Homeಅಂತರಾಷ್ಟ್ರೀಯದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

ದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

- Advertisement -
- Advertisement -

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇಯ ಅಲೆಯ ಪ್ರಭಾವ ಸಾಕಷ್ಟು ಇಳಿಮುಖವಾಗಿದೆ. ಅನೇಕ ನಗರಗಳು ಲಾಕ್‌ ಡೌನ್‌ ನಿಂದ ತೆರೆದುಕೊಳ್ಳುತ್ತಿವೆ. ಈ ನಡುವೆ ಜನರ ಓಡಾಟದಿಂದ ಮತ್ತಷ್ಟು ಸೋಂಕು ಹೆಚ್ಚಳವಾಗುವ ಆತಂಕವನ್ನು ತಜ್ಞರು ಹೊರಹಾಕಿದ್ದಾರೆ. ಕೊರೋನಾ ವ್ಯಾಕ್ಸಿನೇಶನ್‌ ಕೂಡ ಸೋಂಕು ನಿಯಂತ್ರಣಕ್ಕೆ ಸಹಾಯ ಮಾಡುವ ಇನ್ನೊಂದು ಅಸ್ತ್ರ. ವ್ಯಾಕ್ಸಿನೇಶನ್‌ ಜೊತೆಗೆ ಕೊರೋನಾ ಸೋಂಕಿತರನ್ನು ಅಂತರದಿಂದಲೇ ಗುರುತಿಸಿ ಕ್ವಾರಂಟೈನ್‌ ಅಥವಾ ಐಸೋಲೇಶನ್‌ ವ್ಯವಸ್ಥೆ ಮಾಡಲು ಸಾಧ್ಯವಾದರೆ? ಹೌದು ಬ್ರಿಟನ್‌ ಒಂದು ಇಂತಹ ತಂತ್ರಜ್ಞಾನದ ಸಂಶೋಧನೆಯಲ್ಲಿ ತೊಡಗಿದೆ. ಸಾರ್ವಜನಿಕ ಪ್ರದೇಶದಲ್ಲಿರುವ ಕೊರೋನಾ ಸೋಂಕಿತರನ್ನು ಪತ್ತೆಹಚ್ಚುವ ವಿಶೇಷ ಸ್ಕಾನಿಂಗ್‌ ತಂತ್ರಜ್ಞಾನವನ್ನು ಬ್ರಿಟನ್‌ ಮೂಲದ ಕಂಪನಿಯೊಂದು ಅಭಿವೃದ್ಧಿಪಡಿಸುತ್ತಿದೆ. ಈ ತಂತ್ರಜ್ಞಾನ ಉಪಕರಣಕ್ಕೆ ಕೋವಿಡ್‌ ಅಲರಾಮ್‌ ಎಂದು ಹೆಸರಿಸಲಾಗಿದೆ.

ಈ ವಿಶೇಷ ಕೋವಿಡ್‌ ಅಲರಾಮ್‌ ಜನನಿಬಿಡ ಮಾರುಕಟ್ಟೆ, ನಗರಗಳ ಬೀದಿಯಲ್ಲಿ ದೂರದಿಂದಲೇ ಜನರ ದೇಹವನ್ನು ಪರೀಕ್ಷಿಸಲು ಶಕ್ತವಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಅಂತರದಿಂದಲೇ ದೇಹದಲ್ಲಿರುವ ವೈರಸ್‌ ಲಕ್ಷಣವನ್ನು ಪತ್ತೆ ಹಚ್ಚಿ ಇದು ಅಲರಾಮ್‌ ನೀಡುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದರೆ ವೈರಸ್‌ನ ಜೀವರಾಸಾಯನಿಕ ಕ್ರಿಯೆಯಿಂದ ಆ ವ್ಯಕ್ತಿಯ ದೇಹದಲ್ಲಿ ವಿಭಿನ್ನವಾದ ವಾಸನೆ ಉತ್ಪತ್ತಿಯಾಗುತ್ತದೆ. ಈ ವಾಸನೆಯನ್ನು ಕಂಡು ಹಿಡಿಯುವ ಸೆನ್ಸಾರ್‌ಗಳನ್ನು ಅಭಿವೃದ್ಧಿಡಿಸಿದ್ದೇವೆ ಎಂದು ಲಂಡನ್‌ ಸ್ಕೂಲ್‌ ಆಫ್‌ ಹೈಜಿನ್‌ ಎಂಡ್‌ ಟ್ರೋಪಿಕಲ್‌ ಮೆಡಿಸಿನ್ಸ್‌ ( LSHTM) ಸಂಸ್ಥೆಯ ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ :ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

