲಾಗಿಲ್ಲ, ಆದರೆ ಮಹಿಳೆಯರಿಗೆ 26 ವಾರಗಳವರೆಗೆ ವೇತನ ಸಹಿತ ಹೆರಿಗೆ ರಜೆಗೆ ಅವಕಾಶವಿದೆ. ಇಬ್ಬರಿಗಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳೆಯರಿಗೆ 26 ವಾರಗಳ ವೇತನ ಸಹಿತ ಹೆರಿಗೆ ರಜೆ ಮತ್ತು ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ 12 ವಾರಗಳ ರಜೆಯನ್ನು ಕಾನೂನು ಒದಗಿಸುತ್ತದೆ. ಇದರಲ್ಲಿ ಹೆರಿಗೆಗೆ ಮುನ್ನ 8 ವಾರಗಳವರೆಗೆ ರಜೆ ಪಡೆಯಲು ಅವಕಾಶವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...