Homeಮುಖಪುಟಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಗಾಝಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಗ್ಯಾಲೋವೇ ಖಂಡಿಸಿದ್ದರು

- Advertisement -
- Advertisement -

ಬ್ರಿಟನ್ ಸಂಸತ್‌ಗೆ ನಡೆದ ಉಪ ಚುನಾವಣೆಯಲ್ಲಿ ಹಿರಿಯ ಎಡಪಂಥೀಯ ನಾಯಕ ಜಾರ್ಜ್ ಗ್ಯಾಲೋವೇ ಜಯಗಳಿಸಿದ್ದಾರೆ. ಈ ಮೂಲಕ ಉತ್ತರ ಇಂಗ್ಲೆಂಡ್‌ನ ರೋಚ್‌ಡೇಲ್‌ ಕ್ಷೇತ್ರದ ನೂತನ ಸಂಸದನಾಗಿ ಅವರು ಆಯ್ಕೆಯಾಗಿದ್ದಾರೆ.

ಲೇಬರ್ ಪಕ್ಷದ ನಾಯಕರಾಗಿರುವ ಗ್ಯಾಲೋವೇ, ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣವನ್ನು ಕಟುವಾಗಿ ವಿರೋಧಿಸಿದ್ದರು. ಇದೇ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಸ್ಪರ್ಧಿಸಿದ್ದರು. ಗ್ಯಾಲೋವೇ ಅವರ ಗೆಲುವು ಇಸ್ರೇಲ್ ಬಗ್ಗೆ ಮೃಧು ಧೋರಣೆ ತಾಳಿರುವ ಪ್ರಧಾನಿ ರಿಶಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟು ಮಾಡಿದೆ.

ಗ್ಯಾಲೋವೆ ಅವರ ಅವರ ವರ್ಣರಂಜಿತ ಮತ್ತು ವಿವಾದಾತ್ಮಕ ರಾಜಕೀಯ ವೃತ್ತಿ ಜೀವನದ ಕೆಲವು ಗಮನಾರ್ಹ ವಿಷಯಗಳು ಇಲ್ಲಿವೆ.

ಸದ್ದಾಂ ಹುಸೇನ್ ಭೇಟಿ

ಸ್ಕಾಟಿಷ್ ನಗರವಾದ ಡುಂಡಿಯಲ್ಲಿ ಜನಿಸಿದ ಗ್ಯಾಲೋವೇ ಅವರು 1987ರಲ್ಲಿ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಬ್ರಿಟನ್ ಸಂಸತ್ ಪ್ರವೇಶಿಸಿದ್ದರು. ಆ ಬಳಿಕ ಕೆಲವು ವಿವಾದಗಳಿಂದ ಅವರು ಪ್ರಸಿದ್ದಿ ಪಡೆದರು.

1994ರಲ್ಲಿ ಇರಾಕಿನ ನಾಯಕ ಸದ್ದಾಂ ಹುಸೇನ್ ಅವರನ್ನು ಭೇಟಿಯಾಗಿದ್ದ ಗ್ಯಾಲೋವೇ, “ಸರ್, ನಿಮ್ಮ ಧೈರ್ಯ, ಶಕ್ತಿ, ಮತ್ತು ಅವಿಶ್ರಾಂತತೆಗೆ ನಾನು ನಮಸ್ಕರಿಸುತ್ತೇನೆ” ಎಂದಿದ್ದರು. ಇದು ಭಾರೀ ಟೀಕೆಗೆ ಕಾರಣವಾಗಿತ್ತು.

ಇರಾಕ್ ಯುದ್ಧ 

ಗ್ಯಾಲೋವೇ ಅವರು ಇರಾಕ್ ಯುದ್ಧದಲ್ಲಿ ಬ್ರಿಟನ್‌ ಪಾಲ್ಗೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ್ದರು. ಇದು 2003ರಲ್ಲಿ ಲೇಬರ್‌ ಪಕ್ಷದಿಂದ ಅವರ ಅಮಾನತಿಗೆ ಕಾರಣವಾಯಿತು. 2005ರಲ್ಲಿ ಯುದ್ಧ ವಿರೋಧಿ ರೆಸ್ಪೆಕ್ಟ್ ಪಾರ್ಟಿಗೆ ಸೇರಿದ ಗ್ಯಾಲೋವೇ, ಅದೇ ವರ್ಷ ನಡೆದ ಸಾರ್ವತ್ರಿ ಚುನಾವಣೆಯಲ್ಲಿ ಲಂಡನ್‌ನ ಬೆತ್ನಾಲ್ ಗ್ರೀನ್ ಮತ್ತು ಬೋ ಕ್ಷೇತ್ರದಿಂದ ಜಯಗಳಿಸಿದ್ದರು.

ಸೆನೆಟ್ ವಿಚಾರಣೆ

ಇರಾಕ್‌ನ ನಾಯಕ ಸದ್ದಾಂ ಹುಸೇನ್ ಸುಪರ್ದಿಯಲ್ಲಿದ್ದ ತೈಲ ಕಂಪನಿಗಳ ಕುರಿತ ಪ್ರಕರಣವೊಂದರಕ್ಕೆ ಸಂಬಂಧಪಟ್ಟಂತೆ 2005ರಲ್ಲಿ ಯುಎಸ್ ಸೆನೆಟ್ ವಿಚಾರಣೆಗೆ ಗ್ಯಾಲೋವೇ ಹಾಜರಾಗಿದ್ದರು.

ಸೆಲೆಬ್ರಿಟಿ ಬಿಗ್ ಬ್ರದರ್

2006ರಲ್ಲಿ ಗ್ಯಾಲೋವೇ ಅವರು ಸೆಲೆಬ್ರಿಟಿ ಬಿಗ್ ಬ್ರದರ್‌ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬೆಕ್ಕಿನಂತೆ ನಟಿಸಿ, ನಟಿ ರುಲಾ ಲೆನ್ಸ್ಕಾ ಅವರ ಕೈಯಿಂದ ಹಾಲು ಕುಡಿದ ವಿಚಾರಕ್ಕೆ ಗ್ಯಾಲೋವೇ ಸುದ್ದಿಯಾಗಿದ್ದರು.

2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಗ್ಯಾಲೋವೇ ಬ್ರಾಡ್‌ಫೋರ್ಡ್ ವೆಸ್ಟ್ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದರು. ಆ ಬಳಿಕ ಈ ಬಾರಿಯ ವಿಜಯದವರೆಗೆ ಒಂಬತ್ತು ವರ್ಷಗಳ ಕಾಲ ಅವರು ಸಂಸತ್ತಿನಿಂದ ಹೊರಗಿದ್ದರು.

ಇವಿಷ್ಟು ಮಾತ್ರವಲ್ಲದೆ ಹಲವು ವಿಚಾರಗಳಲ್ಲಿ ಗ್ಯಾಲೋವೇ ಬ್ರಿಟನ್ ಪ್ರಸಿದ್ದ ರಾಜಕೀಯ ನಾಯಕರಾಗಿದ್ದಾರೆ. ಅವರ ಗೆಲುವು ರಿಶಿ ಸುನಕ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ಎನ್ನಬಹುದು.

ಇದನ್ನೂ ಓದಿ : ಹಿಮಾಚಲ ಸಿಎಂ ವಿರುದ್ಧ ಬಂಡಾಯ ಶಾಸಕ ವಾಗ್ದಾಳಿ; ದೆಹಲಿಗೆ ತೆರಳುವ ಮುನ್ನ ವಿಕ್ರಮಾದಿತ್ಯ ಸಿಂಗ್ ಭೇಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...