Homeಅಂಕಣಗಳುರಹಸ್ಯ ಭೇದಿಸಿ ಶೋಷಕರಿಗೆ ದಿಗಿಲು ಮೂಡಿಸಿದ್ದ ಅಸ್ಸಾಂಜ್ ಅವರ ವಿಕಿಲೀಕ್ಸ್

ರಹಸ್ಯ ಭೇದಿಸಿ ಶೋಷಕರಿಗೆ ದಿಗಿಲು ಮೂಡಿಸಿದ್ದ ಅಸ್ಸಾಂಜ್ ಅವರ ವಿಕಿಲೀಕ್ಸ್

- Advertisement -
- Advertisement -

ಅಸ್ಸಾಂಜ್ ಗಡಿಪಾರು ಮನವಿ ತಿರಸ್ಕೃತ

ಸದ್ಯಕ್ಕೆ ಬ್ರಿಟಿಷ್ ಪೊಲೀಸರ ವಶದಲ್ಲಿರುವ ಆಸ್ಟ್ರೇಲಿಯಾ ಮೂಲದ ಪತ್ರಕರ್ತ, ವಿಕಿಲೀಕ್ಸ್ ಸಂಸ್ಥಾಪಕ-ಸಂಪಾದಕ ಜೂಲಿಯನ್ ಅಸ್ಸಾಂಜ್ ಅವರ ಗಡಿಪಾರು ಮನವಿಯನ್ನು ಬ್ರಿಟನ್ ನ್ಯಾಯಲಯ ತಿರಸ್ಕರಿಸಿದೆ. ಅಮೆರಿಕದ ರಹಸ್ಯ ದಾಖಲೆಗಳನ್ನು ಬಯಲಿಗೆಳೆದ ಗೂಢಚರ್ಯೆ ಆರೋಪವನ್ನು ಎದುರಿಸುತ್ತಿರುವ ಅಸ್ಸಾಂಜ್ ಅವರು ಮಾಡಿದ ಪತ್ರಿಕೋದ್ಯಮ ಈ ಶತಮಾನದಲ್ಲಿ ಹಲವು ಕಾರಣಗಳಿಗೆ ಪ್ರಮುಖವಾದದ್ದು.

ಇಟಾಲಿಯನ್ ಚಿಂತಕ ದಿವಂಗತ ಅಂಬರ್ಟೋ ಇಕೋ ಅವರು ಗುರುತಿಸುವಂತೆ ಇತ್ತೀಚಿನವರೆಗೂ ಪ್ರಭುತ್ವಗಳು ಮಾತ್ರ ನಾಗರಿಕರ ಮೇಲೆ ಕಣ್ಗಾವಲು ಇರಿಸಬಹುದು ಅದರ ವಿರುದ್ಧದ ಪ್ರಕ್ರಿಯೆ ಸಾಧ್ಯವಿಲ್ಲ ಎಂಬ ನಂಬಿಕೆಯನ್ನು ಬುಡಮೇಲು ಮಾಡಿದ್ದು ವಿಕಿಲೀಕ್ಸ್‌ನ ದಾಖಲೆಗಳು ಮತ್ತು ಪತ್ರಿಕೋದ್ಯಮ. ಪ್ರಭುತ್ವದ ಕೆಲಸ ಕಾರ್ಯಗಳ ಮೇಲೆ, ರಹಸ್ಯಗಳ ಮೇಲೆ ನಾಗರಿಕರು ಕೂಡ ಕಣ್ಣಿಡಬಹುದು, ಎಲ್ಲ ನಾಗರಿಕರು ಅಲ್ಲದಿದ್ದರೂ ಅವರ ಪ್ರತಿನಿಧಿಯೊಬ್ಬ ಅದನ್ನು ಮಾಡಿ ಪ್ರಭುತ್ವದ ಕರಾಳತೆಯನ್ನು ಬಯಲಿಗೆಳೆಯಬಹುದು ಎಂದು ತೋರಿಸಿಕೊಟ್ಟಿದ್ದು ಅಸ್ಸಾಂಜ್ ಅವರ ಈ ಎಪಿಸೋಡ್.

