Homeಅಂತರಾಷ್ಟ್ರೀಯಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

- Advertisement -
- Advertisement -

ಯುನೈಟೆಡ್ ಕಿಂಗ್‌ಡಂನ 200ಕ್ಕೂ ಹೆಚ್ಚು ಪ್ರಮುಖ ನಾಗರಿಕರು, ಕಲಾವಿದರು, ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು 50ಕ್ಕೂ ಹೆಚ್ಚು ಹಿರಿಯ ಶಿಕ್ಷಣ ತಜ್ಞರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವು ಅನುಸರಿಸುತ್ತಿರುವ “ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಧೋರಣೆ” ಖಂಡಿಸಿ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.

ಲೇಬರ್ ಪಕ್ಷದ ಜೆರೆಮಿ ಕಾರ್ಬಿನ್ ಮತ್ತು ಜಾನ್ ಮೆಕ್‌ಡೊನೆಲ್, ಗ್ರೀನ್ ಪಾರ್ಟಿಯ ಕ್ಯಾರೋಲಿನ್ ಲ್ಯೂಕಾಸ್, ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಬ್ರೆಂಡನ್ ಒಹರಾ (ಅಂತರರಾಷ್ಟ್ರೀಯ ಮಾನವ ಹಕ್ಕುಗಳ ವಕ್ತಾರ), ಶಮಿ ಚಕ್ರವರ್ತಿ (ನಾಗರಿಕ ಸ್ವಾತಂತ್ರ್ಯ ಗುಂಪು ಲಿಬರ್ಟಿಯ ಮಾಜಿ ನಿರ್ದೇಶಕ) ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬ್ರಿಟಿಷ್ ಸಂಸದರು ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ಪತ್ರವನ್ನು ಬೆಂಬಲಿಸುವ ಪ್ರಮುಖ ಸಾಂಸ್ಕೃತಿಕ ವ್ಯಕ್ತಿಗಳಲ್ಲಿ ಡ್ಯಾನಿ ಬೊಯೆಲ್ (ಸ್ಲಮ್‌ಡಾಗ್ ಮಿಲೆನಿಯರ್ ನಿರ್ದೇಶಕ), ಚಲನಚಿತ್ರ ನಿರ್ಮಾಪಕ ಕೆನ್ ಲೋಚ್, ನಟಿ ಮ್ಯಾಕ್ಸಿನ್ ಪೀಕ್, ಸಂಗೀತಗಾರ ಲೋಕಿ, ಕಾದಂಬರಿಕಾರ ಹರಿ ಕುಂಜ್ರು, ನಿರ್ಮಾಪಕ ಟೋಬಿ ಕೈರೆಮಾಟೆಂಗ್, ಪರಿಸರವಾದಿ ಜಾರ್ಜ್ ಮೊನ್‌ಬಿಯೊಟ್ ಮತ್ತು ಬರಹಗಾರ ಪಾಲ್ ಗಿಲ್ರಾಯ್ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

’ಮೋದಿ ಆಡಳಿತವು ವಿದ್ಯಾರ್ಥಿ ಪ್ರತಿಭಟನಾಕಾರರು, ಸ್ತ್ರೀಸಮಾನತಾವಾದಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಸಮಾಜದ ಪ್ರಮುಖ ವ್ಯಕ್ತಿಗಳನ್ನು ಬಂಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ನಂತಹ ಆರೋಪಗಳಲ್ಲಿ ತುರ್ತು ಕಾನೂನುಗಳ ಆಧಾರದ ಮೇಲೆ ಅನೇಕರನ್ನು ಬಂಧಿಸಿದೆ.

ಕೆಲವು ಸಂದರ್ಭಗಳಲ್ಲಿ, ಶಾಂತಿಯುತ ಮತ್ತು ಸಾಂವಿಧಾನಿಕವಾಗಿ ನಡೆಯುತ್ತಿದ್ದ ಪ್ರತಿಭಟನೆಗಳಿಗೂ, ಗಲಭೆಯ ಅಸಂಬದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಬರೆಯಲಾಗಿದೆ.

