Homeಅಂತರಾಷ್ಟ್ರೀಯದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

ದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

- Advertisement -
- Advertisement -

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇಯ ಅಲೆಯ ಪ್ರಭಾವ ಸಾಕಷ್ಟು ಇಳಿಮುಖವಾಗಿದೆ. ಅನೇಕ ನಗರಗಳು ಲಾಕ್‌ ಡೌನ್‌ ನಿಂದ ತೆರೆದುಕೊಳ್ಳುತ್ತಿವೆ. ಈ ನಡುವೆ ಜನರ ಓಡಾಟದಿಂದ ಮತ್ತಷ್ಟು ಸೋಂಕು ಹೆಚ್ಚಳವಾಗುವ ಆತಂಕವನ್ನು ತಜ್ಞರು ಹೊರಹಾಕಿದ್ದಾರೆ. ಕೊರೋನಾ ವ್ಯಾಕ್ಸಿನೇಶನ್‌ ಕೂಡ ಸೋಂಕು ನಿಯಂತ್ರಣಕ್ಕೆ ಸಹಾಯ ಮಾಡುವ ಇನ್ನೊಂದು ಅಸ್ತ್ರ. ವ್ಯಾಕ್ಸಿನೇಶನ್‌ ಜೊತೆಗೆ ಕೊರೋನಾ ಸೋಂಕಿತರನ್ನು ಅಂತರದಿಂದಲೇ ಗುರುತಿಸಿ ಕ್ವಾರಂಟೈನ್‌ ಅಥವಾ ಐಸೋಲೇಶನ್‌ ವ್ಯವಸ್ಥೆ ಮಾಡಲು ಸಾಧ್ಯವಾದರೆ? ಹೌದು ಬ್ರಿಟನ್‌ ಒಂದು ಇಂತಹ ತಂತ್ರಜ್ಞಾನದ ಸಂಶೋಧನೆಯಲ್ಲಿ ತೊಡಗಿದೆ. ಸಾರ್ವಜನಿಕ ಪ್ರದೇಶದಲ್ಲಿರುವ ಕೊರೋನಾ ಸೋಂಕಿತರನ್ನು ಪತ್ತೆಹಚ್ಚುವ ವಿಶೇಷ ಸ್ಕಾನಿಂಗ್‌ ತಂತ್ರಜ್ಞಾನವನ್ನು ಬ್ರಿಟನ್‌ ಮೂಲದ ಕಂಪನಿಯೊಂದು ಅಭಿವೃದ್ಧಿಪಡಿಸುತ್ತಿದೆ. ಈ ತಂತ್ರಜ್ಞಾನ ಉಪಕರಣಕ್ಕೆ ಕೋವಿಡ್‌ ಅಲರಾಮ್‌ ಎಂದು ಹೆಸರಿಸಲಾಗಿದೆ.

ಈ ವಿಶೇಷ ಕೋವಿಡ್‌ ಅಲರಾಮ್‌ ಜನನಿಬಿಡ ಮಾರುಕಟ್ಟೆ, ನಗರಗಳ ಬೀದಿಯಲ್ಲಿ ದೂರದಿಂದಲೇ ಜನರ ದೇಹವನ್ನು ಪರೀಕ್ಷಿಸಲು ಶಕ್ತವಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಅಂತರದಿಂದಲೇ ದೇಹದಲ್ಲಿರುವ ವೈರಸ್‌ ಲಕ್ಷಣವನ್ನು ಪತ್ತೆ ಹಚ್ಚಿ ಇದು ಅಲರಾಮ್‌ ನೀಡುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದರೆ ವೈರಸ್‌ನ ಜೀವರಾಸಾಯನಿಕ ಕ್ರಿಯೆಯಿಂದ ಆ ವ್ಯಕ್ತಿಯ ದೇಹದಲ್ಲಿ ವಿಭಿನ್ನವಾದ ವಾಸನೆ ಉತ್ಪತ್ತಿಯಾಗುತ್ತದೆ. ಈ ವಾಸನೆಯನ್ನು ಕಂಡು ಹಿಡಿಯುವ ಸೆನ್ಸಾರ್‌ಗಳನ್ನು ಅಭಿವೃದ್ಧಿಡಿಸಿದ್ದೇವೆ ಎಂದು ಲಂಡನ್‌ ಸ್ಕೂಲ್‌ ಆಫ್‌ ಹೈಜಿನ್‌ ಎಂಡ್‌ ಟ್ರೋಪಿಕಲ್‌ ಮೆಡಿಸಿನ್ಸ್‌ ( LSHTM) ಸಂಸ್ಥೆಯ ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ :ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