ವಿಕಿಲೀಕ್ಸ್ ಹೆಚ್ಚು ಗಮನ ಹರಿಸಿದ್ದು ಮತ್ತು ಗುರಿಯಾಗಿಸಿಕೊಂಡಿದ್ದು ಅಂದಿನ ಅಮೆರಿಕ ಆಡಳಿತ ವ್ಯವಸ್ಥೆ ಮತ್ತು ಅದರ ಯುದ್ಧಪಿಪಾಸು ಸ್ವಭಾವದ ವಿರುದ್ಧ. ಅಮೆರಿಕ ಇರಾಕ್ ಮತ್ತು ಆಫ್ಘಾನಿಸ್ತಾನಗಳಲ್ಲಿ ನಡೆಸುತ್ತಿದ ಯುದ್ಧ ಕ್ರೌರ್ಯಗಳು, ಅಲ್ಲಿ ಆ ಪಡೆಗಳು ಸಾಮಾನ್ಯ ನಾಗರಿಕರ ವಿರುದ್ಧ ನಡೆಸಿದ ದೌರ್ಜನ್ಯಗಳು ಮತ್ತು ಸಾಮಾನ್ಯ ನಿಶ್ಯಸ್ತ್ರ ನಾಗರಿಕರನ್ನು ವಿಡಿಯೋ ಗೇಮ್ ಮಾದರಿಯಲ್ಲಿ ಕೊಂದ ಸಂಗತಿಗಳನ್ನು ವಿಕಿಲೀಕ್ಸ್ ಬಯಲು ಮಾಡಿದ್ದು ಮಾನವೀಯತೆ ಬಗ್ಗೆ ಎಚ್ಚರ ಉಳಿಸಿಕೊಂಡಿದ್ದ ಒಂದು ವಲಯಕ್ಕಾದರೂ ಬೆಚ್ಚಿ ಬೀಳಿಸಿತ್ತು. ಅಮೆರಿಕದ ಇಂತಹ ಕೃತ್ಯಗಳ ಬಗ್ಗೆ ಸಾಮಾನ್ಯ ನಂಬಿಕೆಯೊಂದು ಜನರಲ್ಲಿ ಮನೆಮಾಡಿತ್ತಾದರೂ, ಅದನ್ನು ದೃಢಪಡಿಸಿದ, ಅದಕ್ಕೆ ಪೂರಕ ದಾಖಲೆಗಳನ್ನು ನೀಡಿ ಸಾಬೀತುಪಡಿಸಿದ್ದ ಈ ಪತ್ರಿಕೋದ್ಯಮ ಪ್ರಭುತ್ವಗಳನ್ನು ಮೊಟ್ಟಮೊದಲ ಬಾರಿಗೆ ಈ ಮಟ್ಟದಲ್ಲಿ ಬೆಚ್ಚಿ ಬೀಳಿಸಿತ್ತು.

