Homeಅಂತರಾಷ್ಟ್ರೀಯಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

- Advertisement -
- Advertisement -

ಯುನೈಟೆಡ್ ಕಿಂಗ್‌ಡಂನ 200ಕ್ಕೂ ಹೆಚ್ಚು ಪ್ರಮುಖ ನಾಗರಿಕರು, ಕಲಾವಿದರು, ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು 50ಕ್ಕೂ ಹೆಚ್ಚು ಹಿರಿಯ ಶಿಕ್ಷಣ ತಜ್ಞರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವು ಅನುಸರಿಸುತ್ತಿರುವ “ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಧೋರಣೆ” ಖಂಡಿಸಿ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.

ಲೇಬರ್ ಪಕ್ಷದ ಜೆರೆಮಿ ಕಾರ್ಬಿನ್ ಮತ್ತು ಜಾನ್ ಮೆಕ್‌ಡೊನೆಲ್, ಗ್ರೀನ್ ಪಾರ್ಟಿಯ ಕ್ಯಾರೋಲಿನ್ ಲ್ಯೂಕಾಸ್, ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಬ್ರೆಂಡನ್ ಒಹರಾ (ಅಂತರರಾಷ್ಟ್ರೀಯ ಮಾನವ ಹಕ್ಕುಗಳ ವಕ್ತಾರ), ಶಮಿ ಚಕ್ರವರ್ತಿ (ನಾಗರಿಕ ಸ್ವಾತಂತ್ರ್ಯ ಗುಂಪು ಲಿಬರ್ಟಿಯ ಮಾಜಿ ನಿರ್ದೇಶಕ) ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬ್ರಿಟಿಷ್ ಸಂಸದರು ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ಪತ್ರವನ್ನು ಬೆಂಬಲಿಸುವ ಪ್ರಮುಖ ಸಾಂಸ್ಕೃತಿಕ ವ್ಯಕ್ತಿಗಳಲ್ಲಿ ಡ್ಯಾನಿ ಬೊಯೆಲ್ (ಸ್ಲಮ್‌ಡಾಗ್ ಮಿಲೆನಿಯರ್ ನಿರ್ದೇಶಕ), ಚಲನಚಿತ್ರ ನಿರ್ಮಾಪಕ ಕೆನ್ ಲೋಚ್, ನಟಿ ಮ್ಯಾಕ್ಸಿನ್ ಪೀಕ್, ಸಂಗೀತಗಾರ ಲೋಕಿ, ಕಾದಂಬರಿಕಾರ ಹರಿ ಕುಂಜ್ರು, ನಿರ್ಮಾಪಕ ಟೋಬಿ ಕೈರೆಮಾಟೆಂಗ್, ಪರಿಸರವಾದಿ ಜಾರ್ಜ್ ಮೊನ್‌ಬಿಯೊಟ್ ಮತ್ತು ಬರಹಗಾರ ಪಾಲ್ ಗಿಲ್ರಾಯ್ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

’ಮೋದಿ ಆಡಳಿತವು ವಿದ್ಯಾರ್ಥಿ ಪ್ರತಿಭಟನಾಕಾರರು, ಸ್ತ್ರೀಸಮಾನತಾವಾದಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಸಮಾಜದ ಪ್ರಮುಖ ವ್ಯಕ್ತಿಗಳನ್ನು ಬಂಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ನಂತಹ ಆರೋಪಗಳಲ್ಲಿ ತುರ್ತು ಕಾನೂನುಗಳ ಆಧಾರದ ಮೇಲೆ ಅನೇಕರನ್ನು ಬಂಧಿಸಿದೆ.

ಕೆಲವು ಸಂದರ್ಭಗಳಲ್ಲಿ, ಶಾಂತಿಯುತ ಮತ್ತು ಸಾಂವಿಧಾನಿಕವಾಗಿ ನಡೆಯುತ್ತಿದ್ದ ಪ್ರತಿಭಟನೆಗಳಿಗೂ, ಗಲಭೆಯ ಅಸಂಬದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಬರೆಯಲಾಗಿದೆ.

