Homeಮುಖಪುಟಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಗಾಝಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಗ್ಯಾಲೋವೇ ಖಂಡಿಸಿದ್ದರು

- Advertisement -
- Advertisement -

ಬ್ರಿಟನ್ ಸಂಸತ್‌ಗೆ ನಡೆದ ಉಪ ಚುನಾವಣೆಯಲ್ಲಿ ಹಿರಿಯ ಎಡಪಂಥೀಯ ನಾಯಕ ಜಾರ್ಜ್ ಗ್ಯಾಲೋವೇ ಜಯಗಳಿಸಿದ್ದಾರೆ. ಈ ಮೂಲಕ ಉತ್ತರ ಇಂಗ್ಲೆಂಡ್‌ನ ರೋಚ್‌ಡೇಲ್‌ ಕ್ಷೇತ್ರದ ನೂತನ ಸಂಸದನಾಗಿ ಅವರು ಆಯ್ಕೆಯಾಗಿದ್ದಾರೆ.

ಲೇಬರ್ ಪಕ್ಷದ ನಾಯಕರಾಗಿರುವ ಗ್ಯಾಲೋವೇ, ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣವನ್ನು ಕಟುವಾಗಿ ವಿರೋಧಿಸಿದ್ದರು. ಇದೇ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಸ್ಪರ್ಧಿಸಿದ್ದರು. ಗ್ಯಾಲೋವೇ ಅವರ ಗೆಲುವು ಇಸ್ರೇಲ್ ಬಗ್ಗೆ ಮೃಧು ಧೋರಣೆ ತಾಳಿರುವ ಪ್ರಧಾನಿ ರಿಶಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟು ಮಾಡಿದೆ.

ಗ್ಯಾಲೋವೆ ಅವರ ಅವರ ವರ್ಣರಂಜಿತ ಮತ್ತು ವಿವಾದಾತ್ಮಕ ರಾಜಕೀಯ ವೃತ್ತಿ ಜೀವನದ ಕೆಲವು ಗಮನಾರ್ಹ ವಿಷಯಗಳು ಇಲ್ಲಿವೆ.

ಸದ್ದಾಂ ಹುಸೇನ್ ಭೇಟಿ

ಸ್ಕಾಟಿಷ್ ನಗರವಾದ ಡುಂಡಿಯಲ್ಲಿ ಜನಿಸಿದ ಗ್ಯಾಲೋವೇ ಅವರು 1987ರಲ್ಲಿ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಬ್ರಿಟನ್ ಸಂಸತ್ ಪ್ರವೇಶಿಸಿದ್ದರು. ಆ ಬಳಿಕ ಕೆಲವು ವಿವಾದಗಳಿಂದ ಅವರು ಪ್ರಸಿದ್ದಿ ಪಡೆದರು.

1994ರಲ್ಲಿ ಇರಾಕಿನ ನಾಯಕ ಸದ್ದಾಂ ಹುಸೇನ್ ಅವರನ್ನು ಭೇಟಿಯಾಗಿದ್ದ ಗ್ಯಾಲೋವೇ, “ಸರ್, ನಿಮ್ಮ ಧೈರ್ಯ, ಶಕ್ತಿ, ಮತ್ತು ಅವಿಶ್ರಾಂತತೆಗೆ ನಾನು ನಮಸ್ಕರಿಸುತ್ತೇನೆ” ಎಂದಿದ್ದರು. ಇದು ಭಾರೀ ಟೀಕೆಗೆ ಕಾರಣವಾಗಿತ್ತು.

ಇರಾಕ್ ಯುದ್ಧ 

ಗ್ಯಾಲೋವೇ ಅವರು ಇರಾಕ್ ಯುದ್ಧದಲ್ಲಿ ಬ್ರಿಟನ್‌ ಪಾಲ್ಗೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ್ದರು. ಇದು 2003ರಲ್ಲಿ ಲೇಬರ್‌ ಪಕ್ಷದಿಂದ ಅವರ ಅಮಾನತಿಗೆ ಕಾರಣವಾಯಿತು. 2005ರಲ್ಲಿ ಯುದ್ಧ ವಿರೋಧಿ ರೆಸ್ಪೆಕ್ಟ್ ಪಾರ್ಟಿಗೆ ಸೇರಿದ ಗ್ಯಾಲೋವೇ, ಅದೇ ವರ್ಷ ನಡೆದ ಸಾರ್ವತ್ರಿ ಚುನಾವಣೆಯಲ್ಲಿ ಲಂಡನ್‌ನ ಬೆತ್ನಾಲ್ ಗ್ರೀನ್ ಮತ್ತು ಬೋ ಕ್ಷೇತ್ರದಿಂದ ಜಯಗಳಿಸಿದ್ದರು.

ಸೆನೆಟ್ ವಿಚಾರಣೆ

ಇರಾಕ್‌ನ ನಾಯಕ ಸದ್ದಾಂ ಹುಸೇನ್ ಸುಪರ್ದಿಯಲ್ಲಿದ್ದ ತೈಲ ಕಂಪನಿಗಳ ಕುರಿತ ಪ್ರಕರಣವೊಂದರಕ್ಕೆ ಸಂಬಂಧಪಟ್ಟಂತೆ 2005ರಲ್ಲಿ ಯುಎಸ್ ಸೆನೆಟ್ ವಿಚಾರಣೆಗೆ ಗ್ಯಾಲೋವೇ ಹಾಜರಾಗಿದ್ದರು.

ಸೆಲೆಬ್ರಿಟಿ ಬಿಗ್ ಬ್ರದರ್

2006ರಲ್ಲಿ ಗ್ಯಾಲೋವೇ ಅವರು ಸೆಲೆಬ್ರಿಟಿ ಬಿಗ್ ಬ್ರದರ್‌ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬೆಕ್ಕಿನಂತೆ ನಟಿಸಿ, ನಟಿ ರುಲಾ ಲೆನ್ಸ್ಕಾ ಅವರ ಕೈಯಿಂದ ಹಾಲು ಕುಡಿದ ವಿಚಾರಕ್ಕೆ ಗ್ಯಾಲೋವೇ ಸುದ್ದಿಯಾಗಿದ್ದರು.

2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಗ್ಯಾಲೋವೇ ಬ್ರಾಡ್‌ಫೋರ್ಡ್ ವೆಸ್ಟ್ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದರು. ಆ ಬಳಿಕ ಈ ಬಾರಿಯ ವಿಜಯದವರೆಗೆ ಒಂಬತ್ತು ವರ್ಷಗಳ ಕಾಲ ಅವರು ಸಂಸತ್ತಿನಿಂದ ಹೊರಗಿದ್ದರು.

ಇವಿಷ್ಟು ಮಾತ್ರವಲ್ಲದೆ ಹಲವು ವಿಚಾರಗಳಲ್ಲಿ ಗ್ಯಾಲೋವೇ ಬ್ರಿಟನ್ ಪ್ರಸಿದ್ದ ರಾಜಕೀಯ ನಾಯಕರಾಗಿದ್ದಾರೆ. ಅವರ ಗೆಲುವು ರಿಶಿ ಸುನಕ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ಎನ್ನಬಹುದು.

ಇದನ್ನೂ ಓದಿ : ಹಿಮಾಚಲ ಸಿಎಂ ವಿರುದ್ಧ ಬಂಡಾಯ ಶಾಸಕ ವಾಗ್ದಾಳಿ; ದೆಹಲಿಗೆ ತೆರಳುವ ಮುನ್ನ ವಿಕ್ರಮಾದಿತ್ಯ ಸಿಂಗ್ ಭೇಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...