Homeಮುಖಪುಟಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಗಾಝಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಗ್ಯಾಲೋವೇ ಖಂಡಿಸಿದ್ದರು

- Advertisement -
- Advertisement -

ಬ್ರಿಟನ್ ಸಂಸತ್‌ಗೆ ನಡೆದ ಉಪ ಚುನಾವಣೆಯಲ್ಲಿ ಹಿರಿಯ ಎಡಪಂಥೀಯ ನಾಯಕ ಜಾರ್ಜ್ ಗ್ಯಾಲೋವೇ ಜಯಗಳಿಸಿದ್ದಾರೆ. ಈ ಮೂಲಕ ಉತ್ತರ ಇಂಗ್ಲೆಂಡ್‌ನ ರೋಚ್‌ಡೇಲ್‌ ಕ್ಷೇತ್ರದ ನೂತನ ಸಂಸದನಾಗಿ ಅವರು ಆಯ್ಕೆಯಾಗಿದ್ದಾರೆ.

ಲೇಬರ್ ಪಕ್ಷದ ನಾಯಕರಾಗಿರುವ ಗ್ಯಾಲೋವೇ, ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣವನ್ನು ಕಟುವಾಗಿ ವಿರೋಧಿಸಿದ್ದರು. ಇದೇ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಸ್ಪರ್ಧಿಸಿದ್ದರು. ಗ್ಯಾಲೋವೇ ಅವರ ಗೆಲುವು ಇಸ್ರೇಲ್ ಬಗ್ಗೆ ಮೃಧು ಧೋರಣೆ ತಾಳಿರುವ ಪ್ರಧಾನಿ ರಿಶಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟು ಮಾಡಿದೆ.

ಗ್ಯಾಲೋವೆ ಅವರ ಅವರ ವರ್ಣರಂಜಿತ ಮತ್ತು ವಿವಾದಾತ್ಮಕ ರಾಜಕೀಯ ವೃತ್ತಿ ಜೀವನದ ಕೆಲವು ಗಮನಾರ್ಹ ವಿಷಯಗಳು ಇಲ್ಲಿವೆ.

ಸದ್ದಾಂ ಹುಸೇನ್ ಭೇಟಿ

ಸ್ಕಾಟಿಷ್ ನಗರವಾದ ಡುಂಡಿಯಲ್ಲಿ ಜನಿಸಿದ ಗ್ಯಾಲೋವೇ ಅವರು 1987ರಲ್ಲಿ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಬ್ರಿಟನ್ ಸಂಸತ್ ಪ್ರವೇಶಿಸಿದ್ದರು. ಆ ಬಳಿಕ ಕೆಲವು ವಿವಾದಗಳಿಂದ ಅವರು ಪ್ರಸಿದ್ದಿ ಪಡೆದರು.

1994ರಲ್ಲಿ ಇರಾಕಿನ ನಾಯಕ ಸದ್ದಾಂ ಹುಸೇನ್ ಅವರನ್ನು ಭೇಟಿಯಾಗಿದ್ದ ಗ್ಯಾಲೋವೇ, “ಸರ್, ನಿಮ್ಮ ಧೈರ್ಯ, ಶಕ್ತಿ, ಮತ್ತು ಅವಿಶ್ರಾಂತತೆಗೆ ನಾನು ನಮಸ್ಕರಿಸುತ್ತೇನೆ” ಎಂದಿದ್ದರು. ಇದು ಭಾರೀ ಟೀಕೆಗೆ ಕಾರಣವಾಗಿತ್ತು.

ಇರಾಕ್ ಯುದ್ಧ 

ಗ್ಯಾಲೋವೇ ಅವರು ಇರಾಕ್ ಯುದ್ಧದಲ್ಲಿ ಬ್ರಿಟನ್‌ ಪಾಲ್ಗೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ್ದರು. ಇದು 2003ರಲ್ಲಿ ಲೇಬರ್‌ ಪಕ್ಷದಿಂದ ಅವರ ಅಮಾನತಿಗೆ ಕಾರಣವಾಯಿತು. 2005ರಲ್ಲಿ ಯುದ್ಧ ವಿರೋಧಿ ರೆಸ್ಪೆಕ್ಟ್ ಪಾರ್ಟಿಗೆ ಸೇರಿದ ಗ್ಯಾಲೋವೇ, ಅದೇ ವರ್ಷ ನಡೆದ ಸಾರ್ವತ್ರಿ ಚುನಾವಣೆಯಲ್ಲಿ ಲಂಡನ್‌ನ ಬೆತ್ನಾಲ್ ಗ್ರೀನ್ ಮತ್ತು ಬೋ ಕ್ಷೇತ್ರದಿಂದ ಜಯಗಳಿಸಿದ್ದರು.

ಸೆನೆಟ್ ವಿಚಾರಣೆ

ಇರಾಕ್‌ನ ನಾಯಕ ಸದ್ದಾಂ ಹುಸೇನ್ ಸುಪರ್ದಿಯಲ್ಲಿದ್ದ ತೈಲ ಕಂಪನಿಗಳ ಕುರಿತ ಪ್ರಕರಣವೊಂದರಕ್ಕೆ ಸಂಬಂಧಪಟ್ಟಂತೆ 2005ರಲ್ಲಿ ಯುಎಸ್ ಸೆನೆಟ್ ವಿಚಾರಣೆಗೆ ಗ್ಯಾಲೋವೇ ಹಾಜರಾಗಿದ್ದರು.

ಸೆಲೆಬ್ರಿಟಿ ಬಿಗ್ ಬ್ರದರ್

2006ರಲ್ಲಿ ಗ್ಯಾಲೋವೇ ಅವರು ಸೆಲೆಬ್ರಿಟಿ ಬಿಗ್ ಬ್ರದರ್‌ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬೆಕ್ಕಿನಂತೆ ನಟಿಸಿ, ನಟಿ ರುಲಾ ಲೆನ್ಸ್ಕಾ ಅವರ ಕೈಯಿಂದ ಹಾಲು ಕುಡಿದ ವಿಚಾರಕ್ಕೆ ಗ್ಯಾಲೋವೇ ಸುದ್ದಿಯಾಗಿದ್ದರು.

2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಗ್ಯಾಲೋವೇ ಬ್ರಾಡ್‌ಫೋರ್ಡ್ ವೆಸ್ಟ್ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದರು. ಆ ಬಳಿಕ ಈ ಬಾರಿಯ ವಿಜಯದವರೆಗೆ ಒಂಬತ್ತು ವರ್ಷಗಳ ಕಾಲ ಅವರು ಸಂಸತ್ತಿನಿಂದ ಹೊರಗಿದ್ದರು.

ಇವಿಷ್ಟು ಮಾತ್ರವಲ್ಲದೆ ಹಲವು ವಿಚಾರಗಳಲ್ಲಿ ಗ್ಯಾಲೋವೇ ಬ್ರಿಟನ್ ಪ್ರಸಿದ್ದ ರಾಜಕೀಯ ನಾಯಕರಾಗಿದ್ದಾರೆ. ಅವರ ಗೆಲುವು ರಿಶಿ ಸುನಕ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ಎನ್ನಬಹುದು.

ಇದನ್ನೂ ಓದಿ : ಹಿಮಾಚಲ ಸಿಎಂ ವಿರುದ್ಧ ಬಂಡಾಯ ಶಾಸಕ ವಾಗ್ದಾಳಿ; ದೆಹಲಿಗೆ ತೆರಳುವ ಮುನ್ನ ವಿಕ್ರಮಾದಿತ್ಯ ಸಿಂಗ್ ಭೇಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...