Homeರಾಷ್ಟ್ರೀಯಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

ಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

- Advertisement -
- Advertisement -

ಸರ್ಕಾರವು ತನ್ನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹದ ಕಾನೂನನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶದಲ್ಲಿ ಹೇಳಿದ್ದು, ಈಗಾಗಲೇ ದೇಶದ್ರೋಹದ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಬ್ರಿಟೀಷ್‌‌‌‌ ವಸಾಹತುಶಾಹಿ ಯುಗದ ಆಳ್ವಿಕೆಯ ಅಡಿಯಲ್ಲಿ ಸ್ವಾತಂತ್ಯ್ರ ಹೋರಾಟಗಾರರನ್ನು ಹಣಿಯಲು ಬೇಕಾಗಿ ರಚಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪರಿಶೀಲಿಸುವಂತೆ ಮತ್ತು ಅದನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿರುವ ಹಲವು ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇಂದು ನೀಡಿದ ಮಹತ್ವದ ಆದೇಶದ ಕುರಿತು ಕೆಲವು ಅಂಶಗಳು ಇಲ್ಲಿದೆ:

  • ಸರ್ಕಾರವು ದೇಶದ್ರೋಹ ಕಾನೂನನ್ನು ಮರುಪರಿಶೀಲಿಸುತ್ತಿರುವಾಗ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಾರಾಷ್ಟ್ರದ ಹನುಮಾನ್ ಚಾಲೀಸಾ ಪಠಣದ ಮೇಲೆ ದೇಶದ್ರೋಹ ಕಾನೂನನ್ನು ಅನ್ವಯಿಸಿದ ಪ್ರಕರಣಗಳಲ್ಲಿ ಅದರ ದುರುಪಯೋಗವನ್ನು ಆಪಾದಿಸಿ ಕಾನೂನನ್ನು ಪ್ರಶ್ನಿಸಿದ ಅರ್ಜಿಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

  • “ಮುಂದಿನ ಮರು ಪರಿಶೀಲನೆ ಮುಗಿಯುವವರೆಗೆ ದೇಶದ್ರೋಹ ಕಾನೂನನ್ನು ಬಳಸದಿರುವುದು ಸೂಕ್ತವಾಗಿರುತ್ತದೆ. ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು 124 ಎ (ದೇಶದ್ರೋಹದ ಕಾನೂನು) ಅಡಿಯಲ್ಲಿ ಯಾವುದೇ ಎಫ್‌ಐಆರ್ ಅನ್ನು ನೋಂದಾಯಿಸುವುದನ್ನು ನಿಲ್ಲಿಸುತ್ತವೆ ಎಂದು ನಾವು ಭಾವಿಸುತ್ತೇವೆ ಮತ್ತು ನಿರೀಕ್ಷಿಸುತ್ತೇವೆ’’ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಹೇಳಿದ್ದಾರೆ.
  • ಯಾವುದೇ ಹೊಸ ಪ್ರಕರಣಗಳು ದಾಖಲಾದರೆ, ಆರೋಪಿಗಳು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರಿಂಕೋರ್ಟ್‌ ಹೇಳಿದೆ.
  • “ಕಾನೂನಿನ ದುರುಪಯೋಗವನ್ನು ತಡೆಗಟ್ಟಲು ರಾಜ್ಯಗಳಿಗೆ ನಿರ್ದೇಶನಗಳನ್ನು ರವಾನಿಸಲು ಒಕ್ಕೂಟ ಸರ್ಕಾರದ ಅಡಿಯಲ್ಲಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
  • ದೇಶದ್ರೋಹ ಕಾನೂನನ್ನು ಪರಿಶೀಲಿಸುವ ನಿರ್ಧಾರವನ್ನು ಪ್ರಕಟಿಸಿದ್ದ ಒಕ್ಕೂಟ ಸರ್ಕಾರವು ಕಾನೂನನ್ನು ತಡೆಹಿಡಿಯುವುದರ ಪರವಾಗಿಲ್ಲ ಎಂದು ವಾದಿಸಿತ್ತು. ಸದ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕು ಎಂದು ಶಿಫಾರಸು ಮಾಡಿತ್ತು.
  • “ಮುಂಬರುವ ಎಫ್‌ಐಆರ್‌ಗಳಲ್ಲಿ ದೇಶದ್ರೋಹದ ಆರೋಪವನ್ನು ದಾಖಲಿಸಬೇಕೇ ಎಂಬುದರ ಕುರಿತು ಸದ್ಯಕ್ಕೆ ಸೂಪರಿಂಟೆಂಡೆಂಟ್ ಅಥವಾ ಅದಕ್ಕಿಂತ ಹೆಚ್ಚಿನ ಹಂತದ ಪೊಲೀಸ್ ಅಧಿಕಾರಿ ನಿರ್ಧರಿಸಬೇಕು ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಪ್ರಸ್ತಾಪಿಸಿದೆ” ಎಂದು ಒಕ್ಕೂಟ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

  • ಬಾಕಿ ಇರುವ ಪ್ರಕರಣಗಳು ಈಗಾಗಲೇ ನ್ಯಾಯಾಲಯದ ಮುಂದೆ ಇವೆ ಎಂದು ಸರ್ಕಾರ ಹೇಳಿದೆ.
  • “ಭಾರತದಾದ್ಯಂತ ದಾಖಲಾದ ದೇಶದ್ರೋಹ ಪ್ರಕರಣಗಳಲ್ಲಿನ ಅಪರಾಧಗಳ ಗಂಭೀರತೆ ನಮಗೆ ತಿಳಿದಿಲ್ಲ. ಈ ಪ್ರಕರಣಗಳಲ್ಲಿ ಇತರ ಭಯೋತ್ಪಾದನೆ ಆರೋಪಗಳೂ ಇರಬಹುದು. ಬಾಕಿ ಇರುವ ಪ್ರಕರಣಗಳು ಪೊಲೀಸ್ ಅಥವಾ ಸರ್ಕಾರದ ಮುಂದೆ ಇರುವುದಲ್ಲ, ಅವು ನ್ಯಾಯಾಲಯದ ಮುಂದೆ ಇವೆ. ಹಾಗಾಗಿ, ನ್ಯಾಯಾಲಯಗಳ ವಿವೇಕವನ್ನು ನಾವು ಊಹಿಸಬಾರದು” ಎಂದು ಮೆಹ್ತಾ ಹೇಳಿದ್ದಾರೆ.
  • ಆದರೆ ಅರ್ಜಿದಾರರು ಸರ್ಕಾರದ ನಿಲುವನ್ನು ವಿರೋಧಿಸಿ, ವಸಾಹತುಶಾಹಿ ಯುಗದ ಕಾನೂನನ್ನು ಸರ್ಕಾರವು ಪರಿಶೀಲಿಸುವವರೆಗೆ ದೇಶದ್ರೋಹ ಕಾನೂನನ್ನು ತಡೆಹಿಡಿಯುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...