LSHTM ಮತ್ತು ಡರ್ಹಾಮ್‌ ವಿಶ್ವವಿದ್ಯಾಲಯದ  ರೋಬೋ ಸೈಂಟಿಫಿಕ್‌ ಲಿಮಿಟೆಡ್‌ ಎಂಬ ಬಯೋಟೆಕ್‌ ಕಂಪನಿಗಳು ಜಂಟಿಯಾಗಿ ಈ ಸಂಶೋಧನೆಯನ್ನು ನಡೆಸುತ್ತಿವೆ. ಈ ಸಂಬಂಧ ಒರ್ಗಾನಿಕ್‌ ಸೆಮಿಕಂಡಕ್ಟಿಂಗ್ ಸೆನ್ಸರ್‌ ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದುವರೆಗಿನ ಪರೀಕ್ಷೆಗಳು ಅತ್ಯಂತ ನಿಖರವಾದ ಫಲಿತಾಂಶಗಳನ್ನು ನೀಡಿವೆ. ಈ ಉಪಕರಣ ಕೊರೋನಾ ಟೆಸ್ಟಿಂಗ್‌ಗೆ ಸಂಬಂಧಿಸಿದಂತೆ ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದೆ ಎಂದು  ಲಂಡ್‌ ಸ್ಕೂಲ್‌ ಆಫ್‌ ಹೈಜಿನ್‌ನ ವಿಜ್ಞಾನಿ ಪ್ರೊಫೆಸರ್‌ ಜೇಮ್ಸ್‌ ಲೋಗಾನ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಸೆನ್ಸಾರ್‌ಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದರೆ ಸಾರ್ವಜನಿಕ ಪ್ರದೇಶಗಳಲ್ಲಿ ಯಶಸ್ವಿಯಾಗಿ ಅಳವಡಿಸಬಹುದು. ಇದು ಅಷ್ಟೊಂದು ದುಬಾರಿ ಬೆಲೆಯ ಉಪಕರಣವಲ್ಲ. ಮುಂದೆ ಸಂಭವಿಸಬಹುದಾದ ಇತರ ಸೋಂಕುಗಳನ್ನು ಈ ಉಪಕರಣದಿಂದ ಪತ್ತೆಹಚ್ಚಲು ಸಾಧ್ಯವಿದೆ ಎಂದು ಜೇಮ್ಸ್‌ ಲೋಗಾನ್‌ ಅಭಿಪ್ರಾಯಪಡುತ್ತಾರೆ.

ಇದುವರೆಗೆ ಈ ತಂತ್ರಜ್ಞಾನದಿಂದ 54 ಜನರಲ್ಲಿ 27 ಜನರು ಕೋವಿಡ್‌ ಸೋಂಕಿಗೆ ಒಳಗಾಗಿರುವುದನ್ನು ಪತ್ತೆ ಹಚ್ಚಲಾಗಿದೆ. ವ್ಯಕ್ತಿಗಳು ಸೋಂಕು ಲಕ್ಷಣ ಹೊಂದಿರದಿದ್ದರೂ ಈ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚಿದ್ದೇವೆ. ಸಾಕ್ಸ್‌ ಸೇರಿದಂತೆ ವಿವಿಧ ಸೂಕ್ಷ್ಮಾತಿ ಸೂಕ್ಷ್ಮ ವಾಸನೆಯನ್ನು ಉಪಕರಣ ಗುರುತಿಸಿ ಕೊರೋನಾ ಸೋಂಕು ಇರುವುದನ್ನು ಪತ್ತೆಹಚ್ಚಿದೆ.  ನಾವು ಆರಂಭದಲ್ಲಿ ಕೋವಿಡ್‌ ಸೋಂಕಿತರಲ್ಲಿ ವಿಭಿನ್ನವಾದ ವಾಸನೆಯೊಂದು ಇರುವುದನ್ನು ಮತ್ತು ಸೋಂಕು ಇಲ್ಲದಿರುವವರಲ್ಲಿ ಅಂತಹ ಯಾವುದೇ ವಾಸನೆ ಇಲ್ಲದಿರುವುದನ್ನು ಕಂಡುಕೊಂಡೆವು. ನಮ್ಮ ಅಧ್ಯಯನವು ಈ ಸೂಕ್ಷ್ಮ ವಾಸನೆಯನ್ನು ಗ್ರಹಿಸುವ ಸೆನ್ಸರ್‌ ಒಂದನ್ನು ರೂಪಿಸುವ ಪ್ರಯತ್ನಕ್ಕೆ ತೊಡಗಿದೆವು. ಅದು ಯಶಸ್ವಿಯಾಗಿದೆ. ಬೇರೆ ಎಲ್ಲಾ ರೀತಿಯ ಟೆಸ್ಟಿಂಗ್‌ ವಿಧಾನಗಳಿಗಿಂತ ನಮ್ಮ ಕೋವಿಡ್‌ ಅಲಾರಾಮ್‌ ಟೆಸ್ಟಿಂಗ್‌ ವಿಧಾನವು  ನಿಖರವಾಗಿರುವುದು ಕಂಡುಬಂದಿದೆ. 100%  ಸರಿಯಾದ ಫಲಿತಾಂಶವನ್ನು ನಾವು ಪಡೆದಿದ್ದೇವೆ ಎಂದು ರೋಬೋಸೈಂಟಿಫಿಕ್‌ ಸಂಸ್ಥೆಯು ಹೇಳಿದೆ.

