Homeಮುಖಪುಟನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

- Advertisement -
- Advertisement -

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು ಎಂದು ಆರು ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ ‘ಶಾಂತಿಗಾಗಿ ನಾಗರಿಕ ವೇದಿಕೆ’ ಆಗ್ರಹಿಸಿತು.

ಬೆಂಗಳೂರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರಾದ ಬಿ.ಟಿ ಲಲಿತಾ ನಾಯಕ್ “ನಕ್ಸಲ್ ಸಮಸ್ಯೆ ಮುಕ್ತಾಯ, ಮುಕ್ತಾಯ ಎಂಬ ಮಾತುಗಳು ಬಹಳ ಕೇಳುತ್ತಿವೆ. ಈ ವಿದ್ಯಮಾನದಿಂದಾಗಿ ನಕ್ಸಲಿಯ ಮಾದರಿಯ ಹೋರಾಟ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದು ರೀತಿಯಲ್ಲಿ ಸಮಾರೋಪಗೊಂಡಿರುವುದು ವಾಸ್ತವ. ಆದರೆ, ನಕ್ಸಲಿಯರ ಸಮಸ್ಯೆಗಳು ಮುಕ್ತಾಯಗೊಂಡಿಲ್ಲ. ನಕ್ಸಲರು ಎತ್ತಿರುವ ಮಲೆನಾಡಿನ ಜನರ ಬದುಕಿನ ಸಮಸ್ಯೆಗಳಾವುವೂ ಪರಿಹಾರ ದಿಕ್ಕಿನತ್ತ ಮುಖಮಾಡಿಲ್ಲ ಎಂದು ಹೇಳಿದರು.

ನಕ್ಸಲಿಯರನ್ನು ಮುಖ್ಯವಾಹಿನಿಗೆ ಬರಮಾಡಿಕೊಳ್ಳುವುದರಲ್ಲಿನ ಮೊದಲ ಘಟ್ಟ ಮಾತ್ರ ಪೂರ್ಣಗೊಂಡಿದೆ. ಅವರನ್ನು ಕಾಡಿನಿಂದ ಹೊರತರಲಾಗಿದೆ. ಆದರೆ, ಅವರಿನ್ನು ನಾಡಿಗೆ ತಲುಪಿಲ್ಲ, ಜೈಲಿಗೆ ಹೋಗಿದ್ದಾರೆ. ಅನೇಕ ಗಂಭೀರ ಆರೋಪಗಳಡಿ ಕೇಸುಗಳನ್ನು ಎದುರಿಸಬೇಕಿದೆ. ಮುಂಡಗಾರು ಲತಾ ಒಬ್ಬರ ಮೇಲೆಯೇ 84 ಪ್ರಕರಣಗಳಿವೆ. ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ದೊಡ್ಡ ಪ್ರಮಾಣದಲ್ಲಿ ಕೇಸುಗಳಿವೆ. ಮೊದಲು ಅವರಿಗೆ ಈ ಎಲ್ಲಾ ಕೇಸುಗಳಲ್ಲಿ ಜಾಮೀನು ಸಿಗಬೇಕು. ಆಮೇಲೆ ಇವೆಲ್ಲವುಗಳ ಕುರಿತು ಕುರಿತು ವಿಚಾರಣೆ ನಡೆದು ಇತ್ಯರ್ಥಗೊಳ್ಳಬೇಕು ಎಂದು ತಿಳಿಸಿದರು.

ನಕ್ಸಲರನ್ನು ಕಾಡಿನಿಂದ ಹೊರತಂದಿದ್ದಕ್ಕಿಂತಲೂ ಹೆಚ್ಚಿನ ಕಷ್ಟ ಅವರನ್ನು ಜೈಲಿನಿಂದ ಹೊರ ತರುವ ಕೆಲಸದಲ್ಲಿ ಅಡಗಿದೆ. ಕಾಡಿನಿಂದ ಹೊರ ಕರೆತುವಲ್ಲಿ ನಾಗರಿಕ ವೇದಿಕೆ ಪ್ರಧಾನ ಪಾತ್ರವಹಿಸಿತ್ತು. ಆದರೆ, ಅವರನ್ನು ಜೈಲಿನಿಂದ ಹೊರತರುವ ಜವಾಬ್ದಾರಿಯನ್ನು ಸರ್ಕಾರ ನಿರ್ವಹಿಸಬೇಕಿದೆ. ಸರ್ಕಾರ ಕೊಟ್ಟ ಮಾತಿನಂತೆ ಅವರಿಗೆ ಕನಿಷ್ಠ ಜಾಮೀನು ಸಿಗುವಂತೆ ಮಾಡುವುದೇ ಎಂಬ ಪ್ರಶ್ನೆ ಇದೆ. ಅದನ್ನು ಮಾಡಿದಾಗ ಮಾತ್ರವೇ ಈ ಸಮಸ್ಯೆ ಮುಕ್ತಾಯದ ಬೆಳಕು ಮೂಡಿದಂತಾಗುತ್ತದೆ ಎಂದು ಹೇಳಿದರು.

