Homeರಾಷ್ಟ್ರೀಯಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

ಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

- Advertisement -
- Advertisement -

ಸರ್ಕಾರವು ತನ್ನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹದ ಕಾನೂನನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶದಲ್ಲಿ ಹೇಳಿದ್ದು, ಈಗಾಗಲೇ ದೇಶದ್ರೋಹದ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಬ್ರಿಟೀಷ್‌‌‌‌ ವಸಾಹತುಶಾಹಿ ಯುಗದ ಆಳ್ವಿಕೆಯ ಅಡಿಯಲ್ಲಿ ಸ್ವಾತಂತ್ಯ್ರ ಹೋರಾಟಗಾರರನ್ನು ಹಣಿಯಲು ಬೇಕಾಗಿ ರಚಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪರಿಶೀಲಿಸುವಂತೆ ಮತ್ತು ಅದನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿರುವ ಹಲವು ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇಂದು ನೀಡಿದ ಮಹತ್ವದ ಆದೇಶದ ಕುರಿತು ಕೆಲವು ಅಂಶಗಳು ಇಲ್ಲಿದೆ:

  • ಸರ್ಕಾರವು ದೇಶದ್ರೋಹ ಕಾನೂನನ್ನು ಮರುಪರಿಶೀಲಿಸುತ್ತಿರುವಾಗ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಾರಾಷ್ಟ್ರದ ಹನುಮಾನ್ ಚಾಲೀಸಾ ಪಠಣದ ಮೇಲೆ ದೇಶದ್ರೋಹ ಕಾನೂನನ್ನು ಅನ್ವಯಿಸಿದ ಪ್ರಕರಣಗಳಲ್ಲಿ ಅದರ ದುರುಪಯೋಗವನ್ನು ಆಪಾದಿಸಿ ಕಾನೂನನ್ನು ಪ್ರಶ್ನಿಸಿದ ಅರ್ಜಿಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

  • “ಮುಂದಿನ ಮರು ಪರಿಶೀಲನೆ ಮುಗಿಯುವವರೆಗೆ ದೇಶದ್ರೋಹ ಕಾನೂನನ್ನು ಬಳಸದಿರುವುದು ಸೂಕ್ತವಾಗಿರುತ್ತದೆ. ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು 124 ಎ (ದೇಶದ್ರೋಹದ ಕಾನೂನು) ಅಡಿಯಲ್ಲಿ ಯಾವುದೇ ಎಫ್‌ಐಆರ್ ಅನ್ನು ನೋಂದಾಯಿಸುವುದನ್ನು ನಿಲ್ಲಿಸುತ್ತವೆ ಎಂದು ನಾವು ಭಾವಿಸುತ್ತೇವೆ ಮತ್ತು ನಿರೀಕ್ಷಿಸುತ್ತೇವೆ’’ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಹೇಳಿದ್ದಾರೆ.
  • ಯಾವುದೇ ಹೊಸ ಪ್ರಕರಣಗಳು ದಾಖಲಾದರೆ, ಆರೋಪಿಗಳು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರಿಂಕೋರ್ಟ್‌ ಹೇಳಿದೆ.
  • “ಕಾನೂನಿನ ದುರುಪಯೋಗವನ್ನು ತಡೆಗಟ್ಟಲು ರಾಜ್ಯಗಳಿಗೆ ನಿರ್ದೇಶನಗಳನ್ನು ರವಾನಿಸಲು ಒಕ್ಕೂಟ ಸರ್ಕಾರದ ಅಡಿಯಲ್ಲಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
  • ದೇಶದ್ರೋಹ ಕಾನೂನನ್ನು ಪರಿಶೀಲಿಸುವ ನಿರ್ಧಾರವನ್ನು ಪ್ರಕಟಿಸಿದ್ದ ಒಕ್ಕೂಟ ಸರ್ಕಾರವು ಕಾನೂನನ್ನು ತಡೆಹಿಡಿಯುವುದರ ಪರವಾಗಿಲ್ಲ ಎಂದು ವಾದಿಸಿತ್ತು. ಸದ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕು ಎಂದು ಶಿಫಾರಸು ಮಾಡಿತ್ತು.
  • “ಮುಂಬರುವ ಎಫ್‌ಐಆರ್‌ಗಳಲ್ಲಿ ದೇಶದ್ರೋಹದ ಆರೋಪವನ್ನು ದಾಖಲಿಸಬೇಕೇ ಎಂಬುದರ ಕುರಿತು ಸದ್ಯಕ್ಕೆ ಸೂಪರಿಂಟೆಂಡೆಂಟ್ ಅಥವಾ ಅದಕ್ಕಿಂತ ಹೆಚ್ಚಿನ ಹಂತದ ಪೊಲೀಸ್ ಅಧಿಕಾರಿ ನಿರ್ಧರಿಸಬೇಕು ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಪ್ರಸ್ತಾಪಿಸಿದೆ” ಎಂದು ಒಕ್ಕೂಟ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

  • ಬಾಕಿ ಇರುವ ಪ್ರಕರಣಗಳು ಈಗಾಗಲೇ ನ್ಯಾಯಾಲಯದ ಮುಂದೆ ಇವೆ ಎಂದು ಸರ್ಕಾರ ಹೇಳಿದೆ.
  • “ಭಾರತದಾದ್ಯಂತ ದಾಖಲಾದ ದೇಶದ್ರೋಹ ಪ್ರಕರಣಗಳಲ್ಲಿನ ಅಪರಾಧಗಳ ಗಂಭೀರತೆ ನಮಗೆ ತಿಳಿದಿಲ್ಲ. ಈ ಪ್ರಕರಣಗಳಲ್ಲಿ ಇತರ ಭಯೋತ್ಪಾದನೆ ಆರೋಪಗಳೂ ಇರಬಹುದು. ಬಾಕಿ ಇರುವ ಪ್ರಕರಣಗಳು ಪೊಲೀಸ್ ಅಥವಾ ಸರ್ಕಾರದ ಮುಂದೆ ಇರುವುದಲ್ಲ, ಅವು ನ್ಯಾಯಾಲಯದ ಮುಂದೆ ಇವೆ. ಹಾಗಾಗಿ, ನ್ಯಾಯಾಲಯಗಳ ವಿವೇಕವನ್ನು ನಾವು ಊಹಿಸಬಾರದು” ಎಂದು ಮೆಹ್ತಾ ಹೇಳಿದ್ದಾರೆ.
  • ಆದರೆ ಅರ್ಜಿದಾರರು ಸರ್ಕಾರದ ನಿಲುವನ್ನು ವಿರೋಧಿಸಿ, ವಸಾಹತುಶಾಹಿ ಯುಗದ ಕಾನೂನನ್ನು ಸರ್ಕಾರವು ಪರಿಶೀಲಿಸುವವರೆಗೆ ದೇಶದ್ರೋಹ ಕಾನೂನನ್ನು ತಡೆಹಿಡಿಯುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...