ಭಿನ್ನಾಭಿಪ್ರಾಯದ ಈ ಅಪರಾಧೀಕರಣವು ಇತ್ತೀಚಿನ ತಿಂಗಳುಗಳಲ್ಲಿಆತಂಕಗೊಳಿಸುವ ರೀತಿಯಲ್ಲಿ ತೀವ್ರಗೊಂಡಿದೆ. ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಹಲವು ಮಂದಿಯನ್ನು ಬಂಧಿಸಲಾಯಿತು.  ಬಿಜೆಪಿ ನೇತೃತ್ವದ ಸರ್ಕಾರವು ವಲಸೆ ಕಾರ್ಮಿಕರರನ್ನು ಕಷ್ಟಕ್ಕೆ ದೂಡಿದ್ದು ಮಾತ್ರವಲ್ಲದೇ, ಭಾರತದ ಅನಾರೋಗ್ಯಕರ ಜೈಲುಗಳಿಗೆ ಕಾರ್ಯಕರ್ತರನ್ನು ದೂಡ್ಡಿದೆ. ಜೈಲಿನಲ್ಲಿದ್ದ ಹಲವಾರು ಕಾರ್ಯಕರ್ತರಿಗೆ ಈ ವೈರಸ್ ಸೋಂಕು ತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಬಿಜೆಪಿ ನಾಯಕರು ಸರ್ಕಾರವನ್ನು ಪ್ರಶ್ನಿಸುವವರ ಮೇಲೆ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಚೋದಿತ ಭೀಕರ ಗಲಭೆಗಳಲ್ಲಿ ಮುಸ್ಲಿಮರ ವಿರುದ್ಧ ಪೊಲೀಸ್ ಪಡೆಗಳು ಸಹಕರಿಸಿದವು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದಿದ್ದಾರೆ.

ಮೋದಿ ಆಡಳಿತವು ತನ್ನ ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಅಜೆಂಡಾ ಅನುಸರಿಸುವಲ್ಲಿ ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿದೆ. ಈ ಕೆಟ್ಟ ಆಡಳಿತವನ್ನು ವಿರೋಧಿಸುತ್ತಿರುವ ಭಾರತದ ಧೈರ್ಯಶಾಲಿ ಕಾರ್ಯಕರ್ತರೊಂದಿಗೆ ನಾವು ನಿಲ್ಲುತ್ತೇವೆ ಮತ್ತು ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕರೆ ನೀಡುತ್ತೇವೆ ಎಂಬ ಪತ್ರಕ್ಕೆ 200ಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ.

ವಿಶೇಷವೆಂದರೆ, ಹಲವಾರು ಬ್ರಿಟಿಷ್-ಭಾರತೀಯ ಸಾಂಸ್ಕೃತಿಕ ವ್ಯಕ್ತಿಗಳು ಕೂಡ ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಪತ್ರಕರ್ತರಾದ ಆಶ್ ಸರ್ಕಾರ್, ಏಂಜೆಲಾ ಸೈನಿ, ಬರಹಗಾರರಾದ ನಿಕೇಶ್ ಶುಕ್ಲಾ, ಪ್ರೀತಿ ತನೇಜಾ, ಸಂದೀಪ್ ಪಾರ್ಮಾರ್, ಜೆಮ್ಮಾ ದೇಸಾಯಿ, ಸಂಗೀತಗಾರರಾದ ಆಡಮ್ ಬೈನ್‌ಬ್ರಿಡ್ಜ್, ಕಪಿಲ್ ಶೇಷಾಸಾಯೀ, ಶಾರತಿ ಕೊರ್ವಾರ್ ಮತ್ತು ರಂಗಭೂಮಿ ಕಲಾವಿದರಾದ ತನಿಕಾ ಗುಪ್ತಾ, ವಿನಯ್ ಪಟೇಲ್, ಅಂಜ್ಲಿ ಮೊಹಿಂದ್ರಾ, ರಾಖೀ ಠಕ್ರಾರ್, ಮಿಲ್ಲಿ ಭಾಟಿಯಾ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...