ರೋಬೋ ಸೌಂಟಿಫಿಕ್‌ ಸಂಸ್ಥೆಯು ಈ ತಂತ್ರಜ್ಞಾನದ ಸಹಾಯದಿಂದ ಎರಡು ರೀತಿಯ ಉಪಕರಣವನ್ನು ತಯಾರಿಸಲು ಹೊರಟಿದೆ. ಒಂದು ಕೈಯಲ್ಲಿ ಹಿಡಿದುಕೊಳ್ಳಬಹುದಾದ ಸಣ್ಣ ಉಪಕರಣ. ಮತ್ತೊಂದು ಕೋಣೆಯಲ್ಲಿ ಅಳವಡಿಸಬಹುದಾದ ಟೆಸ್ಟಿಂಗ್‌ ಉಪಕರಣ. ಈ ಉಪಕರಣಗಳನ್ನು ಹೆಚ್ಚಾಗಿ ಸ್ಕೂಲ್‌, ವಿಮಾನಗಳು, ಸರ್ಕಾರಿ ಬಸ್‌ಗಳು, ಕಚೇರಿಗಳು, ಕಂಪನಿಗಳು ಸೇರಿ ಹಲವುಕಡೆ ಪರಿಣಾಮಕಾರಿಯಾಗಿ ಕೊರೋನಾ ಟೆಸ್ಟ್‌ಗೆ ಬಳಸಿಕೊಳ್ಳಬಹುದು ಎಂದು ಕಂಪನಿಯು ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಈ ಉಪಕರಣಗಳಿಂದ ಅತ್ಯಂತ ಸುಲಭವಾಗಿ ಕೊರೋನಾ ಪರೀಕ್ಷೆಯನ್ನು ನಡೆಸಬಹುದಾಗಿದೆ. ಆಟೋಮೇಟಿಕ್‌ ತಂತ್ರಜ್ಞಾನವಾಗಿರುವುದರಿಂದ ಕೊರೋನಾ ಟೆಸ್ಟಿಂಗ್‌ ನಡೆಸಲು ಹೆಚ್ಚಿನ ಜನರ ಅವಶ್ಯಕತೆಯೂ ಇಲ್ಲ. ಜನರು ಸ್ವಯೋ ಪ್ರೇರಿತರಾಗಿ ಪರೀಕ್ಷೆಗೆ ಒಳಗಾಗಿ ತಮಗೆ ತಾವೇ ಫಲಿತಾಂಶವನ್ನು ತಿಳಿದುಕೊಳ್ಳುವ ವ್ಯವಸ್ಥೆ ಇದಾಗಿದೆ. ಜನನಿಬಿಡ ಪ್ರದೇಶಗಳಲ್ಲಿ ಕೋವಿಡ್‌ ಸೋಂಕಿತರನ್ನು ಪತ್ತೆಹಚ್ಚಿ ಅಲಾರ್ಮ್‌ ನೀಡಲು ಈ ಉಪಕರಣ ಅತ್ಯಂತ ಸಹಾಯಕಾರಿಯಾಗಲಿದೆ ಎಂದು ರೋಬೋ ಸೈಂಟಿಫಿಕ್‌ ಸಂಸ್ಥೆ ಮಾಹಿತಿ ನೀಡಿದೆ.

ಒಟ್ಟಿನಲ್‌ ಕೊರೋನಾ ಟೆಸ್ಟಿಂಗ್‌ ಕೂಡ ಅತ್ಯಂತ ಅಪಾಯಕಾರಿ ಕೆಲಸವಾಗಿರುವ ನಮ್ಮ ದೇಶದಲ್ಲಿ ಇಂತಹ ಆಟೋಮ್ಯಾಟಿಕ್‌ ಉಪಕರಣಗಳ ಅವಶ್ಯಕತೆ ಇದೆ. ಟೆಸ್ಟಿಂಗ್‌ ಕೂಡ ಸಾಧ್ಯವಿಲ್ಲದಷ್ಟು ಬೃಹತ್‌ ಜನಸಂಖ್ಯೆಯ ಭಾರತದಲ್ಲಿ ಇಂತಹ ಸ್ವಯಂಚಾಲಿತ ತಂತ್ರಜ್ಞಾನ ವ್ಯವಸ್ಥೆಗಳು ಹೆಚ್ಚು ಉಪಯೋಗಕ್ಕೆ ಬರುತ್ತವೆ. ಆದರೆ ಈ ಕೋವಿಡ್‌ ಅಲಾರಾಮ್‌ ತಂತ್ರಜ್ಞಾನ ಬ್ರಿಟನ್‌ನಲ್ಲಿ ಅಭಿವೃದ್ಧಿಗೊಂಡು ಭಾರತಕ್ಕೆ ಬರಲು ಎಷ್ಟು ಕಾಲ ಬೇಕಾಗಬಹದು ಎಂಬುದು  ತಿಳಿದಿಲ್ಲ.


ಇದನ್ನೂ ಓದಿ :ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...