Homeಮುಖಪುಟನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

ನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

- Advertisement -
- Advertisement -

ಇಂದು ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಲಕ್ಷಾಂತರ ಜನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದಿದ್ದಾರೆ. ಅದವರಲ್ಲಿ ಸುಭಾಷ್ ಚಂದ್ರಬೋಸ್‌ರವರು ಅಗ್ರಗಣ್ಯರು. ನನಗೆ ರಕ್ತ ಕೊಡಿ ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಯುವಜನರಿಗೆ ಕರೆನೀಡಿದ್ದ ಆ ಮಹಾನ್ ಚೇತನವನ್ನು ಭಾರತೀಯರ್ಯಾರು ಮರೆಯುವುದಿಲ್ಲ. ಇದೀಗ ಅವರ ಅವಶೇಷಗಳನ್ನು ಭಾರತಕ್ಕೆ ತರುವಂತೆ ಅವರ ಮಗಳು ಅನಿತಾ ಬೋಸ್ ಫಾಫ್ ಆಗ್ರಹಿಸಿದ್ದಾರೆ.

ನೇತಾಜಿಯವರು 1945ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದರು ಎಂದು ವ್ಯಾಪಕವಾಗಿ ನಂಬಲಾಗಿದೆ. ಆದರೆ ಅವರ ಸಾವಿನ ಬಗ್ಗೆ ಇಂದಿಗೂ ಚರ್ಚೆಗಳು ನಡೆಯುತ್ತಲೆ ಇವೆ. ಭಾರತೀಯ ಸರ್ಕಾರದ ಎರಡು ತನಿಖಾ ಆಯೋಗಗಳು ಅವರು ಸಾವನಪ್ಪಿದ್ದಾರೆ ಎಂದು ವರದಿ ನೀಡಿದರೆ ಅವುಗಳಿಗೆ ವಿರುದ್ಧವಾಗಿ ಎಂ. ಕೆ. ಮುಖರ್ಜಿ ನೇತೃತ್ವದ ಮೂರನೇ ಆಯೋಗವು ಬೋಸ್ ಜೀವಂತವಾಗಿದ್ದಾರೆಂಬ ಸಂಶಯಾಸ್ಪದ ಹೇಳಿಕೆಯನ್ನು ನೀಡಿತು. ಹಾಗಾಗಿ ನೇತಾಜಿಯವರ ಸಾವು ನಿಗೂಢವಾಗಿಯೇ ಉಳಿದಿದೆ.

ಈ ಕುರಿತು ಹೇಳಿಕೆ ನೀಡಿದ ನೇತಾಜಿಯವರ ಪುತ್ರಿ ಅನಿತಾ ಫಾಫ್‌ “ನನ್ನ ತಂದೆಯ ಅವಶೇಷಗಳನ್ನು ಭಾರತಕ್ಕೆ ತರುವ ಸಮಯ ಬಂದಿದೆ. ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಅವಶೇಷಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸುವುದು ಅವರ ಸಾವಿನ ಕುರಿತು ಅನುಮಾನಿಸುವವರಿಗೆ ಉತ್ತರವಾಗಲಿದೆ. ಇದಕ್ಕೆ ಜಪಾನ್ ಸರ್ಕಾರ ಒಪ್ಪಿಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಆಸ್ಟ್ರೀಯಾದಲ್ಲಿ ಜನಿಸಿರುವ, ಸದ್ಯ ಜರ್ಮನಿಯಲ್ಲಿ ಅರ್ಥಶಾಸ್ತ್ರಜ್ಞೆಯಾಗಿರುವ ನೇತಾಜಿಯವರ ಏಕೈಕ ಪುತ್ರಿಯಾದ ಅನಿತಾ ಬೋಸ್, “ನೇತಾಜಿಯವರ ಜೀವನದಲ್ಲಿ ಸ್ವಾತಂತ್ರ್ಯಕ್ಕಿಂತ ಮುಖ್ಯವಾದದ್ದು ಬೇರಾವುದು ಇರಲಿಲ್ಲ. ಅವರಿಗೆ ಬ್ರಿಟೀಷ್ ಆಳ್ವಿಕೆಯಿಂದ ಮುಕ್ತವಾದ ಭಾರತದಲ್ಲಿ ಬದುಕುವ ಹಂಬಲವಿತ್ತು. ಸ್ವಾತಂತ್ರ್ಯದ ಸಂಭ್ರಮವನ್ನು ಅನುಭವಿಸಲು ಅವರಿಲ್ಲದ ಈ ಸಂದರ್ಭದಲ್ಲಿ ಅವರ ಅವಶೇಷಗಳಾದರೂ ಭಾರತೀಯ ನೆಲಕ್ಕೆ ಮರಳುವ ಸಮಯ ಇದಾಗಿದೆ” ಎಂದಿದ್ದಾರೆ.

ಆಧುನಿಕ ತಂತ್ರಜ್ಞಾನ ಸತ್ಯವನ್ನು ತಿಳಿಸಲು ಶಸಕ್ತವಾಗಿದೆ. ಅವಶೇಷಗಳಿಂದ ಡಿಎನ್‌ಎ ತೆಗೆಯುವುದು ಸಾಧ್ಯವಿದೆ. ರೆಂಕೋಜಿ ದೇವಸ್ಥಾನದ ಅರ್ಚಕರು ಮತ್ತು ಜಪಾನ್ ಸರ್ಕಾರ ಡಿಎನ್‌ಎ ಪರೀಕ್ಷೆಗೆ ಒಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಳತು ವಿವೇಕ; ನೆಹರೂ ಆತ್ಮಕತೆಯಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...