Homeಅಂತರಾಷ್ಟ್ರೀಯದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

ದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

- Advertisement -
- Advertisement -

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇಯ ಅಲೆಯ ಪ್ರಭಾವ ಸಾಕಷ್ಟು ಇಳಿಮುಖವಾಗಿದೆ. ಅನೇಕ ನಗರಗಳು ಲಾಕ್‌ ಡೌನ್‌ ನಿಂದ ತೆರೆದುಕೊಳ್ಳುತ್ತಿವೆ. ಈ ನಡುವೆ ಜನರ ಓಡಾಟದಿಂದ ಮತ್ತಷ್ಟು ಸೋಂಕು ಹೆಚ್ಚಳವಾಗುವ ಆತಂಕವನ್ನು ತಜ್ಞರು ಹೊರಹಾಕಿದ್ದಾರೆ. ಕೊರೋನಾ ವ್ಯಾಕ್ಸಿನೇಶನ್‌ ಕೂಡ ಸೋಂಕು ನಿಯಂತ್ರಣಕ್ಕೆ ಸಹಾಯ ಮಾಡುವ ಇನ್ನೊಂದು ಅಸ್ತ್ರ. ವ್ಯಾಕ್ಸಿನೇಶನ್‌ ಜೊತೆಗೆ ಕೊರೋನಾ ಸೋಂಕಿತರನ್ನು ಅಂತರದಿಂದಲೇ ಗುರುತಿಸಿ ಕ್ವಾರಂಟೈನ್‌ ಅಥವಾ ಐಸೋಲೇಶನ್‌ ವ್ಯವಸ್ಥೆ ಮಾಡಲು ಸಾಧ್ಯವಾದರೆ? ಹೌದು ಬ್ರಿಟನ್‌ ಒಂದು ಇಂತಹ ತಂತ್ರಜ್ಞಾನದ ಸಂಶೋಧನೆಯಲ್ಲಿ ತೊಡಗಿದೆ. ಸಾರ್ವಜನಿಕ ಪ್ರದೇಶದಲ್ಲಿರುವ ಕೊರೋನಾ ಸೋಂಕಿತರನ್ನು ಪತ್ತೆಹಚ್ಚುವ ವಿಶೇಷ ಸ್ಕಾನಿಂಗ್‌ ತಂತ್ರಜ್ಞಾನವನ್ನು ಬ್ರಿಟನ್‌ ಮೂಲದ ಕಂಪನಿಯೊಂದು ಅಭಿವೃದ್ಧಿಪಡಿಸುತ್ತಿದೆ. ಈ ತಂತ್ರಜ್ಞಾನ ಉಪಕರಣಕ್ಕೆ ಕೋವಿಡ್‌ ಅಲರಾಮ್‌ ಎಂದು ಹೆಸರಿಸಲಾಗಿದೆ.

ಈ ವಿಶೇಷ ಕೋವಿಡ್‌ ಅಲರಾಮ್‌ ಜನನಿಬಿಡ ಮಾರುಕಟ್ಟೆ, ನಗರಗಳ ಬೀದಿಯಲ್ಲಿ ದೂರದಿಂದಲೇ ಜನರ ದೇಹವನ್ನು ಪರೀಕ್ಷಿಸಲು ಶಕ್ತವಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಅಂತರದಿಂದಲೇ ದೇಹದಲ್ಲಿರುವ ವೈರಸ್‌ ಲಕ್ಷಣವನ್ನು ಪತ್ತೆ ಹಚ್ಚಿ ಇದು ಅಲರಾಮ್‌ ನೀಡುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದರೆ ವೈರಸ್‌ನ ಜೀವರಾಸಾಯನಿಕ ಕ್ರಿಯೆಯಿಂದ ಆ ವ್ಯಕ್ತಿಯ ದೇಹದಲ್ಲಿ ವಿಭಿನ್ನವಾದ ವಾಸನೆ ಉತ್ಪತ್ತಿಯಾಗುತ್ತದೆ. ಈ ವಾಸನೆಯನ್ನು ಕಂಡು ಹಿಡಿಯುವ ಸೆನ್ಸಾರ್‌ಗಳನ್ನು ಅಭಿವೃದ್ಧಿಡಿಸಿದ್ದೇವೆ ಎಂದು ಲಂಡನ್‌ ಸ್ಕೂಲ್‌ ಆಫ್‌ ಹೈಜಿನ್‌ ಎಂಡ್‌ ಟ್ರೋಪಿಕಲ್‌ ಮೆಡಿಸಿನ್ಸ್‌ ( LSHTM) ಸಂಸ್ಥೆಯ ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ :ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

