Homeಮುಖಪುಟನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

- Advertisement -
- Advertisement -

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು ಎಂದು ಆರು ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ ‘ಶಾಂತಿಗಾಗಿ ನಾಗರಿಕ ವೇದಿಕೆ’ ಆಗ್ರಹಿಸಿತು.

ಬೆಂಗಳೂರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರಾದ ಬಿ.ಟಿ ಲಲಿತಾ ನಾಯಕ್ “ನಕ್ಸಲ್ ಸಮಸ್ಯೆ ಮುಕ್ತಾಯ, ಮುಕ್ತಾಯ ಎಂಬ ಮಾತುಗಳು ಬಹಳ ಕೇಳುತ್ತಿವೆ. ಈ ವಿದ್ಯಮಾನದಿಂದಾಗಿ ನಕ್ಸಲಿಯ ಮಾದರಿಯ ಹೋರಾಟ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದು ರೀತಿಯಲ್ಲಿ ಸಮಾರೋಪಗೊಂಡಿರುವುದು ವಾಸ್ತವ. ಆದರೆ, ನಕ್ಸಲಿಯರ ಸಮಸ್ಯೆಗಳು ಮುಕ್ತಾಯಗೊಂಡಿಲ್ಲ. ನಕ್ಸಲರು ಎತ್ತಿರುವ ಮಲೆನಾಡಿನ ಜನರ ಬದುಕಿನ ಸಮಸ್ಯೆಗಳಾವುವೂ ಪರಿಹಾರ ದಿಕ್ಕಿನತ್ತ ಮುಖಮಾಡಿಲ್ಲ ಎಂದು ಹೇಳಿದರು.

ನಕ್ಸಲಿಯರನ್ನು ಮುಖ್ಯವಾಹಿನಿಗೆ ಬರಮಾಡಿಕೊಳ್ಳುವುದರಲ್ಲಿನ ಮೊದಲ ಘಟ್ಟ ಮಾತ್ರ ಪೂರ್ಣಗೊಂಡಿದೆ. ಅವರನ್ನು ಕಾಡಿನಿಂದ ಹೊರತರಲಾಗಿದೆ. ಆದರೆ, ಅವರಿನ್ನು ನಾಡಿಗೆ ತಲುಪಿಲ್ಲ, ಜೈಲಿಗೆ ಹೋಗಿದ್ದಾರೆ. ಅನೇಕ ಗಂಭೀರ ಆರೋಪಗಳಡಿ ಕೇಸುಗಳನ್ನು ಎದುರಿಸಬೇಕಿದೆ. ಮುಂಡಗಾರು ಲತಾ ಒಬ್ಬರ ಮೇಲೆಯೇ 84 ಪ್ರಕರಣಗಳಿವೆ. ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ದೊಡ್ಡ ಪ್ರಮಾಣದಲ್ಲಿ ಕೇಸುಗಳಿವೆ. ಮೊದಲು ಅವರಿಗೆ ಈ ಎಲ್ಲಾ ಕೇಸುಗಳಲ್ಲಿ ಜಾಮೀನು ಸಿಗಬೇಕು. ಆಮೇಲೆ ಇವೆಲ್ಲವುಗಳ ಕುರಿತು ಕುರಿತು ವಿಚಾರಣೆ ನಡೆದು ಇತ್ಯರ್ಥಗೊಳ್ಳಬೇಕು ಎಂದು ತಿಳಿಸಿದರು.

ನಕ್ಸಲರನ್ನು ಕಾಡಿನಿಂದ ಹೊರತಂದಿದ್ದಕ್ಕಿಂತಲೂ ಹೆಚ್ಚಿನ ಕಷ್ಟ ಅವರನ್ನು ಜೈಲಿನಿಂದ ಹೊರ ತರುವ ಕೆಲಸದಲ್ಲಿ ಅಡಗಿದೆ. ಕಾಡಿನಿಂದ ಹೊರ ಕರೆತುವಲ್ಲಿ ನಾಗರಿಕ ವೇದಿಕೆ ಪ್ರಧಾನ ಪಾತ್ರವಹಿಸಿತ್ತು. ಆದರೆ, ಅವರನ್ನು ಜೈಲಿನಿಂದ ಹೊರತರುವ ಜವಾಬ್ದಾರಿಯನ್ನು ಸರ್ಕಾರ ನಿರ್ವಹಿಸಬೇಕಿದೆ. ಸರ್ಕಾರ ಕೊಟ್ಟ ಮಾತಿನಂತೆ ಅವರಿಗೆ ಕನಿಷ್ಠ ಜಾಮೀನು ಸಿಗುವಂತೆ ಮಾಡುವುದೇ ಎಂಬ ಪ್ರಶ್ನೆ ಇದೆ. ಅದನ್ನು ಮಾಡಿದಾಗ ಮಾತ್ರವೇ ಈ ಸಮಸ್ಯೆ ಮುಕ್ತಾಯದ ಬೆಳಕು ಮೂಡಿದಂತಾಗುತ್ತದೆ ಎಂದು ಹೇಳಿದರು.

