Homeಅಂತರಾಷ್ಟ್ರೀಯಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

- Advertisement -
- Advertisement -

ಯುನೈಟೆಡ್ ಕಿಂಗ್‌ಡಂನ 200ಕ್ಕೂ ಹೆಚ್ಚು ಪ್ರಮುಖ ನಾಗರಿಕರು, ಕಲಾವಿದರು, ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು 50ಕ್ಕೂ ಹೆಚ್ಚು ಹಿರಿಯ ಶಿಕ್ಷಣ ತಜ್ಞರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವು ಅನುಸರಿಸುತ್ತಿರುವ “ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಧೋರಣೆ” ಖಂಡಿಸಿ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.

ಲೇಬರ್ ಪಕ್ಷದ ಜೆರೆಮಿ ಕಾರ್ಬಿನ್ ಮತ್ತು ಜಾನ್ ಮೆಕ್‌ಡೊನೆಲ್, ಗ್ರೀನ್ ಪಾರ್ಟಿಯ ಕ್ಯಾರೋಲಿನ್ ಲ್ಯೂಕಾಸ್, ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಬ್ರೆಂಡನ್ ಒಹರಾ (ಅಂತರರಾಷ್ಟ್ರೀಯ ಮಾನವ ಹಕ್ಕುಗಳ ವಕ್ತಾರ), ಶಮಿ ಚಕ್ರವರ್ತಿ (ನಾಗರಿಕ ಸ್ವಾತಂತ್ರ್ಯ ಗುಂಪು ಲಿಬರ್ಟಿಯ ಮಾಜಿ ನಿರ್ದೇಶಕ) ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬ್ರಿಟಿಷ್ ಸಂಸದರು ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ಪತ್ರವನ್ನು ಬೆಂಬಲಿಸುವ ಪ್ರಮುಖ ಸಾಂಸ್ಕೃತಿಕ ವ್ಯಕ್ತಿಗಳಲ್ಲಿ ಡ್ಯಾನಿ ಬೊಯೆಲ್ (ಸ್ಲಮ್‌ಡಾಗ್ ಮಿಲೆನಿಯರ್ ನಿರ್ದೇಶಕ), ಚಲನಚಿತ್ರ ನಿರ್ಮಾಪಕ ಕೆನ್ ಲೋಚ್, ನಟಿ ಮ್ಯಾಕ್ಸಿನ್ ಪೀಕ್, ಸಂಗೀತಗಾರ ಲೋಕಿ, ಕಾದಂಬರಿಕಾರ ಹರಿ ಕುಂಜ್ರು, ನಿರ್ಮಾಪಕ ಟೋಬಿ ಕೈರೆಮಾಟೆಂಗ್, ಪರಿಸರವಾದಿ ಜಾರ್ಜ್ ಮೊನ್‌ಬಿಯೊಟ್ ಮತ್ತು ಬರಹಗಾರ ಪಾಲ್ ಗಿಲ್ರಾಯ್ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

’ಮೋದಿ ಆಡಳಿತವು ವಿದ್ಯಾರ್ಥಿ ಪ್ರತಿಭಟನಾಕಾರರು, ಸ್ತ್ರೀಸಮಾನತಾವಾದಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಸಮಾಜದ ಪ್ರಮುಖ ವ್ಯಕ್ತಿಗಳನ್ನು ಬಂಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ನಂತಹ ಆರೋಪಗಳಲ್ಲಿ ತುರ್ತು ಕಾನೂನುಗಳ ಆಧಾರದ ಮೇಲೆ ಅನೇಕರನ್ನು ಬಂಧಿಸಿದೆ.

ಕೆಲವು ಸಂದರ್ಭಗಳಲ್ಲಿ, ಶಾಂತಿಯುತ ಮತ್ತು ಸಾಂವಿಧಾನಿಕವಾಗಿ ನಡೆಯುತ್ತಿದ್ದ ಪ್ರತಿಭಟನೆಗಳಿಗೂ, ಗಲಭೆಯ ಅಸಂಬದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಬರೆಯಲಾಗಿದೆ.

ಭಿನ್ನಾಭಿಪ್ರಾಯದ ಈ ಅಪರಾಧೀಕರಣವು ಇತ್ತೀಚಿನ ತಿಂಗಳುಗಳಲ್ಲಿಆತಂಕಗೊಳಿಸುವ ರೀತಿಯಲ್ಲಿ ತೀವ್ರಗೊಂಡಿದೆ. ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಹಲವು ಮಂದಿಯನ್ನು ಬಂಧಿಸಲಾಯಿತು.  ಬಿಜೆಪಿ ನೇತೃತ್ವದ ಸರ್ಕಾರವು ವಲಸೆ ಕಾರ್ಮಿಕರರನ್ನು ಕಷ್ಟಕ್ಕೆ ದೂಡಿದ್ದು ಮಾತ್ರವಲ್ಲದೇ, ಭಾರತದ ಅನಾರೋಗ್ಯಕರ ಜೈಲುಗಳಿಗೆ ಕಾರ್ಯಕರ್ತರನ್ನು ದೂಡ್ಡಿದೆ. ಜೈಲಿನಲ್ಲಿದ್ದ ಹಲವಾರು ಕಾರ್ಯಕರ್ತರಿಗೆ ಈ ವೈರಸ್ ಸೋಂಕು ತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಬಿಜೆಪಿ ನಾಯಕರು ಸರ್ಕಾರವನ್ನು ಪ್ರಶ್ನಿಸುವವರ ಮೇಲೆ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಚೋದಿತ ಭೀಕರ ಗಲಭೆಗಳಲ್ಲಿ ಮುಸ್ಲಿಮರ ವಿರುದ್ಧ ಪೊಲೀಸ್ ಪಡೆಗಳು ಸಹಕರಿಸಿದವು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದಿದ್ದಾರೆ.

ಮೋದಿ ಆಡಳಿತವು ತನ್ನ ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಅಜೆಂಡಾ ಅನುಸರಿಸುವಲ್ಲಿ ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿದೆ. ಈ ಕೆಟ್ಟ ಆಡಳಿತವನ್ನು ವಿರೋಧಿಸುತ್ತಿರುವ ಭಾರತದ ಧೈರ್ಯಶಾಲಿ ಕಾರ್ಯಕರ್ತರೊಂದಿಗೆ ನಾವು ನಿಲ್ಲುತ್ತೇವೆ ಮತ್ತು ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕರೆ ನೀಡುತ್ತೇವೆ ಎಂಬ ಪತ್ರಕ್ಕೆ 200ಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ.

ವಿಶೇಷವೆಂದರೆ, ಹಲವಾರು ಬ್ರಿಟಿಷ್-ಭಾರತೀಯ ಸಾಂಸ್ಕೃತಿಕ ವ್ಯಕ್ತಿಗಳು ಕೂಡ ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಪತ್ರಕರ್ತರಾದ ಆಶ್ ಸರ್ಕಾರ್, ಏಂಜೆಲಾ ಸೈನಿ, ಬರಹಗಾರರಾದ ನಿಕೇಶ್ ಶುಕ್ಲಾ, ಪ್ರೀತಿ ತನೇಜಾ, ಸಂದೀಪ್ ಪಾರ್ಮಾರ್, ಜೆಮ್ಮಾ ದೇಸಾಯಿ, ಸಂಗೀತಗಾರರಾದ ಆಡಮ್ ಬೈನ್‌ಬ್ರಿಡ್ಜ್, ಕಪಿಲ್ ಶೇಷಾಸಾಯೀ, ಶಾರತಿ ಕೊರ್ವಾರ್ ಮತ್ತು ರಂಗಭೂಮಿ ಕಲಾವಿದರಾದ ತನಿಕಾ ಗುಪ್ತಾ, ವಿನಯ್ ಪಟೇಲ್, ಅಂಜ್ಲಿ ಮೊಹಿಂದ್ರಾ, ರಾಖೀ ಠಕ್ರಾರ್, ಮಿಲ್ಲಿ ಭಾಟಿಯಾ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...