LSHTM ಮತ್ತು ಡರ್ಹಾಮ್‌ ವಿಶ್ವವಿದ್ಯಾಲಯದ  ರೋಬೋ ಸೈಂಟಿಫಿಕ್‌ ಲಿಮಿಟೆಡ್‌ ಎಂಬ ಬಯೋಟೆಕ್‌ ಕಂಪನಿಗಳು ಜಂಟಿಯಾಗಿ ಈ ಸಂಶೋಧನೆಯನ್ನು ನಡೆಸುತ್ತಿವೆ. ಈ ಸಂಬಂಧ ಒರ್ಗಾನಿಕ್‌ ಸೆಮಿಕಂಡಕ್ಟಿಂಗ್ ಸೆನ್ಸರ್‌ ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದುವರೆಗಿನ ಪರೀಕ್ಷೆಗಳು ಅತ್ಯಂತ ನಿಖರವಾದ ಫಲಿತಾಂಶಗಳನ್ನು ನೀಡಿವೆ. ಈ ಉಪಕರಣ ಕೊರೋನಾ ಟೆಸ್ಟಿಂಗ್‌ಗೆ ಸಂಬಂಧಿಸಿದಂತೆ ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದೆ ಎಂದು  ಲಂಡ್‌ ಸ್ಕೂಲ್‌ ಆಫ್‌ ಹೈಜಿನ್‌ನ ವಿಜ್ಞಾನಿ ಪ್ರೊಫೆಸರ್‌ ಜೇಮ್ಸ್‌ ಲೋಗಾನ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಸೆನ್ಸಾರ್‌ಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದರೆ ಸಾರ್ವಜನಿಕ ಪ್ರದೇಶಗಳಲ್ಲಿ ಯಶಸ್ವಿಯಾಗಿ ಅಳವಡಿಸಬಹುದು. ಇದು ಅಷ್ಟೊಂದು ದುಬಾರಿ ಬೆಲೆಯ ಉಪಕರಣವಲ್ಲ. ಮುಂದೆ ಸಂಭವಿಸಬಹುದಾದ ಇತರ ಸೋಂಕುಗಳನ್ನು ಈ ಉಪಕರಣದಿಂದ ಪತ್ತೆಹಚ್ಚಲು ಸಾಧ್ಯವಿದೆ ಎಂದು ಜೇಮ್ಸ್‌ ಲೋಗಾನ್‌ ಅಭಿಪ್ರಾಯಪಡುತ್ತಾರೆ.

ಇದುವರೆಗೆ ಈ ತಂತ್ರಜ್ಞಾನದಿಂದ 54 ಜನರಲ್ಲಿ 27 ಜನರು ಕೋವಿಡ್‌ ಸೋಂಕಿಗೆ ಒಳಗಾಗಿರುವುದನ್ನು ಪತ್ತೆ ಹಚ್ಚಲಾಗಿದೆ. ವ್ಯಕ್ತಿಗಳು ಸೋಂಕು ಲಕ್ಷಣ ಹೊಂದಿರದಿದ್ದರೂ ಈ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚಿದ್ದೇವೆ. ಸಾಕ್ಸ್‌ ಸೇರಿದಂತೆ ವಿವಿಧ ಸೂಕ್ಷ್ಮಾತಿ ಸೂಕ್ಷ್ಮ ವಾಸನೆಯನ್ನು ಉಪಕರಣ ಗುರುತಿಸಿ ಕೊರೋನಾ ಸೋಂಕು ಇರುವುದನ್ನು ಪತ್ತೆಹಚ್ಚಿದೆ.  ನಾವು ಆರಂಭದಲ್ಲಿ ಕೋವಿಡ್‌ ಸೋಂಕಿತರಲ್ಲಿ ವಿಭಿನ್ನವಾದ ವಾಸನೆಯೊಂದು ಇರುವುದನ್ನು ಮತ್ತು ಸೋಂಕು ಇಲ್ಲದಿರುವವರಲ್ಲಿ ಅಂತಹ ಯಾವುದೇ ವಾಸನೆ ಇಲ್ಲದಿರುವುದನ್ನು ಕಂಡುಕೊಂಡೆವು. ನಮ್ಮ ಅಧ್ಯಯನವು ಈ ಸೂಕ್ಷ್ಮ ವಾಸನೆಯನ್ನು ಗ್ರಹಿಸುವ ಸೆನ್ಸರ್‌ ಒಂದನ್ನು ರೂಪಿಸುವ ಪ್ರಯತ್ನಕ್ಕೆ ತೊಡಗಿದೆವು. ಅದು ಯಶಸ್ವಿಯಾಗಿದೆ. ಬೇರೆ ಎಲ್ಲಾ ರೀತಿಯ ಟೆಸ್ಟಿಂಗ್‌ ವಿಧಾನಗಳಿಗಿಂತ ನಮ್ಮ ಕೋವಿಡ್‌ ಅಲಾರಾಮ್‌ ಟೆಸ್ಟಿಂಗ್‌ ವಿಧಾನವು  ನಿಖರವಾಗಿರುವುದು ಕಂಡುಬಂದಿದೆ. 100%  ಸರಿಯಾದ ಫಲಿತಾಂಶವನ್ನು ನಾವು ಪಡೆದಿದ್ದೇವೆ ಎಂದು ರೋಬೋಸೈಂಟಿಫಿಕ್‌ ಸಂಸ್ಥೆಯು ಹೇಳಿದೆ.

