Homeಮುಖಪುಟನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

ನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

- Advertisement -
- Advertisement -

ಇಂದು ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಲಕ್ಷಾಂತರ ಜನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದಿದ್ದಾರೆ. ಅದವರಲ್ಲಿ ಸುಭಾಷ್ ಚಂದ್ರಬೋಸ್‌ರವರು ಅಗ್ರಗಣ್ಯರು. ನನಗೆ ರಕ್ತ ಕೊಡಿ ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಯುವಜನರಿಗೆ ಕರೆನೀಡಿದ್ದ ಆ ಮಹಾನ್ ಚೇತನವನ್ನು ಭಾರತೀಯರ್ಯಾರು ಮರೆಯುವುದಿಲ್ಲ. ಇದೀಗ ಅವರ ಅವಶೇಷಗಳನ್ನು ಭಾರತಕ್ಕೆ ತರುವಂತೆ ಅವರ ಮಗಳು ಅನಿತಾ ಬೋಸ್ ಫಾಫ್ ಆಗ್ರಹಿಸಿದ್ದಾರೆ.

ನೇತಾಜಿಯವರು 1945ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದರು ಎಂದು ವ್ಯಾಪಕವಾಗಿ ನಂಬಲಾಗಿದೆ. ಆದರೆ ಅವರ ಸಾವಿನ ಬಗ್ಗೆ ಇಂದಿಗೂ ಚರ್ಚೆಗಳು ನಡೆಯುತ್ತಲೆ ಇವೆ. ಭಾರತೀಯ ಸರ್ಕಾರದ ಎರಡು ತನಿಖಾ ಆಯೋಗಗಳು ಅವರು ಸಾವನಪ್ಪಿದ್ದಾರೆ ಎಂದು ವರದಿ ನೀಡಿದರೆ ಅವುಗಳಿಗೆ ವಿರುದ್ಧವಾಗಿ ಎಂ. ಕೆ. ಮುಖರ್ಜಿ ನೇತೃತ್ವದ ಮೂರನೇ ಆಯೋಗವು ಬೋಸ್ ಜೀವಂತವಾಗಿದ್ದಾರೆಂಬ ಸಂಶಯಾಸ್ಪದ ಹೇಳಿಕೆಯನ್ನು ನೀಡಿತು. ಹಾಗಾಗಿ ನೇತಾಜಿಯವರ ಸಾವು ನಿಗೂಢವಾಗಿಯೇ ಉಳಿದಿದೆ.

ಈ ಕುರಿತು ಹೇಳಿಕೆ ನೀಡಿದ ನೇತಾಜಿಯವರ ಪುತ್ರಿ ಅನಿತಾ ಫಾಫ್‌ “ನನ್ನ ತಂದೆಯ ಅವಶೇಷಗಳನ್ನು ಭಾರತಕ್ಕೆ ತರುವ ಸಮಯ ಬಂದಿದೆ. ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಅವಶೇಷಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸುವುದು ಅವರ ಸಾವಿನ ಕುರಿತು ಅನುಮಾನಿಸುವವರಿಗೆ ಉತ್ತರವಾಗಲಿದೆ. ಇದಕ್ಕೆ ಜಪಾನ್ ಸರ್ಕಾರ ಒಪ್ಪಿಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಆಸ್ಟ್ರೀಯಾದಲ್ಲಿ ಜನಿಸಿರುವ, ಸದ್ಯ ಜರ್ಮನಿಯಲ್ಲಿ ಅರ್ಥಶಾಸ್ತ್ರಜ್ಞೆಯಾಗಿರುವ ನೇತಾಜಿಯವರ ಏಕೈಕ ಪುತ್ರಿಯಾದ ಅನಿತಾ ಬೋಸ್, “ನೇತಾಜಿಯವರ ಜೀವನದಲ್ಲಿ ಸ್ವಾತಂತ್ರ್ಯಕ್ಕಿಂತ ಮುಖ್ಯವಾದದ್ದು ಬೇರಾವುದು ಇರಲಿಲ್ಲ. ಅವರಿಗೆ ಬ್ರಿಟೀಷ್ ಆಳ್ವಿಕೆಯಿಂದ ಮುಕ್ತವಾದ ಭಾರತದಲ್ಲಿ ಬದುಕುವ ಹಂಬಲವಿತ್ತು. ಸ್ವಾತಂತ್ರ್ಯದ ಸಂಭ್ರಮವನ್ನು ಅನುಭವಿಸಲು ಅವರಿಲ್ಲದ ಈ ಸಂದರ್ಭದಲ್ಲಿ ಅವರ ಅವಶೇಷಗಳಾದರೂ ಭಾರತೀಯ ನೆಲಕ್ಕೆ ಮರಳುವ ಸಮಯ ಇದಾಗಿದೆ” ಎಂದಿದ್ದಾರೆ.

ಆಧುನಿಕ ತಂತ್ರಜ್ಞಾನ ಸತ್ಯವನ್ನು ತಿಳಿಸಲು ಶಸಕ್ತವಾಗಿದೆ. ಅವಶೇಷಗಳಿಂದ ಡಿಎನ್‌ಎ ತೆಗೆಯುವುದು ಸಾಧ್ಯವಿದೆ. ರೆಂಕೋಜಿ ದೇವಸ್ಥಾನದ ಅರ್ಚಕರು ಮತ್ತು ಜಪಾನ್ ಸರ್ಕಾರ ಡಿಎನ್‌ಎ ಪರೀಕ್ಷೆಗೆ ಒಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಳತು ವಿವೇಕ; ನೆಹರೂ ಆತ್ಮಕತೆಯಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...