ವೇದಿಕೆಯು ಸರ್ಕಾರದ ಮುಂದೆ ಈ ಕೆಳಗಿನ ಬೇಡಿಕೆಗಳನ್ನು ಇಟ್ಟಿದೆ. ಕೊಟ್ಟ ಮಾತಿನಂತೆ ಇವುಗಳನ್ನು ಈಡೇರಿಸಲು ಆಗ್ರಹಿಸಿದೆ. 

  • ಈಗ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಬಂದಿರುವ 6 ಜನ ನಕ್ಸಲಿಯರಿಗೆ ಜಾಮೀನಿನ ಮೇಲೆ ಬಿಡುಗಡೆಯಾಗಲು ಮತ್ತು ವಿಚಾರಣೆಯನ್ನು ಸಮರ್ಥವಾಗಿ ಪೂರೈಸಿಕೊಳ್ಳಲು ಸೂಕ್ತ ಕಾನೂನು ನೆರವಿನ ವ್ಯವಸ್ಥೆ ಆಗಬೇಕು.
  • 7-8ವರ್ಷಗಳಿಂದ ಜೈಲಿನಲ್ಲಿ ನರಳುತ್ತಿರುವ ಕನ್ಯಾಕುಮಾರಿ ಮತ್ತು ಇತರರ ಮೊಕದ್ದಮೆಗಳು ಕೂಡಲೇ ಬಗೆಹರಿದು ಹೊರಬರಲು ಸಂಪೂರ್ಣ ಸಹಕಾರ ನೀಡಬೇಕು.
  • ಕರ್ನಾಟಕ ಸರ್ಕಾರ ಅಧಿಕೃತವಾಗಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ಪತ್ರ ಬರೆದು ಅವರ ಕಡೆಯಿಂದಲೂ ಮಾಜಿ ನಕ್ಸಲರನ್ನು ಜೈಲಿನಿಂದ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆಗೆ ಸಹಕಾರ ದೊರಕಿಸಿಕೊಳ್ಳಬೇಕು.
  • ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮಾಜಿ ನಕ್ಸಲಿಯರನ್ನು ಕರೆಸಿ ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು.
  • ಈಗ ಬಡಜನರ ಬದುಕಿಗೆ ಸಂಬಂಧಪಟ್ಟ 18 ಹಕೊತ್ತಾಯಗಳನ್ನು ಸವಿಸ್ತಾರವಾಗಿ ಚರ್ಚೆಮಾಡಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳಿಗೆ ಚಾಲನೆ ಪಡೆಯಬೇಕು. ಇದಕ್ಕಾಗಿ ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ವಿಶೇಷ ಸಭೆಗಳನ್ನು ಕರೆದು, ಚರ್ಚಿಸಿ, ಅಗತ್ಯ ಕ್ರಮಗಳ ಪ್ರಕ್ರಿಯೆ ಪ್ರಾರಂಭಿಸಬೇಕು.
  • ವಿಕ್ರಂ ಗೌಡ ಹತ್ಯಾ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು.

ಜನವರಿ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎಲ್ಲಾ ಸವಾಲುಗಳನ್ನು ಮತ್ತು ಪರಿಹಾರ ಕ್ರಮಗಳನ್ನು ಅವರ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಕೂಡ ಅಗತ್ಯ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಈ ಎಲ್ಲಾ ವಿಚಾರಗಳ ಸುತ್ತ ಚುರುಕು ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದೇವೆ. ಆದರೆ, ಆಳವಾದ ಆತಂಕವಂತೂ ಇದ್ದೇ ಇದೆ ಎಂದು ವೇದಿಕೆ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯ ಪ್ರಮುಖರಾದ ವಿ.ಎಸ್‌.ಶ್ರೀಧರ್, ನಗರಗೆರೆ ರಮೇಶ್, ಎನ್‌.ವೆಂಕಟೇಶ್, ವಿಜಯಮ್ಮ, ನೂರ್ ಶ್ರೀಧರ್ ಮತ್ತು ತಾರಾ ರಾವ್ ಇದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...