ಭಿನ್ನಾಭಿಪ್ರಾಯದ ಈ ಅಪರಾಧೀಕರಣವು ಇತ್ತೀಚಿನ ತಿಂಗಳುಗಳಲ್ಲಿಆತಂಕಗೊಳಿಸುವ ರೀತಿಯಲ್ಲಿ ತೀವ್ರಗೊಂಡಿದೆ. ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಹಲವು ಮಂದಿಯನ್ನು ಬಂಧಿಸಲಾಯಿತು.  ಬಿಜೆಪಿ ನೇತೃತ್ವದ ಸರ್ಕಾರವು ವಲಸೆ ಕಾರ್ಮಿಕರರನ್ನು ಕಷ್ಟಕ್ಕೆ ದೂಡಿದ್ದು ಮಾತ್ರವಲ್ಲದೇ, ಭಾರತದ ಅನಾರೋಗ್ಯಕರ ಜೈಲುಗಳಿಗೆ ಕಾರ್ಯಕರ್ತರನ್ನು ದೂಡ್ಡಿದೆ. ಜೈಲಿನಲ್ಲಿದ್ದ ಹಲವಾರು ಕಾರ್ಯಕರ್ತರಿಗೆ ಈ ವೈರಸ್ ಸೋಂಕು ತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಬಿಜೆಪಿ ನಾಯಕರು ಸರ್ಕಾರವನ್ನು ಪ್ರಶ್ನಿಸುವವರ ಮೇಲೆ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಚೋದಿತ ಭೀಕರ ಗಲಭೆಗಳಲ್ಲಿ ಮುಸ್ಲಿಮರ ವಿರುದ್ಧ ಪೊಲೀಸ್ ಪಡೆಗಳು ಸಹಕರಿಸಿದವು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದಿದ್ದಾರೆ.

ಮೋದಿ ಆಡಳಿತವು ತನ್ನ ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಅಜೆಂಡಾ ಅನುಸರಿಸುವಲ್ಲಿ ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿದೆ. ಈ ಕೆಟ್ಟ ಆಡಳಿತವನ್ನು ವಿರೋಧಿಸುತ್ತಿರುವ ಭಾರತದ ಧೈರ್ಯಶಾಲಿ ಕಾರ್ಯಕರ್ತರೊಂದಿಗೆ ನಾವು ನಿಲ್ಲುತ್ತೇವೆ ಮತ್ತು ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕರೆ ನೀಡುತ್ತೇವೆ ಎಂಬ ಪತ್ರಕ್ಕೆ 200ಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ.

ವಿಶೇಷವೆಂದರೆ, ಹಲವಾರು ಬ್ರಿಟಿಷ್-ಭಾರತೀಯ ಸಾಂಸ್ಕೃತಿಕ ವ್ಯಕ್ತಿಗಳು ಕೂಡ ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಪತ್ರಕರ್ತರಾದ ಆಶ್ ಸರ್ಕಾರ್, ಏಂಜೆಲಾ ಸೈನಿ, ಬರಹಗಾರರಾದ ನಿಕೇಶ್ ಶುಕ್ಲಾ, ಪ್ರೀತಿ ತನೇಜಾ, ಸಂದೀಪ್ ಪಾರ್ಮಾರ್, ಜೆಮ್ಮಾ ದೇಸಾಯಿ, ಸಂಗೀತಗಾರರಾದ ಆಡಮ್ ಬೈನ್‌ಬ್ರಿಡ್ಜ್, ಕಪಿಲ್ ಶೇಷಾಸಾಯೀ, ಶಾರತಿ ಕೊರ್ವಾರ್ ಮತ್ತು ರಂಗಭೂಮಿ ಕಲಾವಿದರಾದ ತನಿಕಾ ಗುಪ್ತಾ, ವಿನಯ್ ಪಟೇಲ್, ಅಂಜ್ಲಿ ಮೊಹಿಂದ್ರಾ, ರಾಖೀ ಠಕ್ರಾರ್, ಮಿಲ್ಲಿ ಭಾಟಿಯಾ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...