LSHTM ಮತ್ತು ಡರ್ಹಾಮ್‌ ವಿಶ್ವವಿದ್ಯಾಲಯದ  ರೋಬೋ ಸೈಂಟಿಫಿಕ್‌ ಲಿಮಿಟೆಡ್‌ ಎಂಬ ಬಯೋಟೆಕ್‌ ಕಂಪನಿಗಳು ಜಂಟಿಯಾಗಿ ಈ ಸಂಶೋಧನೆಯನ್ನು ನಡೆಸುತ್ತಿವೆ. ಈ ಸಂಬಂಧ ಒರ್ಗಾನಿಕ್‌ ಸೆಮಿಕಂಡಕ್ಟಿಂಗ್ ಸೆನ್ಸರ್‌ ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದುವರೆಗಿನ ಪರೀಕ್ಷೆಗಳು ಅತ್ಯಂತ ನಿಖರವಾದ ಫಲಿತಾಂಶಗಳನ್ನು ನೀಡಿವೆ. ಈ ಉಪಕರಣ ಕೊರೋನಾ ಟೆಸ್ಟಿಂಗ್‌ಗೆ ಸಂಬಂಧಿಸಿದಂತೆ ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದೆ ಎಂದು  ಲಂಡ್‌ ಸ್ಕೂಲ್‌ ಆಫ್‌ ಹೈಜಿನ್‌ನ ವಿಜ್ಞಾನಿ ಪ್ರೊಫೆಸರ್‌ ಜೇಮ್ಸ್‌ ಲೋಗಾನ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಸೆನ್ಸಾರ್‌ಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದರೆ ಸಾರ್ವಜನಿಕ ಪ್ರದೇಶಗಳಲ್ಲಿ ಯಶಸ್ವಿಯಾಗಿ ಅಳವಡಿಸಬಹುದು. ಇದು ಅಷ್ಟೊಂದು ದುಬಾರಿ ಬೆಲೆಯ ಉಪಕರಣವಲ್ಲ. ಮುಂದೆ ಸಂಭವಿಸಬಹುದಾದ ಇತರ ಸೋಂಕುಗಳನ್ನು ಈ ಉಪಕರಣದಿಂದ ಪತ್ತೆಹಚ್ಚಲು ಸಾಧ್ಯವಿದೆ ಎಂದು ಜೇಮ್ಸ್‌ ಲೋಗಾನ್‌ ಅಭಿಪ್ರಾಯಪಡುತ್ತಾರೆ.

ಇದುವರೆಗೆ ಈ ತಂತ್ರಜ್ಞಾನದಿಂದ 54 ಜನರಲ್ಲಿ 27 ಜನರು ಕೋವಿಡ್‌ ಸೋಂಕಿಗೆ ಒಳಗಾಗಿರುವುದನ್ನು ಪತ್ತೆ ಹಚ್ಚಲಾಗಿದೆ. ವ್ಯಕ್ತಿಗಳು ಸೋಂಕು ಲಕ್ಷಣ ಹೊಂದಿರದಿದ್ದರೂ ಈ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚಿದ್ದೇವೆ. ಸಾಕ್ಸ್‌ ಸೇರಿದಂತೆ ವಿವಿಧ ಸೂಕ್ಷ್ಮಾತಿ ಸೂಕ್ಷ್ಮ ವಾಸನೆಯನ್ನು ಉಪಕರಣ ಗುರುತಿಸಿ ಕೊರೋನಾ ಸೋಂಕು ಇರುವುದನ್ನು ಪತ್ತೆಹಚ್ಚಿದೆ.  ನಾವು ಆರಂಭದಲ್ಲಿ ಕೋವಿಡ್‌ ಸೋಂಕಿತರಲ್ಲಿ ವಿಭಿನ್ನವಾದ ವಾಸನೆಯೊಂದು ಇರುವುದನ್ನು ಮತ್ತು ಸೋಂಕು ಇಲ್ಲದಿರುವವರಲ್ಲಿ ಅಂತಹ ಯಾವುದೇ ವಾಸನೆ ಇಲ್ಲದಿರುವುದನ್ನು ಕಂಡುಕೊಂಡೆವು. ನಮ್ಮ ಅಧ್ಯಯನವು ಈ ಸೂಕ್ಷ್ಮ ವಾಸನೆಯನ್ನು ಗ್ರಹಿಸುವ ಸೆನ್ಸರ್‌ ಒಂದನ್ನು ರೂಪಿಸುವ ಪ್ರಯತ್ನಕ್ಕೆ ತೊಡಗಿದೆವು. ಅದು ಯಶಸ್ವಿಯಾಗಿದೆ. ಬೇರೆ ಎಲ್ಲಾ ರೀತಿಯ ಟೆಸ್ಟಿಂಗ್‌ ವಿಧಾನಗಳಿಗಿಂತ ನಮ್ಮ ಕೋವಿಡ್‌ ಅಲಾರಾಮ್‌ ಟೆಸ್ಟಿಂಗ್‌ ವಿಧಾನವು  ನಿಖರವಾಗಿರುವುದು ಕಂಡುಬಂದಿದೆ. 100%  ಸರಿಯಾದ ಫಲಿತಾಂಶವನ್ನು ನಾವು ಪಡೆದಿದ್ದೇವೆ ಎಂದು ರೋಬೋಸೈಂಟಿಫಿಕ್‌ ಸಂಸ್ಥೆಯು ಹೇಳಿದೆ.

