Homeಮುಖಪುಟಬ್ರಿಟನ್: ನಶೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಆರು ವರ್ಷಗಳ...

ಬ್ರಿಟನ್: ನಶೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಆರು ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಬ್ರಿಟನ್‌ನಲ್ಲಿ ಬಂಧಿಸಲಾಗಿದೆ ಎಂದು ಬಿಬಿಸಿ ಶನಿವಾರ ವರದಿ ಮಾಡಿದೆ.

20 ವರ್ಷದ ಪ್ರೀತ್ ವಿಕಲ್ ಆರೋಪಿ ಎಂದು ಗುರುತಿಸಲಾಗಿದ್ದು, ಯುವ ಅಪರಾಧಿಗಳ ಸಂಸ್ಥೆಯಲ್ಲಿ ಆರು ವರ್ಷ ಒಂಬತ್ತು ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ಪ್ರೀತ್ ಮತ್ತು ಮಹಿಳೆ ಪ್ರತ್ಯೇಕ ಸ್ನೇಹಿತರ ಗುಂಪುಗಳೊಂದಿಗೆ ಕಾರ್ಡಿಫ್‌ನಲ್ಲಿ ರಾತ್ರಿಯ ವಿಹಾರಕ್ಕೆ ಹೋಗಿದ್ದರು, ಅಲ್ಲಿ ಅವರು ಪರಸ್ಪರ ಭೇಟಿಯಾದರು.

”ಸಂತ್ರಸ್ತ ಮಹಿಳೆ ಮಿತಿಮೀರಿ ಕುಡಿದಿದ್ದರು ಮತ್ತು ರಾತ್ರಿಯ ಅಂತ್ಯದ ವೇಳೆಗೆ ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಮಹಿಳೆಯು ಕ್ಲಬ್‌ನ ಹೊರಗೆ ಹೊರಟಿದ್ದಳು ಆಗ ಪ್ರೀತ್ ವಿಕಲ್‌ನನ್ನು ೆದುರಾದರು. ಇಬ್ಬರು ಸಂಭಾಷಣೆಯಲ್ಲಿ ತೊಡಗಿದ್ದರು ಮತ್ತು ಅವರ ಗುಂಪುಗಳಿಂದ ದೂರ ಇದ್ದರು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಸಂತ್ರಸ್ತ ಮಹಿಳೆ ಅತಿಯಾಗಿ ಕುಡಿದಿದ್ದರು ಮತ್ತು ರಾತ್ರಿಯ ವೇಳೆಗೆ ಸಂಪೂರ್ಣವಾಗಿ ನಶೆಯಲ್ಲಿದ್ದರು” ಎಂದು ಅಪರಿಚಿತ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಸಿಸಿ ಟಿವಿ ದೃಶ್ಯಾವಳಿ ಪ್ರಕಾರ, ”ಮಹಿಳೆಯು ಕ್ಲಬ್‌ನ ಹೊರಗೆ ಹೊರಟಿದ್ದಳು ಆಗ ಪ್ರೀತ್ ವಿಕಲ್‌ ಎದುರಾರದರು. ಇಬ್ಬರೂ ಸಂಭಾಷಣೆಯಲ್ಲಿ ತೊಡಗಿದರು ಮತ್ತು ಅವರ ಗುಂಪುಗಳಿಂದ ದೂರ ಹೋದರು. ಆ ಬಳಿಕ ವಿಕಲ್ ಮಹಿಳೆಯನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ತನ್ನ ನಿವಾಸಕ್ಕೆ ಹೋಗಿರುವ ದೃಶ್ಯ ಸೆರೆಯಾಗಿದೆ. ಅಲ್ಲಿ ಅವನು ಅವಳ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಮಹಿಳೆಯ ಭಾವಚಿತ್ರ ತೆಗೆದು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ’.

ಈ ಬಗ್ಗೆ ಟ್ವೀಟ್ ಮಾಡಿರುವ ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್, ”ಕಾರ್ಡಿಫ್‌ನಲ್ಲಿರುವ ನಿವಾಸದ ಸಭಾಂಗಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಜೈಲಿಗೆ ಹಾಕಲಾಗಿದೆ. ಪ್ರೀತ್ ವಿಕಲ್ ಮಹಿಳೆಯನ್ನು ತನ್ನ ತೋಳುಗಳಲ್ಲಿ ಮತ್ತು ನಂತರ ತನ್ನ ಭುಜದ ಮೇಲೆ ಹೊತ್ತುಕೊಂಡು ಸಿಟಿ ಸೆಂಟರ್‌ನಿಂದ ಹೊರಕ್ಕೆ ಸಾಗಿಸುತ್ತಿರುವುದನ್ನು ಸಿಸಿಟಿವಿ ತೋರಿಸಿದೆ” ಎಂದು ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್ ಟ್ವೀಟ್ ಮಾಡಿದೆ.

“ಕಾರ್ಡಿಫ್‌ನಲ್ಲಿ ಇಂತಹ ದಾಳಿಗಳು ಅತ್ಯಂತ ಅಸಾಮಾನ್ಯವಾಗಿವೆ. ಪ್ರೀತ್ ವಿಕಾಲ್‌ನಂತಹ ಅಪಾಯಕಾರಿ ವ್ಯಕ್ತಿ ಇದ್ದಿದ್ದರಿಂದ ಈ ಘಟನೆ ನಡೆದಿದೆ. ಪ್ರೀತ್ ವಿಕಾಲ್‌ ತನ್ನ ಸ್ನೇಹಿತರಿಂದ ದೂರ ಉಳಿದು, ನಶೆಯಲ್ಲಿದ್ದ ಯುವತಿಯ ಲಾಭವನ್ನು ಪಡೆದರು” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಿಳೆಯನ್ನು ಮನೆಗೆ ಕರೆದೊಯ್ದ ನಂತರ ಪ್ರೀತ್ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ ಎಂದು ವರದಿಗಳು ತಿಳಿಸಿವೆ.

ಮಹಿಳೆ ಧೈರ್ಯದಿಂದ ನಡೆದ ಘಟನೆಯ ವಿವರವನ್ನು ಅಧಿಕಾರಿಗಳಿಗೆ ನೀಡಿದರು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮಹಿಳೆಯೊಂದಿಗೆ Instagram ಸಂದೇಶ ವಿನಿಮಯವು ಪೊಲೀಸರಿಗೆ ಪ್ರೀತ್ ವಿಕಲ್ ಅನ್ನು ಗುರುತಿಸಲು ಸಹಾಯ ಮಾಡಿತು.

ಇದನ್ನೂ ಓದಿ: ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...