ವಿಕಿಲೀಕ್ಸ್ ಬಯಲು ಮಾಡಿದ ಒಂದು ಮಹತ್ವದ ಪ್ರಕರಣವನ್ನು ಇಲ್ಲಿ ನೆನಪಿಸಿಕೊಳ್ಳುವುದು ಉಚಿತವೆನಿಸುತ್ತದೆ. ಇರಾಕ್ ಮೇಲೆ ಅಮೆರಿಕ ಯುದ್ಧ ನಡೆಸುವ ಸಮಯದಲ್ಲಿ ನಡೆದ ಘಟನೆ ಅದು. ಜುಲೈ 2007ರಲ್ಲಿ ಜರುಗಿದ ಶೂಟಿಂಗ್ ಘಟನೆಯ ಒಂದು ವಿಡಿಯೋ ವಿಕಿಲೀಕ್ಸ್‌ನಲ್ಲಿ ಪ್ರಕಟಗೊಂಡ ಮೇಲೆ ಭಾರಿ ಸದ್ದು ಮಾಡಿತ್ತು. ಅಮೆರಿಕ ಯುದ್ಧ ವಿಮಾನದ ತಂಡ ಸುಳ್ಳು ಸುಳ್ಳೇ ಮಾಹಿತಿ ನೀಡಿ, ಸುಮಾರು 12 ಜನ ಅಮಾಯಕರನ್ನು ಗುಂಡಿಕ್ಕಿ ಕೊಲ್ಲುವ ಮತ್ತು ಹತ್ಯೆ ಮಾಡಿದ ಮೇಲೆ ವಾಯುಪಡೆಯ ಸೈನಿಕರು ಗಹಗಹಿಸಿ ನಗುತ್ತಾ ಮಾತನಾಡುವ ವಿಡಿಯೋ ಇದಾಗಿತ್ತು. ಈ ಶೂಟಿಂಗ್‌ನಲ್ಲಿ ರಾಯ್ಟರ್ಸ್ ಸುದ್ದಿ ಸಂಸ್ಥೆಯ 22 ವರ್ಷದ ಫೋಟೋ ಜರ್ನಲಿಸ್ಟ್ ನಮೀರ್ ನೂರ್-ಎಲ್ದೀನ್ ಮತ್ತು ಅವರ ಚಾಲಕ 40 ವರ್ಷದ ಸಯೀದ್ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಘಟನೆಯ ವಿಡಿಯೋ ಕೋರಿ ಪೆಂಟಗನ್‌ಗೆ ರಾಯ್ಟರ್ಸ್ ಮಾಡಿದ ಮನವಿಯನ್ನು ತಿರಸ್ಕರಿಸಿದ್ದ ಅಮೆರಿಕ ಸರ್ಕಾರ ಅಲ್ಲಿ ನಡೆದಿದ್ದ ಹತ್ಯೆಗಳನ್ನು ಸಮರ್ಥಿಸಿಕೊಂಡಿತ್ತು. ಆದರೆ ಮಿಲಿಟರಿ ಎನ್ಕ್ರಿಪ್ಶನ್ ಮುರಿದು ಈ ವಿಡಿಯೋವನ್ನು ವಿಕಿಲೀಕ್ಸ್ ಪ್ರಕಟ ಮಾಡಿದ ಮೇಲೆ ಅಮೆರಿಕ ಸರ್ಕಾರದ ಧೂರ್ತತನ ಬಟಾಬಯಲಾಗಿತ್ತು. ಇದರ ಪ್ರಕಟಣೆ ಅಮೆರಿಕವನ್ನು ಅತಿಹೆಚ್ಚು ಕೆರಳಿಸಿತು. ಏಕವ್ಯಕ್ತಿ ಅಸ್ಸಾಂಜ್ ವಿರುದ್ಧ ಯುದ್ಧ ಹೂಡಿ ಅವರನ್ನು ಬಂಧಿಸಲು ಅಮೆರಿಕ ಇವತ್ತಿಗೂ ಹವಣಿಸುತ್ತಲೇ ಇದೆ. ಹಲವು ವರ್ಷಗಳ ಕಾಲ ತಲೆಮರೆಸಿಕೊಂಡು ನಂತರ 2012ರಿಂದ ಬ್ರಿಟನ್‌ನ ಈಕ್ವೆಡಾರ್ ರಾಯಭಾರ ಕಚೇರಿಯಲ್ಲಿ ಅಸ್ಸಾಂಜ್ ಆಶ್ರಯ ಪಡೆದಿದ್ದರು.

ಈ ರಾಜಕೀಯ ಆಶ್ರಯವನ್ನು ಈಕ್ವೆಡಾರ್ ಹಿಂತೆಗೆದುಕೊಂಡ ನಂತರ, ಅವರನ್ನು ಬ್ರಿಟಿಷ್ ಪೊಲೀಸರು ಜಾಮೀನು ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಬಂಧಿಸಿದ್ದರು. ಈಗ ಅಮೆರಿಕದ ಜೈಲುಗಳಲ್ಲಿ ಸುರಕ್ಷತೆಯ ಕೊರತೆಯ ಕಾರಣದಿಂದಾಗಿ ಗಡಿಪಾರು ಮನವಿ ತಿರಸ್ಕೃತವಾಗಿರುವ ಹಿನ್ನೆಲೆಯಲ್ಲಿ ಅಸ್ಸಾಂಜ್ ತಮ್ಮನ್ನು ಸ್ವತಂತ್ರಗೊಳಿಸಲು ಅರ್ಜಿ ಹಾಕಲಿದ್ದಾರೆ ಎನ್ನಲಾಗಿದೆ.