ರೋಬೋ ಸೌಂಟಿಫಿಕ್‌ ಸಂಸ್ಥೆಯು ಈ ತಂತ್ರಜ್ಞಾನದ ಸಹಾಯದಿಂದ ಎರಡು ರೀತಿಯ ಉಪಕರಣವನ್ನು ತಯಾರಿಸಲು ಹೊರಟಿದೆ. ಒಂದು ಕೈಯಲ್ಲಿ ಹಿಡಿದುಕೊಳ್ಳಬಹುದಾದ ಸಣ್ಣ ಉಪಕರಣ. ಮತ್ತೊಂದು ಕೋಣೆಯಲ್ಲಿ ಅಳವಡಿಸಬಹುದಾದ ಟೆಸ್ಟಿಂಗ್‌ ಉಪಕರಣ. ಈ ಉಪಕರಣಗಳನ್ನು ಹೆಚ್ಚಾಗಿ ಸ್ಕೂಲ್‌, ವಿಮಾನಗಳು, ಸರ್ಕಾರಿ ಬಸ್‌ಗಳು, ಕಚೇರಿಗಳು, ಕಂಪನಿಗಳು ಸೇರಿ ಹಲವುಕಡೆ ಪರಿಣಾಮಕಾರಿಯಾಗಿ ಕೊರೋನಾ ಟೆಸ್ಟ್‌ಗೆ ಬಳಸಿಕೊಳ್ಳಬಹುದು ಎಂದು ಕಂಪನಿಯು ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಈ ಉಪಕರಣಗಳಿಂದ ಅತ್ಯಂತ ಸುಲಭವಾಗಿ ಕೊರೋನಾ ಪರೀಕ್ಷೆಯನ್ನು ನಡೆಸಬಹುದಾಗಿದೆ. ಆಟೋಮೇಟಿಕ್‌ ತಂತ್ರಜ್ಞಾನವಾಗಿರುವುದರಿಂದ ಕೊರೋನಾ ಟೆಸ್ಟಿಂಗ್‌ ನಡೆಸಲು ಹೆಚ್ಚಿನ ಜನರ ಅವಶ್ಯಕತೆಯೂ ಇಲ್ಲ. ಜನರು ಸ್ವಯೋ ಪ್ರೇರಿತರಾಗಿ ಪರೀಕ್ಷೆಗೆ ಒಳಗಾಗಿ ತಮಗೆ ತಾವೇ ಫಲಿತಾಂಶವನ್ನು ತಿಳಿದುಕೊಳ್ಳುವ ವ್ಯವಸ್ಥೆ ಇದಾಗಿದೆ. ಜನನಿಬಿಡ ಪ್ರದೇಶಗಳಲ್ಲಿ ಕೋವಿಡ್‌ ಸೋಂಕಿತರನ್ನು ಪತ್ತೆಹಚ್ಚಿ ಅಲಾರ್ಮ್‌ ನೀಡಲು ಈ ಉಪಕರಣ ಅತ್ಯಂತ ಸಹಾಯಕಾರಿಯಾಗಲಿದೆ ಎಂದು ರೋಬೋ ಸೈಂಟಿಫಿಕ್‌ ಸಂಸ್ಥೆ ಮಾಹಿತಿ ನೀಡಿದೆ.

ಒಟ್ಟಿನಲ್‌ ಕೊರೋನಾ ಟೆಸ್ಟಿಂಗ್‌ ಕೂಡ ಅತ್ಯಂತ ಅಪಾಯಕಾರಿ ಕೆಲಸವಾಗಿರುವ ನಮ್ಮ ದೇಶದಲ್ಲಿ ಇಂತಹ ಆಟೋಮ್ಯಾಟಿಕ್‌ ಉಪಕರಣಗಳ ಅವಶ್ಯಕತೆ ಇದೆ. ಟೆಸ್ಟಿಂಗ್‌ ಕೂಡ ಸಾಧ್ಯವಿಲ್ಲದಷ್ಟು ಬೃಹತ್‌ ಜನಸಂಖ್ಯೆಯ ಭಾರತದಲ್ಲಿ ಇಂತಹ ಸ್ವಯಂಚಾಲಿತ ತಂತ್ರಜ್ಞಾನ ವ್ಯವಸ್ಥೆಗಳು ಹೆಚ್ಚು ಉಪಯೋಗಕ್ಕೆ ಬರುತ್ತವೆ. ಆದರೆ ಈ ಕೋವಿಡ್‌ ಅಲಾರಾಮ್‌ ತಂತ್ರಜ್ಞಾನ ಬ್ರಿಟನ್‌ನಲ್ಲಿ ಅಭಿವೃದ್ಧಿಗೊಂಡು ಭಾರತಕ್ಕೆ ಬರಲು ಎಷ್ಟು ಕಾಲ ಬೇಕಾಗಬಹದು ಎಂಬುದು  ತಿಳಿದಿಲ್ಲ.


ಇದನ್ನೂ ಓದಿ :ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...