Homeಕರ್ನಾಟಕಜಮ್ಮು-ಕಾಶ್ಮೀರ ಬಗ್ಗೆ ಭಾರತದ ನಡೆಯನ್ನು ಟೀಕಿಸಿದ್ದಕ್ಕೆ ಬ್ರಿಟೀಷ್‌ ಸಂಸದೆಗೆ ವೀಸಾ ನಿರಾಕಣೆ..

ಜಮ್ಮು-ಕಾಶ್ಮೀರ ಬಗ್ಗೆ ಭಾರತದ ನಡೆಯನ್ನು ಟೀಕಿಸಿದ್ದಕ್ಕೆ ಬ್ರಿಟೀಷ್‌ ಸಂಸದೆಗೆ ವೀಸಾ ನಿರಾಕಣೆ..

- Advertisement -
- Advertisement -

ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಟೀಕಿಸಿದ ಬ್ರಿಟಿಷ್ ಸಂಸದೆಗೆ ಭಾರತಕ್ಕೆ ಪ್ರವೇಶ ನಿರಾಕರಿಸಲಾಗಿದೆ. “ದೆಹಲಿ ವಿಮಾನ ನಿಲ್ದಾಣದಲ್ಲಿ ಅವರ ಇ-ವೀಸಾವನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದ ನಂತರ ತಾನು ವಾಪಾಸು ಹೋಗಲು ಕಾಯುತ್ತಿದ್ದೇನೆ.” ಅಲ್ಲದೇ “ನನ್ನನು ಅಪರಾಧಿಗಳ ತರ ನಡೆಸಿಕೊಳ್ಳಾಯಿತು” ಎಂದು ಬ್ರಿಟಿಷ್ ಪಾರ್ಲಿಮೆಂಟ್ ಸದಸ್ಯೆ ಡೆಬ್ಬಿ ಅಬ್ರಹಾಮ್ಸ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಬೆಳಿಗ್ಗೆ 8.50 ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ಅಬ್ರಹಾಮ್ಸ್‌ ಗೆ ಕಳೆದ ಅಕ್ಟೋಬರ್‌ನಲ್ಲಿ ನೀಡಲಾಗಿದ್ದ 2020 ರ ಅಕ್ಟೋಬರ್ ವರೆಗೆ ಮಾನ್ಯವಾಗಿದ್ದ ಇ-ವೀಸಾವನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

“ಎಲ್ಲರ ಜೊತೆಗೆ, ನಾನು ಕೂಡಾ ನನ್ನ ಇ-ವೀಸಾ ಸೇರಿದಂತೆ ನನ್ನ ದಾಖಲೆಗಳನ್ನು ಹಾಜರುಪಡಿಸಿದೆ, ನನ್ನ ಛಾಯಾಚಿತ್ರವನ್ನು ತೆಗೆದುಕೊಂಡ ನಂತರ ಅಧಿಕಾರಿಯು ಅವನ ಪರದೆಯನ್ನು ನೋಡಿ ತಲೆ ಅಲ್ಲಾಡಿಸಲು ಪ್ರಾರಂಭಿಸಿದನು. ನಂತರ ನನ್ನ ವೀಸಾವನ್ನು ತಿರಸ್ಕರಿಸಿದ್ದಾರೆಂದು ಹೇಳಿ ಪಾಸ್ಪೋರ್ಟ್ ಸಮೇತ ಸುಮಾರು 10 ನಿಮಿಷಗಳ ಕಾಲ ಕಣ್ಮರೆಯಾದನು. ಹಿಂತಿರುಗಿ ಬಂದು ‘ನನ್ನೊಂದಿಗೆ ಬನ್ನಿ’ ಎಂದು ತುಂಬಾ ಕೆಟ್ಟದಾಗಿ ಮತ್ತು ಅಸಭ್ಯವಾಗಿ  ಎಂದು ಕೂಗಿಕೊಂಡನು” ಎಂದು ಸಂಸದೆ ಹೇಳಿಕೊಂಡಿದ್ದಾರೆ.

“ನನ್ನೊಂದಿಗೆ ಹಾಗೆ ಮಾತನಾಡಬಾರದೆಂದು ಅವನಿಗೆ ಹೇಳಿದೆ ಮತ್ತು ನಂತರ ನನ್ನನ್ನು ʼಡಿಪೋರ್ಟಿ ಸೆಲ್ʼ ಎಂದು ಗುರುತಿಸಲಾದಲ್ಲಿಗೆ ಕರೆದೊಯ್ದು, ನನ್ನನ್ನು ಕುಳಿತುಕೊಳ್ಳಲು ಆದೇಶಿಸಿದ ಆದರೆ ನಾನು ನಿರಾಕರಿಸಿದೆ. ಇವರು ಏನು ಮಾಡುತ್ತಾರೆ ಅಥವಾ ನನ್ನನ್ನು ಬೇರೆಲ್ಲಿಗೆ ಕರೆದುಕೊಂಡು ಹೋಗುತ್ತಾರೆ ಎಂದು ನನಗೆ ತಿಳಿದಿಲ್ಲ ಆದ್ದರಿಂದ ಇದನ್ನು ಜನರು ನೋಡಲಿ ಎಂದು ಬಯಸುತ್ತೇನೆ” ಎಂದಿದ್ದಾರೆ.

ಅಲ್ಲದೆ “ಭಾರತ ಸರ್ಕಾರ ತನ್ನ ಮನಸ್ಸು ಬದಲಿಸದೆ ಇರುವುದಾದರೆ ನಾನು ವಾಪಾಸು ಹೋಗುವ ದಾರಿ ಕಾಯುತ್ತಿದ್ದೇನೆ. ನನ್ನನ್ನು ಅಪರಾಧಿಗಳ ತರ ನಡೆಸಿಕೊಳ್ಳಲಾಗುತ್ತಿದೆ. ನಾನು ನನ್ನ ಕುಟುಂಬ ಮತ್ತು ಸ್ನೆಹಿತರನ್ನು ಸೇರಲು ಅವಕಾಶ ನೀಡುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯನ್ನು ಕೊನೆಗೊಳಿಸಿದ ದಿನ ಟ್ವಿಟ್ಟರಿನಲ್ಲಿ ಅಬ್ರಹಾಮ್ಸ್ ಸ್ಪಷ್ಟವಾಗಿ ಬರೆದ ಪತ್ರವೊಂದನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ 370 ನೇ ವಿಧಿಯ ಕುರಿತು ಯುಕೆಯಲ್ಲಿರುವ ಭಾರತೀಯ ರಾಯಭಾರಿಗೆ ತೀವ್ರ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿದ್ದರು.

ಅಲ್ಲದೇ ಅವರ ಫೇಸ್‌ಬುಕ್‌, ಟ್ವಿಟ್ಟರ್‌ನಲ್ಲಿ ​​ಕಾಶ್ಮೀರದ ಬಗ್ಗೆ ಭಾರತದ ನಿರ್ಧಾರವನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಹೊಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...