Homeಮುಖಪುಟನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

- Advertisement -
- Advertisement -

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು ಎಂದು ಆರು ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ ‘ಶಾಂತಿಗಾಗಿ ನಾಗರಿಕ ವೇದಿಕೆ’ ಆಗ್ರಹಿಸಿತು.

ಬೆಂಗಳೂರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರಾದ ಬಿ.ಟಿ ಲಲಿತಾ ನಾಯಕ್ “ನಕ್ಸಲ್ ಸಮಸ್ಯೆ ಮುಕ್ತಾಯ, ಮುಕ್ತಾಯ ಎಂಬ ಮಾತುಗಳು ಬಹಳ ಕೇಳುತ್ತಿವೆ. ಈ ವಿದ್ಯಮಾನದಿಂದಾಗಿ ನಕ್ಸಲಿಯ ಮಾದರಿಯ ಹೋರಾಟ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದು ರೀತಿಯಲ್ಲಿ ಸಮಾರೋಪಗೊಂಡಿರುವುದು ವಾಸ್ತವ. ಆದರೆ, ನಕ್ಸಲಿಯರ ಸಮಸ್ಯೆಗಳು ಮುಕ್ತಾಯಗೊಂಡಿಲ್ಲ. ನಕ್ಸಲರು ಎತ್ತಿರುವ ಮಲೆನಾಡಿನ ಜನರ ಬದುಕಿನ ಸಮಸ್ಯೆಗಳಾವುವೂ ಪರಿಹಾರ ದಿಕ್ಕಿನತ್ತ ಮುಖಮಾಡಿಲ್ಲ ಎಂದು ಹೇಳಿದರು.

ನಕ್ಸಲಿಯರನ್ನು ಮುಖ್ಯವಾಹಿನಿಗೆ ಬರಮಾಡಿಕೊಳ್ಳುವುದರಲ್ಲಿನ ಮೊದಲ ಘಟ್ಟ ಮಾತ್ರ ಪೂರ್ಣಗೊಂಡಿದೆ. ಅವರನ್ನು ಕಾಡಿನಿಂದ ಹೊರತರಲಾಗಿದೆ. ಆದರೆ, ಅವರಿನ್ನು ನಾಡಿಗೆ ತಲುಪಿಲ್ಲ, ಜೈಲಿಗೆ ಹೋಗಿದ್ದಾರೆ. ಅನೇಕ ಗಂಭೀರ ಆರೋಪಗಳಡಿ ಕೇಸುಗಳನ್ನು ಎದುರಿಸಬೇಕಿದೆ. ಮುಂಡಗಾರು ಲತಾ ಒಬ್ಬರ ಮೇಲೆಯೇ 84 ಪ್ರಕರಣಗಳಿವೆ. ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ದೊಡ್ಡ ಪ್ರಮಾಣದಲ್ಲಿ ಕೇಸುಗಳಿವೆ. ಮೊದಲು ಅವರಿಗೆ ಈ ಎಲ್ಲಾ ಕೇಸುಗಳಲ್ಲಿ ಜಾಮೀನು ಸಿಗಬೇಕು. ಆಮೇಲೆ ಇವೆಲ್ಲವುಗಳ ಕುರಿತು ಕುರಿತು ವಿಚಾರಣೆ ನಡೆದು ಇತ್ಯರ್ಥಗೊಳ್ಳಬೇಕು ಎಂದು ತಿಳಿಸಿದರು.

ನಕ್ಸಲರನ್ನು ಕಾಡಿನಿಂದ ಹೊರತಂದಿದ್ದಕ್ಕಿಂತಲೂ ಹೆಚ್ಚಿನ ಕಷ್ಟ ಅವರನ್ನು ಜೈಲಿನಿಂದ ಹೊರ ತರುವ ಕೆಲಸದಲ್ಲಿ ಅಡಗಿದೆ. ಕಾಡಿನಿಂದ ಹೊರ ಕರೆತುವಲ್ಲಿ ನಾಗರಿಕ ವೇದಿಕೆ ಪ್ರಧಾನ ಪಾತ್ರವಹಿಸಿತ್ತು. ಆದರೆ, ಅವರನ್ನು ಜೈಲಿನಿಂದ ಹೊರತರುವ ಜವಾಬ್ದಾರಿಯನ್ನು ಸರ್ಕಾರ ನಿರ್ವಹಿಸಬೇಕಿದೆ. ಸರ್ಕಾರ ಕೊಟ್ಟ ಮಾತಿನಂತೆ ಅವರಿಗೆ ಕನಿಷ್ಠ ಜಾಮೀನು ಸಿಗುವಂತೆ ಮಾಡುವುದೇ ಎಂಬ ಪ್ರಶ್ನೆ ಇದೆ. ಅದನ್ನು ಮಾಡಿದಾಗ ಮಾತ್ರವೇ ಈ ಸಮಸ್ಯೆ ಮುಕ್ತಾಯದ ಬೆಳಕು ಮೂಡಿದಂತಾಗುತ್ತದೆ ಎಂದು ಹೇಳಿದರು.