ವೇದಿಕೆಯು ಸರ್ಕಾರದ ಮುಂದೆ ಈ ಕೆಳಗಿನ ಬೇಡಿಕೆಗಳನ್ನು ಇಟ್ಟಿದೆ. ಕೊಟ್ಟ ಮಾತಿನಂತೆ ಇವುಗಳನ್ನು ಈಡೇರಿಸಲು ಆಗ್ರಹಿಸಿದೆ. 

  • ಈಗ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಬಂದಿರುವ 6 ಜನ ನಕ್ಸಲಿಯರಿಗೆ ಜಾಮೀನಿನ ಮೇಲೆ ಬಿಡುಗಡೆಯಾಗಲು ಮತ್ತು ವಿಚಾರಣೆಯನ್ನು ಸಮರ್ಥವಾಗಿ ಪೂರೈಸಿಕೊಳ್ಳಲು ಸೂಕ್ತ ಕಾನೂನು ನೆರವಿನ ವ್ಯವಸ್ಥೆ ಆಗಬೇಕು.
  • 7-8ವರ್ಷಗಳಿಂದ ಜೈಲಿನಲ್ಲಿ ನರಳುತ್ತಿರುವ ಕನ್ಯಾಕುಮಾರಿ ಮತ್ತು ಇತರರ ಮೊಕದ್ದಮೆಗಳು ಕೂಡಲೇ ಬಗೆಹರಿದು ಹೊರಬರಲು ಸಂಪೂರ್ಣ ಸಹಕಾರ ನೀಡಬೇಕು.
  • ಕರ್ನಾಟಕ ಸರ್ಕಾರ ಅಧಿಕೃತವಾಗಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ಪತ್ರ ಬರೆದು ಅವರ ಕಡೆಯಿಂದಲೂ ಮಾಜಿ ನಕ್ಸಲರನ್ನು ಜೈಲಿನಿಂದ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆಗೆ ಸಹಕಾರ ದೊರಕಿಸಿಕೊಳ್ಳಬೇಕು.
  • ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮಾಜಿ ನಕ್ಸಲಿಯರನ್ನು ಕರೆಸಿ ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು.
  • ಈಗ ಬಡಜನರ ಬದುಕಿಗೆ ಸಂಬಂಧಪಟ್ಟ 18 ಹಕೊತ್ತಾಯಗಳನ್ನು ಸವಿಸ್ತಾರವಾಗಿ ಚರ್ಚೆಮಾಡಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳಿಗೆ ಚಾಲನೆ ಪಡೆಯಬೇಕು. ಇದಕ್ಕಾಗಿ ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ವಿಶೇಷ ಸಭೆಗಳನ್ನು ಕರೆದು, ಚರ್ಚಿಸಿ, ಅಗತ್ಯ ಕ್ರಮಗಳ ಪ್ರಕ್ರಿಯೆ ಪ್ರಾರಂಭಿಸಬೇಕು.
  • ವಿಕ್ರಂ ಗೌಡ ಹತ್ಯಾ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು.

ಜನವರಿ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎಲ್ಲಾ ಸವಾಲುಗಳನ್ನು ಮತ್ತು ಪರಿಹಾರ ಕ್ರಮಗಳನ್ನು ಅವರ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಕೂಡ ಅಗತ್ಯ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಈ ಎಲ್ಲಾ ವಿಚಾರಗಳ ಸುತ್ತ ಚುರುಕು ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದೇವೆ. ಆದರೆ, ಆಳವಾದ ಆತಂಕವಂತೂ ಇದ್ದೇ ಇದೆ ಎಂದು ವೇದಿಕೆ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯ ಪ್ರಮುಖರಾದ ವಿ.ಎಸ್‌.ಶ್ರೀಧರ್, ನಗರಗೆರೆ ರಮೇಶ್, ಎನ್‌.ವೆಂಕಟೇಶ್, ವಿಜಯಮ್ಮ, ನೂರ್ ಶ್ರೀಧರ್ ಮತ್ತು ತಾರಾ ರಾವ್ ಇದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...