ರೋಬೋ ಸೌಂಟಿಫಿಕ್‌ ಸಂಸ್ಥೆಯು ಈ ತಂತ್ರಜ್ಞಾನದ ಸಹಾಯದಿಂದ ಎರಡು ರೀತಿಯ ಉಪಕರಣವನ್ನು ತಯಾರಿಸಲು ಹೊರಟಿದೆ. ಒಂದು ಕೈಯಲ್ಲಿ ಹಿಡಿದುಕೊಳ್ಳಬಹುದಾದ ಸಣ್ಣ ಉಪಕರಣ. ಮತ್ತೊಂದು ಕೋಣೆಯಲ್ಲಿ ಅಳವಡಿಸಬಹುದಾದ ಟೆಸ್ಟಿಂಗ್‌ ಉಪಕರಣ. ಈ ಉಪಕರಣಗಳನ್ನು ಹೆಚ್ಚಾಗಿ ಸ್ಕೂಲ್‌, ವಿಮಾನಗಳು, ಸರ್ಕಾರಿ ಬಸ್‌ಗಳು, ಕಚೇರಿಗಳು, ಕಂಪನಿಗಳು ಸೇರಿ ಹಲವುಕಡೆ ಪರಿಣಾಮಕಾರಿಯಾಗಿ ಕೊರೋನಾ ಟೆಸ್ಟ್‌ಗೆ ಬಳಸಿಕೊಳ್ಳಬಹುದು ಎಂದು ಕಂಪನಿಯು ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಈ ಉಪಕರಣಗಳಿಂದ ಅತ್ಯಂತ ಸುಲಭವಾಗಿ ಕೊರೋನಾ ಪರೀಕ್ಷೆಯನ್ನು ನಡೆಸಬಹುದಾಗಿದೆ. ಆಟೋಮೇಟಿಕ್‌ ತಂತ್ರಜ್ಞಾನವಾಗಿರುವುದರಿಂದ ಕೊರೋನಾ ಟೆಸ್ಟಿಂಗ್‌ ನಡೆಸಲು ಹೆಚ್ಚಿನ ಜನರ ಅವಶ್ಯಕತೆಯೂ ಇಲ್ಲ. ಜನರು ಸ್ವಯೋ ಪ್ರೇರಿತರಾಗಿ ಪರೀಕ್ಷೆಗೆ ಒಳಗಾಗಿ ತಮಗೆ ತಾವೇ ಫಲಿತಾಂಶವನ್ನು ತಿಳಿದುಕೊಳ್ಳುವ ವ್ಯವಸ್ಥೆ ಇದಾಗಿದೆ. ಜನನಿಬಿಡ ಪ್ರದೇಶಗಳಲ್ಲಿ ಕೋವಿಡ್‌ ಸೋಂಕಿತರನ್ನು ಪತ್ತೆಹಚ್ಚಿ ಅಲಾರ್ಮ್‌ ನೀಡಲು ಈ ಉಪಕರಣ ಅತ್ಯಂತ ಸಹಾಯಕಾರಿಯಾಗಲಿದೆ ಎಂದು ರೋಬೋ ಸೈಂಟಿಫಿಕ್‌ ಸಂಸ್ಥೆ ಮಾಹಿತಿ ನೀಡಿದೆ.

ಒಟ್ಟಿನಲ್‌ ಕೊರೋನಾ ಟೆಸ್ಟಿಂಗ್‌ ಕೂಡ ಅತ್ಯಂತ ಅಪಾಯಕಾರಿ ಕೆಲಸವಾಗಿರುವ ನಮ್ಮ ದೇಶದಲ್ಲಿ ಇಂತಹ ಆಟೋಮ್ಯಾಟಿಕ್‌ ಉಪಕರಣಗಳ ಅವಶ್ಯಕತೆ ಇದೆ. ಟೆಸ್ಟಿಂಗ್‌ ಕೂಡ ಸಾಧ್ಯವಿಲ್ಲದಷ್ಟು ಬೃಹತ್‌ ಜನಸಂಖ್ಯೆಯ ಭಾರತದಲ್ಲಿ ಇಂತಹ ಸ್ವಯಂಚಾಲಿತ ತಂತ್ರಜ್ಞಾನ ವ್ಯವಸ್ಥೆಗಳು ಹೆಚ್ಚು ಉಪಯೋಗಕ್ಕೆ ಬರುತ್ತವೆ. ಆದರೆ ಈ ಕೋವಿಡ್‌ ಅಲಾರಾಮ್‌ ತಂತ್ರಜ್ಞಾನ ಬ್ರಿಟನ್‌ನಲ್ಲಿ ಅಭಿವೃದ್ಧಿಗೊಂಡು ಭಾರತಕ್ಕೆ ಬರಲು ಎಷ್ಟು ಕಾಲ ಬೇಕಾಗಬಹದು ಎಂಬುದು  ತಿಳಿದಿಲ್ಲ.


ಇದನ್ನೂ ಓದಿ :ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...