ವೇದಿಕೆಯು ಸರ್ಕಾರದ ಮುಂದೆ ಈ ಕೆಳಗಿನ ಬೇಡಿಕೆಗಳನ್ನು ಇಟ್ಟಿದೆ. ಕೊಟ್ಟ ಮಾತಿನಂತೆ ಇವುಗಳನ್ನು ಈಡೇರಿಸಲು ಆಗ್ರಹಿಸಿದೆ. 

  • ಈಗ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಬಂದಿರುವ 6 ಜನ ನಕ್ಸಲಿಯರಿಗೆ ಜಾಮೀನಿನ ಮೇಲೆ ಬಿಡುಗಡೆಯಾಗಲು ಮತ್ತು ವಿಚಾರಣೆಯನ್ನು ಸಮರ್ಥವಾಗಿ ಪೂರೈಸಿಕೊಳ್ಳಲು ಸೂಕ್ತ ಕಾನೂನು ನೆರವಿನ ವ್ಯವಸ್ಥೆ ಆಗಬೇಕು.
  • 7-8ವರ್ಷಗಳಿಂದ ಜೈಲಿನಲ್ಲಿ ನರಳುತ್ತಿರುವ ಕನ್ಯಾಕುಮಾರಿ ಮತ್ತು ಇತರರ ಮೊಕದ್ದಮೆಗಳು ಕೂಡಲೇ ಬಗೆಹರಿದು ಹೊರಬರಲು ಸಂಪೂರ್ಣ ಸಹಕಾರ ನೀಡಬೇಕು.
  • ಕರ್ನಾಟಕ ಸರ್ಕಾರ ಅಧಿಕೃತವಾಗಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ಪತ್ರ ಬರೆದು ಅವರ ಕಡೆಯಿಂದಲೂ ಮಾಜಿ ನಕ್ಸಲರನ್ನು ಜೈಲಿನಿಂದ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆಗೆ ಸಹಕಾರ ದೊರಕಿಸಿಕೊಳ್ಳಬೇಕು.
  • ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮಾಜಿ ನಕ್ಸಲಿಯರನ್ನು ಕರೆಸಿ ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು.
  • ಈಗ ಬಡಜನರ ಬದುಕಿಗೆ ಸಂಬಂಧಪಟ್ಟ 18 ಹಕೊತ್ತಾಯಗಳನ್ನು ಸವಿಸ್ತಾರವಾಗಿ ಚರ್ಚೆಮಾಡಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳಿಗೆ ಚಾಲನೆ ಪಡೆಯಬೇಕು. ಇದಕ್ಕಾಗಿ ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ವಿಶೇಷ ಸಭೆಗಳನ್ನು ಕರೆದು, ಚರ್ಚಿಸಿ, ಅಗತ್ಯ ಕ್ರಮಗಳ ಪ್ರಕ್ರಿಯೆ ಪ್ರಾರಂಭಿಸಬೇಕು.
  • ವಿಕ್ರಂ ಗೌಡ ಹತ್ಯಾ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು.

ಜನವರಿ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎಲ್ಲಾ ಸವಾಲುಗಳನ್ನು ಮತ್ತು ಪರಿಹಾರ ಕ್ರಮಗಳನ್ನು ಅವರ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಕೂಡ ಅಗತ್ಯ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಈ ಎಲ್ಲಾ ವಿಚಾರಗಳ ಸುತ್ತ ಚುರುಕು ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದೇವೆ. ಆದರೆ, ಆಳವಾದ ಆತಂಕವಂತೂ ಇದ್ದೇ ಇದೆ ಎಂದು ವೇದಿಕೆ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯ ಪ್ರಮುಖರಾದ ವಿ.ಎಸ್‌.ಶ್ರೀಧರ್, ನಗರಗೆರೆ ರಮೇಶ್, ಎನ್‌.ವೆಂಕಟೇಶ್, ವಿಜಯಮ್ಮ, ನೂರ್ ಶ್ರೀಧರ್ ಮತ್ತು ತಾರಾ ರಾವ್ ಇದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...