ಭಾರತದ ಮಟ್ಟಿಗೂ ಈ ವಿಕಿಲೀಕ್ಸ್ ಹಲವು ವಿಷಯಗಳನ್ನು ಹೊರಹಾಕಿತ್ತು. ರಾಯಭಾರಿ ಕಚೇರಿ ಎಂದರೆ ರಾಜತಾಂತ್ರಿಕ ಸಂಬಂಧಗಳಿಗಾಗಿ ಇರುವುದಲ್ಲ, ಬದಲಾಗಿ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅಮೆರಿಕದ ಸರ್ಕಾರಕ್ಕೆ ವರದಿ ಮಾಡುವ, ಇಲ್ಲಿ ಔತಣಕೂಟಗಳನ್ನು ಏರ್ಪಡಿಸಿ ಮುಖಂಡರ ಮಾತುಗಳನ್ನು ಕದ್ದಾಲಿಸುವ, ಅವುಗಳನ್ನು ವಾಪಸ್ ತಮ್ಮ ದೇಶಕ್ಕೆ ವರದಿ ಮಾಡುವ, ಇಲ್ಲಿನ ಯೋಜನೆಗಳ ಮೇಲೆ ಹಸ್ತಕ್ಷೇಪ ಮಾಡಲು ಪ್ರಯತ್ನಿಸುವ ಏರ್ಪಾಡುಗಳು ಈ ರಾಯಭಾರಿ ಕಚೇರಿಗಳು ಎಂಬ ಸಾಮಾನ್ಯ ತಿಳಿವಳಿಕೆಯನ್ನು ವಿಕಿಲೀಕ್ಸ್ ದಾಖಲೆಗಳ ಸಮೇತ ಸಾಬೀತುಪಡಿಸಿತ್ತು.

ಹೀಗೆ ಪ್ರಭುತ್ವಗಳ ರಹಸ್ಯಗಳನ್ನು ಹೊರಗೆ ಎಳೆಯುವ (ಹಿಲರಿ ಕ್ಲಿಂಟನ್ ವಿರುದ್ಧ ಅಮೆರಿಕದ ಚುನಾವಣೆಯಲ್ಲಿಯೂ ಇದು ಪ್ರಭಾವ ಬೀರಿತ್ತು ಕೂಡ) ಸಾಧ್ಯತೆಯ ಬಗ್ಗೆ ವಿಕಿಲೀಕ್ಸ್ ನಂಬಿಕೆ ಹುಟ್ಟಿಸಿತ್ತಾದರೂ ಪ್ರಭುತ್ವಗಳ ಕ್ರೂರತನಕ್ಕೆ ಅದು ಸಾಟಿಯಿಲ್ಲ ಎಂಬುದು ಮತ್ತೆ ಸಾಬೀತಾಗಿದೆ. ವಿಸಲ್‌ಬ್ಲೋವರ್‌ಗಳಾದ ಅಸ್ಸಾಂಜ್ ಆಗಲಿ, ಸ್ನೋಡೆನ್ ಆಗಲಿ ತಲೆಮರೆಸಿಕೊಳ್ಳುವ, ಬೇರೊಂದು ದೇಶದಲ್ಲಿ ರಾಜಕೀಯ ಆಶ್ರಯ ಪಡೆಯುವ ಸ್ಥಿತಿಯಿಂದ ಹೊರಬರದ ಪರಿಸ್ಥಿತಿಯಲ್ಲಿ ಇದ್ದಾರೆ. ಇಂತಹ ಸ್ಥಿತಿ ಹೊಸದಾಗಿ ಹುಟ್ಟಿಕೊಳ್ಳಬಹುದಾದ ಜನಪರ ಹ್ಯಾಕರ್‌ಗೆ ಸ್ಫೂರ್ತಿ ನೀಡಲು ಎಲ್ಲಿ ಸಾಧ್ಯವಿದೆ?

