Homeಕರ್ನಾಟಕಜಮ್ಮು-ಕಾಶ್ಮೀರ ಬಗ್ಗೆ ಭಾರತದ ನಡೆಯನ್ನು ಟೀಕಿಸಿದ್ದಕ್ಕೆ ಬ್ರಿಟೀಷ್‌ ಸಂಸದೆಗೆ ವೀಸಾ ನಿರಾಕಣೆ..

ಜಮ್ಮು-ಕಾಶ್ಮೀರ ಬಗ್ಗೆ ಭಾರತದ ನಡೆಯನ್ನು ಟೀಕಿಸಿದ್ದಕ್ಕೆ ಬ್ರಿಟೀಷ್‌ ಸಂಸದೆಗೆ ವೀಸಾ ನಿರಾಕಣೆ..

- Advertisement -
- Advertisement -

ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಟೀಕಿಸಿದ ಬ್ರಿಟಿಷ್ ಸಂಸದೆಗೆ ಭಾರತಕ್ಕೆ ಪ್ರವೇಶ ನಿರಾಕರಿಸಲಾಗಿದೆ. “ದೆಹಲಿ ವಿಮಾನ ನಿಲ್ದಾಣದಲ್ಲಿ ಅವರ ಇ-ವೀಸಾವನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದ ನಂತರ ತಾನು ವಾಪಾಸು ಹೋಗಲು ಕಾಯುತ್ತಿದ್ದೇನೆ.” ಅಲ್ಲದೇ “ನನ್ನನು ಅಪರಾಧಿಗಳ ತರ ನಡೆಸಿಕೊಳ್ಳಾಯಿತು” ಎಂದು ಬ್ರಿಟಿಷ್ ಪಾರ್ಲಿಮೆಂಟ್ ಸದಸ್ಯೆ ಡೆಬ್ಬಿ ಅಬ್ರಹಾಮ್ಸ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಬೆಳಿಗ್ಗೆ 8.50 ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ಅಬ್ರಹಾಮ್ಸ್‌ ಗೆ ಕಳೆದ ಅಕ್ಟೋಬರ್‌ನಲ್ಲಿ ನೀಡಲಾಗಿದ್ದ 2020 ರ ಅಕ್ಟೋಬರ್ ವರೆಗೆ ಮಾನ್ಯವಾಗಿದ್ದ ಇ-ವೀಸಾವನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

“ಎಲ್ಲರ ಜೊತೆಗೆ, ನಾನು ಕೂಡಾ ನನ್ನ ಇ-ವೀಸಾ ಸೇರಿದಂತೆ ನನ್ನ ದಾಖಲೆಗಳನ್ನು ಹಾಜರುಪಡಿಸಿದೆ, ನನ್ನ ಛಾಯಾಚಿತ್ರವನ್ನು ತೆಗೆದುಕೊಂಡ ನಂತರ ಅಧಿಕಾರಿಯು ಅವನ ಪರದೆಯನ್ನು ನೋಡಿ ತಲೆ ಅಲ್ಲಾಡಿಸಲು ಪ್ರಾರಂಭಿಸಿದನು. ನಂತರ ನನ್ನ ವೀಸಾವನ್ನು ತಿರಸ್ಕರಿಸಿದ್ದಾರೆಂದು ಹೇಳಿ ಪಾಸ್ಪೋರ್ಟ್ ಸಮೇತ ಸುಮಾರು 10 ನಿಮಿಷಗಳ ಕಾಲ ಕಣ್ಮರೆಯಾದನು. ಹಿಂತಿರುಗಿ ಬಂದು ‘ನನ್ನೊಂದಿಗೆ ಬನ್ನಿ’ ಎಂದು ತುಂಬಾ ಕೆಟ್ಟದಾಗಿ ಮತ್ತು ಅಸಭ್ಯವಾಗಿ  ಎಂದು ಕೂಗಿಕೊಂಡನು” ಎಂದು ಸಂಸದೆ ಹೇಳಿಕೊಂಡಿದ್ದಾರೆ.

“ನನ್ನೊಂದಿಗೆ ಹಾಗೆ ಮಾತನಾಡಬಾರದೆಂದು ಅವನಿಗೆ ಹೇಳಿದೆ ಮತ್ತು ನಂತರ ನನ್ನನ್ನು ʼಡಿಪೋರ್ಟಿ ಸೆಲ್ʼ ಎಂದು ಗುರುತಿಸಲಾದಲ್ಲಿಗೆ ಕರೆದೊಯ್ದು, ನನ್ನನ್ನು ಕುಳಿತುಕೊಳ್ಳಲು ಆದೇಶಿಸಿದ ಆದರೆ ನಾನು ನಿರಾಕರಿಸಿದೆ. ಇವರು ಏನು ಮಾಡುತ್ತಾರೆ ಅಥವಾ ನನ್ನನ್ನು ಬೇರೆಲ್ಲಿಗೆ ಕರೆದುಕೊಂಡು ಹೋಗುತ್ತಾರೆ ಎಂದು ನನಗೆ ತಿಳಿದಿಲ್ಲ ಆದ್ದರಿಂದ ಇದನ್ನು ಜನರು ನೋಡಲಿ ಎಂದು ಬಯಸುತ್ತೇನೆ” ಎಂದಿದ್ದಾರೆ.

ಅಲ್ಲದೆ “ಭಾರತ ಸರ್ಕಾರ ತನ್ನ ಮನಸ್ಸು ಬದಲಿಸದೆ ಇರುವುದಾದರೆ ನಾನು ವಾಪಾಸು ಹೋಗುವ ದಾರಿ ಕಾಯುತ್ತಿದ್ದೇನೆ. ನನ್ನನ್ನು ಅಪರಾಧಿಗಳ ತರ ನಡೆಸಿಕೊಳ್ಳಲಾಗುತ್ತಿದೆ. ನಾನು ನನ್ನ ಕುಟುಂಬ ಮತ್ತು ಸ್ನೆಹಿತರನ್ನು ಸೇರಲು ಅವಕಾಶ ನೀಡುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯನ್ನು ಕೊನೆಗೊಳಿಸಿದ ದಿನ ಟ್ವಿಟ್ಟರಿನಲ್ಲಿ ಅಬ್ರಹಾಮ್ಸ್ ಸ್ಪಷ್ಟವಾಗಿ ಬರೆದ ಪತ್ರವೊಂದನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ 370 ನೇ ವಿಧಿಯ ಕುರಿತು ಯುಕೆಯಲ್ಲಿರುವ ಭಾರತೀಯ ರಾಯಭಾರಿಗೆ ತೀವ್ರ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿದ್ದರು.

ಅಲ್ಲದೇ ಅವರ ಫೇಸ್‌ಬುಕ್‌, ಟ್ವಿಟ್ಟರ್‌ನಲ್ಲಿ ​​ಕಾಶ್ಮೀರದ ಬಗ್ಗೆ ಭಾರತದ ನಿರ್ಧಾರವನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಹೊಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...