Homeಮುಖಪುಟತಾಂತ್ರಿಕ ದೋಷದಿಂದ ಕೇರಳದಲ್ಲಿ ನಿಂತಿರುವ ಬ್ರಿಟಿಷ್ ಎಫ್‌-35; ಯುಕೆ ತಂತ್ರಜ್ಞರಿಂದ ನಾಳೆ ಪರಿಶೀಲನೆ

ತಾಂತ್ರಿಕ ದೋಷದಿಂದ ಕೇರಳದಲ್ಲಿ ನಿಂತಿರುವ ಬ್ರಿಟಿಷ್ ಎಫ್‌-35; ಯುಕೆ ತಂತ್ರಜ್ಞರಿಂದ ನಾಳೆ ಪರಿಶೀಲನೆ

- Advertisement -
- Advertisement -

ಕಳೆದ ತಿಂಗಳು ತುರ್ತು ಭೂಸ್ಪರ್ಶದ ನಂತರ ಮೂರು ವಾರಗಳಿಂದ ಕೇರಳದಲ್ಲೇ ನಿಂತಿರುವ ಎಫ್‌-35 ಫೈಟರ್ ಜೆಟ್ ಅನ್ನು ಪರೀಕ್ಷಿಸಲು ಸುಮಾರು 25 ಬ್ರಿಟಿಷ್ ವಾಯುಯಾನ ಎಂಜಿನಿಯರ್‌ಗಳ ತಂಡವು ಭಾನುವಾರ ತಿರುವನಂತಪುರಂಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಎಫ್‌-35 ನಲ್ಲಿನ ದೋಷವನ್ನು ತಂತ್ರಜ್ಞರು ನಿರ್ಣಯಿಸುತ್ತಾರೆ, ಫೈಟರ್ ಜೆಟ್ ಅನ್ನು ಭಾರತದಲ್ಲಿ ದುರಸ್ತಿ ಮಾಡಬಹುದೇ ಅಥವಾ ಯುಕೆಗೆ ಹಿಂತಿರುಗಿಸಬೇಕೇ ಎಂದು ನಿರ್ಧರಿಸುತ್ತಾರೆ.

ಹತ್ತಿರದ ಎಂಆರ್‌ಒ (ನಿರ್ವಹಣೆ, ದುರಸ್ತಿ ಮತ್ತು ಕಾರ್ಯಾಚರಣೆಗಳು) ಸೌಲಭ್ಯದಲ್ಲಿ ಬ್ರಿಟಿಷ್ ರಾಯಲ್ ನೇವಿಯ ಎಫ್‌-35 ದುರಸ್ತಿಗೆ ಸಹಾಯ ಮಾಡಲು ಭಾರತವು ಮುಂದಾಗಿತ್ತು.

ಇದಕ್ಕೂ ಮೊದಲು, ಎಫ್‌-35 ಅನ್ನು ಭಾಗಶಃ ಕತ್ತರಿಸಿ ಸಾರಿಗೆ ವಿಮಾನದಲ್ಲಿ ಯುಕೆಗೆ ಹಿಂತಿರುಗಿಸಲಾಗುತ್ತದೆ ಎಂಬ ವರದಿಗಳು ಬಂದವು. ಫೈಟರ್ ವಿಮಾನವನ್ನು ಅನ್ನು ದುರಸ್ತಿ ಮಾಡಲು ಮತ್ತು ಅದನ್ನು ವಾಯುಯೋಗ್ಯವಾಗಿಸಲು ನಡೆದ ಅನೇಕ ಪ್ರಯತ್ನಗಳು ವಿಫಲವಾಗಿವೆ.