ಅಷ್ಟೇ ಅಲ್ಲ, ಬ್ಲ್ಯಾಕ್‌ವಾಟರ್ ಯುದ್ಧ ಅಪರಾಧ ಎಂದೇ ಕುಖ್ಯಾತವಾದ ಪ್ರಕರಣವನ್ನು ಕೂಡ ವಿಕಿಲೀಕ್ಸ್ ಪ್ರಕಟಿಸಿತ್ತು. ಇರಾಕ್ ಯುದ್ಧದಲ್ಲಿ ಖಾಸಗಿ ರಕ್ಷಣಾ ಪಡೆಯನ್ನು ಅಮೆರಿಕ ಬಳಸಿಕೊಂಡಿತ್ತು. ಈ ಬ್ಲ್ಯಾಕ್‌ವಾಟರ್ ಪಡೆ ಸೆಪ್ಟಂಬರ್ 2007ರಲ್ಲಿ ಬಾಗ್ದಾದ್‌ನ ನಿಸ್ಸೋರ್ ವೃತ್ತದಲ್ಲಿ 17 ಸಾಮಾನ್ಯ ನಾಗರಿಕರ ಮಾರಣಹೋಮ ನಡೆಸಿತ್ತು. ಇಂತಹ ಸುಮಾರು 14 ಪ್ರತ್ಯೇಕ ಬ್ಲ್ಯಾಕ್‌ವಾಟರ್ ಕ್ರೌರ್ಯಗಳ ಬಗ್ಗೆ ವಿಕಿಲೀಕ್ಸ್ ಇರಾಕ್ ಫೈಲ್ಸ್ ವರದಿ ಮಾಡಿತ್ತು. ಇಂತಹ ಒಂದು ಪ್ರಕರಣದ ವಿಚಾರಣೆಯಾಗಿ ಬ್ಲ್ಯಾಕ್‌ವಾಟರ್‌ನ ನಾಲ್ಕು ಜನ ಸದಸ್ಯರಿಗೆ ಅಮೆರಿಕದ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ ಈಗ ಅಧ್ಯಕ್ಷ ಸ್ಥಾನ ತೊರೆಯುತ್ತಿರುವ ಡೊನಾಲ್ಡ್ ಟ್ರಂಪ್, ತಮ್ಮ ಇತ್ತೀಚಿನ ಆದೇಶದಲ್ಲಿ ಈ ನಾಲ್ವರಿಗೆ ಕ್ಷಮಾದಾನ ನೀಡಿ ಬಿಡುಗಡೆಗೊಳಿಸಿದ್ದಾರೆ. ಅಮೆರಿಕ ಆಡಳಿತ ವ್ಯವಸ್ಥೆಯ ಈ ಪ್ರಹಸನ ಅಲ್ಲಿನ ಎಷ್ಟು ನಾಗರಿಕರಿಗೆ ಆಕ್ರೋಶ ತರಿಸದೆಯೋ ತಿಳಿಯದು!

ಇವೆಲ್ಲಾ ಹಿನ್ನಡೆಗಳ ಹೊರತಾಗಿಯೂ ಎಲ್ಲೋ ಯಾವುದೋ ಮೂಲೆಯಲ್ಲಿ ಜಗತ್ತಿನ ಎಲ್ಲ ಪ್ರಭುತ್ವಗಳ ಕ್ರೌರ್ಯಗಳನ್ನು ಕಣ್ಗಾವಲಿನಲ್ಲಿ ಇರಿಸಿರುವ ಯಾರೋ ಒಬ್ಬ ಹ್ಯಾಕರ್ ಖಂಡಿತಾ ಇದ್ದಾನೆ. ಹೆಚ್ಚು ಜನರೂ ಇರಬಹುದು. ಅಸ್ಯಾಂಜ್ ಅಂತಹ ಸ್ನೋಡೆನ್ ಅಂತಹ ವ್ಯಕ್ತಿಗಳ ಧೈರ್ಯ ಅವರಿಗೆ ಒಂದು ದಿನ ಸ್ಫೂರ್ತಿ ತರಬಲ್ಲದು. ನಿರಂಕುಶಪ್ರಭುತ್ವದ ಅಹಂಕಾರಕ್ಕೆ ಪೆಟ್ಟು ನೀಡಲು ಅವರೆಲ್ಲಾ ಕಾಯುತ್ತಿದ್ದಾರೆ. ಈ ಭಯ ಆ ಪ್ರಭುತ್ವಗಳಿಗೂ ಇದೆ ಎಂಬುದಂತೂ ನಿಜ.


ಇದನ್ನೂ ಓದಿ: ಅಂದು ಟ್ಯಾಗೋರ್ ದ್ವೇಷ, ಇಂದು ಅವರನ್ನೇ ಅಪ್ರಾಪ್ರಿಯೇಟ್ ಮಾಡಿಕೊಳ್ಳಲು ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....