Homeಮುಖಪುಟನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

ನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

- Advertisement -
- Advertisement -

ಇಂದು ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಲಕ್ಷಾಂತರ ಜನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದಿದ್ದಾರೆ. ಅದವರಲ್ಲಿ ಸುಭಾಷ್ ಚಂದ್ರಬೋಸ್‌ರವರು ಅಗ್ರಗಣ್ಯರು. ನನಗೆ ರಕ್ತ ಕೊಡಿ ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಯುವಜನರಿಗೆ ಕರೆನೀಡಿದ್ದ ಆ ಮಹಾನ್ ಚೇತನವನ್ನು ಭಾರತೀಯರ್ಯಾರು ಮರೆಯುವುದಿಲ್ಲ. ಇದೀಗ ಅವರ ಅವಶೇಷಗಳನ್ನು ಭಾರತಕ್ಕೆ ತರುವಂತೆ ಅವರ ಮಗಳು ಅನಿತಾ ಬೋಸ್ ಫಾಫ್ ಆಗ್ರಹಿಸಿದ್ದಾರೆ.

ನೇತಾಜಿಯವರು 1945ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದರು ಎಂದು ವ್ಯಾಪಕವಾಗಿ ನಂಬಲಾಗಿದೆ. ಆದರೆ ಅವರ ಸಾವಿನ ಬಗ್ಗೆ ಇಂದಿಗೂ ಚರ್ಚೆಗಳು ನಡೆಯುತ್ತಲೆ ಇವೆ. ಭಾರತೀಯ ಸರ್ಕಾರದ ಎರಡು ತನಿಖಾ ಆಯೋಗಗಳು ಅವರು ಸಾವನಪ್ಪಿದ್ದಾರೆ ಎಂದು ವರದಿ ನೀಡಿದರೆ ಅವುಗಳಿಗೆ ವಿರುದ್ಧವಾಗಿ ಎಂ. ಕೆ. ಮುಖರ್ಜಿ ನೇತೃತ್ವದ ಮೂರನೇ ಆಯೋಗವು ಬೋಸ್ ಜೀವಂತವಾಗಿದ್ದಾರೆಂಬ ಸಂಶಯಾಸ್ಪದ ಹೇಳಿಕೆಯನ್ನು ನೀಡಿತು. ಹಾಗಾಗಿ ನೇತಾಜಿಯವರ ಸಾವು ನಿಗೂಢವಾಗಿಯೇ ಉಳಿದಿದೆ.

ಈ ಕುರಿತು ಹೇಳಿಕೆ ನೀಡಿದ ನೇತಾಜಿಯವರ ಪುತ್ರಿ ಅನಿತಾ ಫಾಫ್‌ “ನನ್ನ ತಂದೆಯ ಅವಶೇಷಗಳನ್ನು ಭಾರತಕ್ಕೆ ತರುವ ಸಮಯ ಬಂದಿದೆ. ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಅವಶೇಷಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸುವುದು ಅವರ ಸಾವಿನ ಕುರಿತು ಅನುಮಾನಿಸುವವರಿಗೆ ಉತ್ತರವಾಗಲಿದೆ. ಇದಕ್ಕೆ ಜಪಾನ್ ಸರ್ಕಾರ ಒಪ್ಪಿಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಆಸ್ಟ್ರೀಯಾದಲ್ಲಿ ಜನಿಸಿರುವ, ಸದ್ಯ ಜರ್ಮನಿಯಲ್ಲಿ ಅರ್ಥಶಾಸ್ತ್ರಜ್ಞೆಯಾಗಿರುವ ನೇತಾಜಿಯವರ ಏಕೈಕ ಪುತ್ರಿಯಾದ ಅನಿತಾ ಬೋಸ್, “ನೇತಾಜಿಯವರ ಜೀವನದಲ್ಲಿ ಸ್ವಾತಂತ್ರ್ಯಕ್ಕಿಂತ ಮುಖ್ಯವಾದದ್ದು ಬೇರಾವುದು ಇರಲಿಲ್ಲ. ಅವರಿಗೆ ಬ್ರಿಟೀಷ್ ಆಳ್ವಿಕೆಯಿಂದ ಮುಕ್ತವಾದ ಭಾರತದಲ್ಲಿ ಬದುಕುವ ಹಂಬಲವಿತ್ತು. ಸ್ವಾತಂತ್ರ್ಯದ ಸಂಭ್ರಮವನ್ನು ಅನುಭವಿಸಲು ಅವರಿಲ್ಲದ ಈ ಸಂದರ್ಭದಲ್ಲಿ ಅವರ ಅವಶೇಷಗಳಾದರೂ ಭಾರತೀಯ ನೆಲಕ್ಕೆ ಮರಳುವ ಸಮಯ ಇದಾಗಿದೆ” ಎಂದಿದ್ದಾರೆ.

ಆಧುನಿಕ ತಂತ್ರಜ್ಞಾನ ಸತ್ಯವನ್ನು ತಿಳಿಸಲು ಶಸಕ್ತವಾಗಿದೆ. ಅವಶೇಷಗಳಿಂದ ಡಿಎನ್‌ಎ ತೆಗೆಯುವುದು ಸಾಧ್ಯವಿದೆ. ರೆಂಕೋಜಿ ದೇವಸ್ಥಾನದ ಅರ್ಚಕರು ಮತ್ತು ಜಪಾನ್ ಸರ್ಕಾರ ಡಿಎನ್‌ಎ ಪರೀಕ್ಷೆಗೆ ಒಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಳತು ವಿವೇಕ; ನೆಹರೂ ಆತ್ಮಕತೆಯಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...