Homeಅಂತರಾಷ್ಟ್ರೀಯಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

- Advertisement -
- Advertisement -

ಯುನೈಟೆಡ್ ಕಿಂಗ್‌ಡಂನ 200ಕ್ಕೂ ಹೆಚ್ಚು ಪ್ರಮುಖ ನಾಗರಿಕರು, ಕಲಾವಿದರು, ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು 50ಕ್ಕೂ ಹೆಚ್ಚು ಹಿರಿಯ ಶಿಕ್ಷಣ ತಜ್ಞರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವು ಅನುಸರಿಸುತ್ತಿರುವ “ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಧೋರಣೆ” ಖಂಡಿಸಿ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.

ಲೇಬರ್ ಪಕ್ಷದ ಜೆರೆಮಿ ಕಾರ್ಬಿನ್ ಮತ್ತು ಜಾನ್ ಮೆಕ್‌ಡೊನೆಲ್, ಗ್ರೀನ್ ಪಾರ್ಟಿಯ ಕ್ಯಾರೋಲಿನ್ ಲ್ಯೂಕಾಸ್, ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಬ್ರೆಂಡನ್ ಒಹರಾ (ಅಂತರರಾಷ್ಟ್ರೀಯ ಮಾನವ ಹಕ್ಕುಗಳ ವಕ್ತಾರ), ಶಮಿ ಚಕ್ರವರ್ತಿ (ನಾಗರಿಕ ಸ್ವಾತಂತ್ರ್ಯ ಗುಂಪು ಲಿಬರ್ಟಿಯ ಮಾಜಿ ನಿರ್ದೇಶಕ) ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬ್ರಿಟಿಷ್ ಸಂಸದರು ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ಪತ್ರವನ್ನು ಬೆಂಬಲಿಸುವ ಪ್ರಮುಖ ಸಾಂಸ್ಕೃತಿಕ ವ್ಯಕ್ತಿಗಳಲ್ಲಿ ಡ್ಯಾನಿ ಬೊಯೆಲ್ (ಸ್ಲಮ್‌ಡಾಗ್ ಮಿಲೆನಿಯರ್ ನಿರ್ದೇಶಕ), ಚಲನಚಿತ್ರ ನಿರ್ಮಾಪಕ ಕೆನ್ ಲೋಚ್, ನಟಿ ಮ್ಯಾಕ್ಸಿನ್ ಪೀಕ್, ಸಂಗೀತಗಾರ ಲೋಕಿ, ಕಾದಂಬರಿಕಾರ ಹರಿ ಕುಂಜ್ರು, ನಿರ್ಮಾಪಕ ಟೋಬಿ ಕೈರೆಮಾಟೆಂಗ್, ಪರಿಸರವಾದಿ ಜಾರ್ಜ್ ಮೊನ್‌ಬಿಯೊಟ್ ಮತ್ತು ಬರಹಗಾರ ಪಾಲ್ ಗಿಲ್ರಾಯ್ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

’ಮೋದಿ ಆಡಳಿತವು ವಿದ್ಯಾರ್ಥಿ ಪ್ರತಿಭಟನಾಕಾರರು, ಸ್ತ್ರೀಸಮಾನತಾವಾದಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಸಮಾಜದ ಪ್ರಮುಖ ವ್ಯಕ್ತಿಗಳನ್ನು ಬಂಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ನಂತಹ ಆರೋಪಗಳಲ್ಲಿ ತುರ್ತು ಕಾನೂನುಗಳ ಆಧಾರದ ಮೇಲೆ ಅನೇಕರನ್ನು ಬಂಧಿಸಿದೆ.

ಕೆಲವು ಸಂದರ್ಭಗಳಲ್ಲಿ, ಶಾಂತಿಯುತ ಮತ್ತು ಸಾಂವಿಧಾನಿಕವಾಗಿ ನಡೆಯುತ್ತಿದ್ದ ಪ್ರತಿಭಟನೆಗಳಿಗೂ, ಗಲಭೆಯ ಅಸಂಬದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಬರೆಯಲಾಗಿದೆ.

ಭಿನ್ನಾಭಿಪ್ರಾಯದ ಈ ಅಪರಾಧೀಕರಣವು ಇತ್ತೀಚಿನ ತಿಂಗಳುಗಳಲ್ಲಿಆತಂಕಗೊಳಿಸುವ ರೀತಿಯಲ್ಲಿ ತೀವ್ರಗೊಂಡಿದೆ. ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಹಲವು ಮಂದಿಯನ್ನು ಬಂಧಿಸಲಾಯಿತು.  ಬಿಜೆಪಿ ನೇತೃತ್ವದ ಸರ್ಕಾರವು ವಲಸೆ ಕಾರ್ಮಿಕರರನ್ನು ಕಷ್ಟಕ್ಕೆ ದೂಡಿದ್ದು ಮಾತ್ರವಲ್ಲದೇ, ಭಾರತದ ಅನಾರೋಗ್ಯಕರ ಜೈಲುಗಳಿಗೆ ಕಾರ್ಯಕರ್ತರನ್ನು ದೂಡ್ಡಿದೆ. ಜೈಲಿನಲ್ಲಿದ್ದ ಹಲವಾರು ಕಾರ್ಯಕರ್ತರಿಗೆ ಈ ವೈರಸ್ ಸೋಂಕು ತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಬಿಜೆಪಿ ನಾಯಕರು ಸರ್ಕಾರವನ್ನು ಪ್ರಶ್ನಿಸುವವರ ಮೇಲೆ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಚೋದಿತ ಭೀಕರ ಗಲಭೆಗಳಲ್ಲಿ ಮುಸ್ಲಿಮರ ವಿರುದ್ಧ ಪೊಲೀಸ್ ಪಡೆಗಳು ಸಹಕರಿಸಿದವು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದಿದ್ದಾರೆ.

ಮೋದಿ ಆಡಳಿತವು ತನ್ನ ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಅಜೆಂಡಾ ಅನುಸರಿಸುವಲ್ಲಿ ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿದೆ. ಈ ಕೆಟ್ಟ ಆಡಳಿತವನ್ನು ವಿರೋಧಿಸುತ್ತಿರುವ ಭಾರತದ ಧೈರ್ಯಶಾಲಿ ಕಾರ್ಯಕರ್ತರೊಂದಿಗೆ ನಾವು ನಿಲ್ಲುತ್ತೇವೆ ಮತ್ತು ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕರೆ ನೀಡುತ್ತೇವೆ ಎಂಬ ಪತ್ರಕ್ಕೆ 200ಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ.

ವಿಶೇಷವೆಂದರೆ, ಹಲವಾರು ಬ್ರಿಟಿಷ್-ಭಾರತೀಯ ಸಾಂಸ್ಕೃತಿಕ ವ್ಯಕ್ತಿಗಳು ಕೂಡ ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಪತ್ರಕರ್ತರಾದ ಆಶ್ ಸರ್ಕಾರ್, ಏಂಜೆಲಾ ಸೈನಿ, ಬರಹಗಾರರಾದ ನಿಕೇಶ್ ಶುಕ್ಲಾ, ಪ್ರೀತಿ ತನೇಜಾ, ಸಂದೀಪ್ ಪಾರ್ಮಾರ್, ಜೆಮ್ಮಾ ದೇಸಾಯಿ, ಸಂಗೀತಗಾರರಾದ ಆಡಮ್ ಬೈನ್‌ಬ್ರಿಡ್ಜ್, ಕಪಿಲ್ ಶೇಷಾಸಾಯೀ, ಶಾರತಿ ಕೊರ್ವಾರ್ ಮತ್ತು ರಂಗಭೂಮಿ ಕಲಾವಿದರಾದ ತನಿಕಾ ಗುಪ್ತಾ, ವಿನಯ್ ಪಟೇಲ್, ಅಂಜ್ಲಿ ಮೊಹಿಂದ್ರಾ, ರಾಖೀ ಠಕ್ರಾರ್, ಮಿಲ್ಲಿ ಭಾಟಿಯಾ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...