ಜೂನ್ 14 ರಂದು, ಎಚ್‌ಎಂಎಸ್‌ ಪ್ರಿನ್ಸ್ ಆಫ್ ವೇಲ್ಸ್ ಕ್ಯಾರಿಯರ್ ಸ್ಟ್ರೈಕ್ ಗ್ರೂಪ್‌ನ ಭಾಗವಾಗಿರುವ ಬ್ರಿಟಿಷ್ ಎಫ್‌-35ಬಿ, ಕೇರಳ ಕರಾವಳಿಯಿಂದ 100 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ, ಪ್ರತಿಕೂಲ ಹವಾಮಾನ ಮತ್ತು ಕಡಿಮೆ ಇಂಧನದಿಂದಾಗಿ ತಿರುವನಂತಪುರಂಗೆ ತುರ್ತು ಮಾರ್ಗ ಬದಲಾವಣೆ ಮಾಡಲಾಯಿತು.

ಭಾರತೀಯ ವಾಯುಪಡೆಯು ಸುರಕ್ಷಿತ ಲ್ಯಾಂಡಿಂಗ್‌ಗೆ ಅನುಕೂಲ ಮಾಡಿಟ್ಟಿ, ಇಂಧನ ಮತ್ತು ಲಾಜಿಸ್ಟಿಕ್ಸ್ ಸಹಾಯವನ್ನು ಒದಗಿಸಿತು.

ಆದರೂ, ಫೈಟರ್ ಜೆಟ್ ತನ್ನ ಸ್ಥಳಕ್ಕೆ ಹಿಂತಿರುಗಲು ತಯಾರಿ ನಡೆಸುತ್ತಿರುವಾಗ, ನಿರ್ಗಮನ ಪೂರ್ವ ತಪಾಸಣೆಯ ಸಮಯದಲ್ಲಿ ಹೈಡ್ರಾಲಿಕ್ ವೈಫಲ್ಯ ಪತ್ತೆಯಾಗಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಏಕೆಂದರೆ, ಇದು ಜೆಟ್‌ನ ಸುರಕ್ಷಿತವಾಗಿ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಸಾಮರ್ಥ್ಯದ ಮೇಲೆ ಪರಿಣಾಮ ಬೀರಬಹುದು. ಮೂವರು ತಂತ್ರಜ್ಞರನ್ನು ಒಳಗೊಂಡ ಒಂದು ಸಣ್ಣ ರಾಯಲ್ ನೇವಿ ತಂಡವು ಅಸಮರ್ಪಕ ಕಾರ್ಯವನ್ನು ಸರಿಪಡಿಸಲು ಪ್ರಯತ್ನಿಸಿತು. ಆದರೆ, ಸಮಸ್ಯೆಯ ಸಂಕೀರ್ಣತೆಯಿಂದಾಗಿ ಅದು ವಿಫಲವಾಯಿತು.

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ರಕ್ಷಣೆಯಲ್ಲಿ ಜೆಟ್ ಅನ್ನು ವಿಮಾನ ನಿಲ್ದಾಣದ ಬೇ 4 ರಲ್ಲಿ ನಿಲ್ಲಿಸಲಾಗಿದೆ. ಆರಂಭದಲ್ಲಿ, ಕೇರಳದಲ್ಲಿ ಮಳೆಗಾಲದ ಮಳೆಯ ಹೊರತಾಗಿಯೂ, ಜೆಟ್ ಅನ್ನು ಹ್ಯಾಂಗರ್‌ಗೆ ಸ್ಥಳಾಂತರಿಸಲು ಏರ್ ಇಂಡಿಯಾದಿಂದ ಬಂದ ಪ್ರಸ್ತಾಪವನ್ನು ಬ್ರಿಟಿಷ್ ರಾಯಲ್ ನೇವಿ ನಿರಾಕರಿಸಿತು. ನಂತರ, ಬ್ರಿಟಿಷ್ ನೌಕಾಪಡೆಯು ಜೆಟ್ ಅನ್ನು ಹ್ಯಾಂಗರ್‌ಗೆ ಸ್ಥಳಾಂತರಿಸಲು ಒಪ್ಪಿಕೊಂಡಿತು.

ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...