Homeಮುಖಪುಟಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಗಾಝಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಗ್ಯಾಲೋವೇ ಖಂಡಿಸಿದ್ದರು

- Advertisement -
- Advertisement -

ಬ್ರಿಟನ್ ಸಂಸತ್‌ಗೆ ನಡೆದ ಉಪ ಚುನಾವಣೆಯಲ್ಲಿ ಹಿರಿಯ ಎಡಪಂಥೀಯ ನಾಯಕ ಜಾರ್ಜ್ ಗ್ಯಾಲೋವೇ ಜಯಗಳಿಸಿದ್ದಾರೆ. ಈ ಮೂಲಕ ಉತ್ತರ ಇಂಗ್ಲೆಂಡ್‌ನ ರೋಚ್‌ಡೇಲ್‌ ಕ್ಷೇತ್ರದ ನೂತನ ಸಂಸದನಾಗಿ ಅವರು ಆಯ್ಕೆಯಾಗಿದ್ದಾರೆ.

ಲೇಬರ್ ಪಕ್ಷದ ನಾಯಕರಾಗಿರುವ ಗ್ಯಾಲೋವೇ, ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣವನ್ನು ಕಟುವಾಗಿ ವಿರೋಧಿಸಿದ್ದರು. ಇದೇ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಸ್ಪರ್ಧಿಸಿದ್ದರು. ಗ್ಯಾಲೋವೇ ಅವರ ಗೆಲುವು ಇಸ್ರೇಲ್ ಬಗ್ಗೆ ಮೃಧು ಧೋರಣೆ ತಾಳಿರುವ ಪ್ರಧಾನಿ ರಿಶಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟು ಮಾಡಿದೆ.

ಗ್ಯಾಲೋವೆ ಅವರ ಅವರ ವರ್ಣರಂಜಿತ ಮತ್ತು ವಿವಾದಾತ್ಮಕ ರಾಜಕೀಯ ವೃತ್ತಿ ಜೀವನದ ಕೆಲವು ಗಮನಾರ್ಹ ವಿಷಯಗಳು ಇಲ್ಲಿವೆ.

ಸದ್ದಾಂ ಹುಸೇನ್ ಭೇಟಿ

ಸ್ಕಾಟಿಷ್ ನಗರವಾದ ಡುಂಡಿಯಲ್ಲಿ ಜನಿಸಿದ ಗ್ಯಾಲೋವೇ ಅವರು 1987ರಲ್ಲಿ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಬ್ರಿಟನ್ ಸಂಸತ್ ಪ್ರವೇಶಿಸಿದ್ದರು. ಆ ಬಳಿಕ ಕೆಲವು ವಿವಾದಗಳಿಂದ ಅವರು ಪ್ರಸಿದ್ದಿ ಪಡೆದರು.

1994ರಲ್ಲಿ ಇರಾಕಿನ ನಾಯಕ ಸದ್ದಾಂ ಹುಸೇನ್ ಅವರನ್ನು ಭೇಟಿಯಾಗಿದ್ದ ಗ್ಯಾಲೋವೇ, “ಸರ್, ನಿಮ್ಮ ಧೈರ್ಯ, ಶಕ್ತಿ, ಮತ್ತು ಅವಿಶ್ರಾಂತತೆಗೆ ನಾನು ನಮಸ್ಕರಿಸುತ್ತೇನೆ” ಎಂದಿದ್ದರು. ಇದು ಭಾರೀ ಟೀಕೆಗೆ ಕಾರಣವಾಗಿತ್ತು.

ಇರಾಕ್ ಯುದ್ಧ 

ಗ್ಯಾಲೋವೇ ಅವರು ಇರಾಕ್ ಯುದ್ಧದಲ್ಲಿ ಬ್ರಿಟನ್‌ ಪಾಲ್ಗೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ್ದರು. ಇದು 2003ರಲ್ಲಿ ಲೇಬರ್‌ ಪಕ್ಷದಿಂದ ಅವರ ಅಮಾನತಿಗೆ ಕಾರಣವಾಯಿತು. 2005ರಲ್ಲಿ ಯುದ್ಧ ವಿರೋಧಿ ರೆಸ್ಪೆಕ್ಟ್ ಪಾರ್ಟಿಗೆ ಸೇರಿದ ಗ್ಯಾಲೋವೇ, ಅದೇ ವರ್ಷ ನಡೆದ ಸಾರ್ವತ್ರಿ ಚುನಾವಣೆಯಲ್ಲಿ ಲಂಡನ್‌ನ ಬೆತ್ನಾಲ್ ಗ್ರೀನ್ ಮತ್ತು ಬೋ ಕ್ಷೇತ್ರದಿಂದ ಜಯಗಳಿಸಿದ್ದರು.

ಸೆನೆಟ್ ವಿಚಾರಣೆ

ಇರಾಕ್‌ನ ನಾಯಕ ಸದ್ದಾಂ ಹುಸೇನ್ ಸುಪರ್ದಿಯಲ್ಲಿದ್ದ ತೈಲ ಕಂಪನಿಗಳ ಕುರಿತ ಪ್ರಕರಣವೊಂದರಕ್ಕೆ ಸಂಬಂಧಪಟ್ಟಂತೆ 2005ರಲ್ಲಿ ಯುಎಸ್ ಸೆನೆಟ್ ವಿಚಾರಣೆಗೆ ಗ್ಯಾಲೋವೇ ಹಾಜರಾಗಿದ್ದರು.

ಸೆಲೆಬ್ರಿಟಿ ಬಿಗ್ ಬ್ರದರ್

2006ರಲ್ಲಿ ಗ್ಯಾಲೋವೇ ಅವರು ಸೆಲೆಬ್ರಿಟಿ ಬಿಗ್ ಬ್ರದರ್‌ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬೆಕ್ಕಿನಂತೆ ನಟಿಸಿ, ನಟಿ ರುಲಾ ಲೆನ್ಸ್ಕಾ ಅವರ ಕೈಯಿಂದ ಹಾಲು ಕುಡಿದ ವಿಚಾರಕ್ಕೆ ಗ್ಯಾಲೋವೇ ಸುದ್ದಿಯಾಗಿದ್ದರು.

2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಗ್ಯಾಲೋವೇ ಬ್ರಾಡ್‌ಫೋರ್ಡ್ ವೆಸ್ಟ್ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದರು. ಆ ಬಳಿಕ ಈ ಬಾರಿಯ ವಿಜಯದವರೆಗೆ ಒಂಬತ್ತು ವರ್ಷಗಳ ಕಾಲ ಅವರು ಸಂಸತ್ತಿನಿಂದ ಹೊರಗಿದ್ದರು.

ಇವಿಷ್ಟು ಮಾತ್ರವಲ್ಲದೆ ಹಲವು ವಿಚಾರಗಳಲ್ಲಿ ಗ್ಯಾಲೋವೇ ಬ್ರಿಟನ್ ಪ್ರಸಿದ್ದ ರಾಜಕೀಯ ನಾಯಕರಾಗಿದ್ದಾರೆ. ಅವರ ಗೆಲುವು ರಿಶಿ ಸುನಕ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ಎನ್ನಬಹುದು.

ಇದನ್ನೂ ಓದಿ : ಹಿಮಾಚಲ ಸಿಎಂ ವಿರುದ್ಧ ಬಂಡಾಯ ಶಾಸಕ ವಾಗ್ದಾಳಿ; ದೆಹಲಿಗೆ ತೆರಳುವ ಮುನ್ನ ವಿಕ್ರಮಾದಿತ್ಯ ಸಿಂಗ್ ಭೇಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...