Homeಮುಖಪುಟಬ್ರಿಟನ್: ನಶೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಆರು ವರ್ಷಗಳ...

ಬ್ರಿಟನ್: ನಶೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಆರು ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಬ್ರಿಟನ್‌ನಲ್ಲಿ ಬಂಧಿಸಲಾಗಿದೆ ಎಂದು ಬಿಬಿಸಿ ಶನಿವಾರ ವರದಿ ಮಾಡಿದೆ.

20 ವರ್ಷದ ಪ್ರೀತ್ ವಿಕಲ್ ಆರೋಪಿ ಎಂದು ಗುರುತಿಸಲಾಗಿದ್ದು, ಯುವ ಅಪರಾಧಿಗಳ ಸಂಸ್ಥೆಯಲ್ಲಿ ಆರು ವರ್ಷ ಒಂಬತ್ತು ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ಪ್ರೀತ್ ಮತ್ತು ಮಹಿಳೆ ಪ್ರತ್ಯೇಕ ಸ್ನೇಹಿತರ ಗುಂಪುಗಳೊಂದಿಗೆ ಕಾರ್ಡಿಫ್‌ನಲ್ಲಿ ರಾತ್ರಿಯ ವಿಹಾರಕ್ಕೆ ಹೋಗಿದ್ದರು, ಅಲ್ಲಿ ಅವರು ಪರಸ್ಪರ ಭೇಟಿಯಾದರು.

”ಸಂತ್ರಸ್ತ ಮಹಿಳೆ ಮಿತಿಮೀರಿ ಕುಡಿದಿದ್ದರು ಮತ್ತು ರಾತ್ರಿಯ ಅಂತ್ಯದ ವೇಳೆಗೆ ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಮಹಿಳೆಯು ಕ್ಲಬ್‌ನ ಹೊರಗೆ ಹೊರಟಿದ್ದಳು ಆಗ ಪ್ರೀತ್ ವಿಕಲ್‌ನನ್ನು ೆದುರಾದರು. ಇಬ್ಬರು ಸಂಭಾಷಣೆಯಲ್ಲಿ ತೊಡಗಿದ್ದರು ಮತ್ತು ಅವರ ಗುಂಪುಗಳಿಂದ ದೂರ ಇದ್ದರು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಸಂತ್ರಸ್ತ ಮಹಿಳೆ ಅತಿಯಾಗಿ ಕುಡಿದಿದ್ದರು ಮತ್ತು ರಾತ್ರಿಯ ವೇಳೆಗೆ ಸಂಪೂರ್ಣವಾಗಿ ನಶೆಯಲ್ಲಿದ್ದರು” ಎಂದು ಅಪರಿಚಿತ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಸಿಸಿ ಟಿವಿ ದೃಶ್ಯಾವಳಿ ಪ್ರಕಾರ, ”ಮಹಿಳೆಯು ಕ್ಲಬ್‌ನ ಹೊರಗೆ ಹೊರಟಿದ್ದಳು ಆಗ ಪ್ರೀತ್ ವಿಕಲ್‌ ಎದುರಾರದರು. ಇಬ್ಬರೂ ಸಂಭಾಷಣೆಯಲ್ಲಿ ತೊಡಗಿದರು ಮತ್ತು ಅವರ ಗುಂಪುಗಳಿಂದ ದೂರ ಹೋದರು. ಆ ಬಳಿಕ ವಿಕಲ್ ಮಹಿಳೆಯನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ತನ್ನ ನಿವಾಸಕ್ಕೆ ಹೋಗಿರುವ ದೃಶ್ಯ ಸೆರೆಯಾಗಿದೆ. ಅಲ್ಲಿ ಅವನು ಅವಳ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಮಹಿಳೆಯ ಭಾವಚಿತ್ರ ತೆಗೆದು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ’.

ಈ ಬಗ್ಗೆ ಟ್ವೀಟ್ ಮಾಡಿರುವ ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್, ”ಕಾರ್ಡಿಫ್‌ನಲ್ಲಿರುವ ನಿವಾಸದ ಸಭಾಂಗಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಜೈಲಿಗೆ ಹಾಕಲಾಗಿದೆ. ಪ್ರೀತ್ ವಿಕಲ್ ಮಹಿಳೆಯನ್ನು ತನ್ನ ತೋಳುಗಳಲ್ಲಿ ಮತ್ತು ನಂತರ ತನ್ನ ಭುಜದ ಮೇಲೆ ಹೊತ್ತುಕೊಂಡು ಸಿಟಿ ಸೆಂಟರ್‌ನಿಂದ ಹೊರಕ್ಕೆ ಸಾಗಿಸುತ್ತಿರುವುದನ್ನು ಸಿಸಿಟಿವಿ ತೋರಿಸಿದೆ” ಎಂದು ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್ ಟ್ವೀಟ್ ಮಾಡಿದೆ.

“ಕಾರ್ಡಿಫ್‌ನಲ್ಲಿ ಇಂತಹ ದಾಳಿಗಳು ಅತ್ಯಂತ ಅಸಾಮಾನ್ಯವಾಗಿವೆ. ಪ್ರೀತ್ ವಿಕಾಲ್‌ನಂತಹ ಅಪಾಯಕಾರಿ ವ್ಯಕ್ತಿ ಇದ್ದಿದ್ದರಿಂದ ಈ ಘಟನೆ ನಡೆದಿದೆ. ಪ್ರೀತ್ ವಿಕಾಲ್‌ ತನ್ನ ಸ್ನೇಹಿತರಿಂದ ದೂರ ಉಳಿದು, ನಶೆಯಲ್ಲಿದ್ದ ಯುವತಿಯ ಲಾಭವನ್ನು ಪಡೆದರು” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಿಳೆಯನ್ನು ಮನೆಗೆ ಕರೆದೊಯ್ದ ನಂತರ ಪ್ರೀತ್ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ ಎಂದು ವರದಿಗಳು ತಿಳಿಸಿವೆ.

ಮಹಿಳೆ ಧೈರ್ಯದಿಂದ ನಡೆದ ಘಟನೆಯ ವಿವರವನ್ನು ಅಧಿಕಾರಿಗಳಿಗೆ ನೀಡಿದರು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮಹಿಳೆಯೊಂದಿಗೆ Instagram ಸಂದೇಶ ವಿನಿಮಯವು ಪೊಲೀಸರಿಗೆ ಪ್ರೀತ್ ವಿಕಲ್ ಅನ್ನು ಗುರುತಿಸಲು ಸಹಾಯ ಮಾಡಿತು.

ಇದನ್ನೂ ಓದಿ: ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...