Homeಅಂತರಾಷ್ಟ್ರೀಯಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

- Advertisement -
- Advertisement -

ಭಾರತದಲ್ಲಿ ಕೋವಿಡ್ ನಿಯಮಾವಳಿಗಳ  ಪಾಲನೆ ಕುರಿತು ಕೇಂದ್ರ ಸರ್ಕಾರ ದೇಶದಲ್ಲಿ ಸಾಕಷ್ಟು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಮಾಸ್ಕ್, ಸಾಮಾಜಿಕ ಅಂತರಗಳ ಪಾಲನೆ ಸೇರಿದಂತೆ ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್ (CAB) ಎಂದು ಸಾಕಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಜನಸಾಮಾನ್ಯರು ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡಗಳನ್ನು ವಿಧಿಸಲಾಗುತ್ತದೆ. ಕಠಿಣ ನಿಯಮಗಳ ಹೊರತಾಗಿಯೂ ಕಟ್ಟು ನಿಟ್ಟಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿದ ನಿದರ್ಶನಗಳು ಭಾರತದಲ್ಲಿ ಹೆಚ್ಚಾಗಿ ಕಾಣಿಸುವುದಿಲ್ಲ. ಜನಸಾಮಾನ್ಯರ ಜೊತೆ ಸರ್ಕಾರದ ಭಾಗವಾಗಿರುವ ಮಂತ್ರಿ, ಸಂಸದ- ಶಾಸಕರು ಮತ್ತು ಅಧಿಕಾರಿಗಳು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಸಾರ್ವಜನಿಕವಾಗಿ ಓಡಾಡುತ್ತಾರೆ. ಸಭೆ ಸಮಾರಂಭಗಳನ್ನು, ಚುನಾವಣಾ ಪ್ರಚಾರಗಳನ್ನು ನಡೆಸುತ್ತಾರೆ. ಈ ಕುರಿತು ಎಲ್ಲಿಯೂ ವರದಿಯಾಗುವುದಿಲ್ಲ. ಕೋವಿಡ್ ನಿಯಮಗಳ ಪಾಲನೆಯ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕಿದ್ದ ಮಂತ್ರಿ ಮಹೋದಯರ ನಿಯಮ ಉಲ್ಲಂಘನೆಗೆ ಭಾರತದಲ್ಲಿ ಯಾವ ಶಿಕ್ಷೆಯೂ ಇಲ್ಲ. ಬ್ರಿಟನ್ ದೇಶದಲ್ಲಿ ಭಾರತದಂತೆ ಅಲ್ಲ. ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಕಾರಣಕ್ಕೆ ಬ್ರಿಟನ್‌ನ ಆರೋಗ್ಯ ಸಚಿವರೇ ಭಾರಿ ಬೆಲೆ ತೆತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಮರೆತು ವರ್ತಿಸುತ್ತಿದ್ದ ಬ್ರಿಟನ್ ಆರೋಗ್ಯ ಮಂತ್ರಿ ಮ್ಯಾಟ್ ಹ್ಯಾಂಕಾಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ತಮ್ಮ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದು ಎಲ್ಲಾ ಸಾಮಾಜಿಕ ಅಂತರವನ್ನು ಮರೆತು ವರ್ತಿಸಿದ್ದರು. ಸಚಿವ ಹ್ಯಾಂಕಾಕ್ ತಮ್ಮ ಉದ್ಯೋಗಿಯೊಬ್ಬರನ್ನು ಕಚೇರಿಯಲ್ಲಿ ಚುಂಬಿಸುತ್ತಿರುವ ದೃಶ್ಯ ಎಲ್ಲೆಡೆ ಹರಿದಾಡಿತ್ತು. ಆರೋಗ್ಯ ಮಂತ್ರಿಗಳೇ ಸಾಮಾಜಿಕ ಅಂತರದ ವಿರುದ್ಧ ವರ್ತಿಸಿದ್ದರ ವಿರುದ್ಧ ಬ್ರಿಟನ್ ಜನತೆ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದರು. ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕೂಡ ಮ್ಯಾಟ್ ಹ್ಯಾಂಕಾಕ್‌ ವಿರುದ್ಧ ಸಾಕಷ್ಟು ವರದಿಗಳು ಭಿತ್ತರವಾಗಿದ್ದವು. ಹ್ಯಾಂಕಾಕ್ ರಾಜೀನಾಮೆಗೆ ಪ್ರಮುಖ ವಿರೋಧ ಪಕ್ಷವಾದ ಲೇಬರ್ ಪಾರ್ಟಿ ಪಟ್ಟು ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸರ್ಕಾರವನ್ನು ಮುಜುಗರದಿಂದ ರಕ್ಷಿಸಲು ಆರೋಗ್ಯ ಸಚಿವ ಮ್ಯಾಟ್  ಹ್ಯಾಂಕಾಕ್‌ ಅವರಿಂದ ರಾಜೀನಾಮೆ ಪಡೆದಿದ್ದಾರೆ.

ದೇಶ ಸಾಂಕ್ರಾಮಿಕದ ಸಂಕಷ್ಟದಲ್ಲಿರುವಾಗ ಕರೊನಾ ವಿರುದ್ಧ ಹೋರಾಡುತ್ತ ಸಾಕಷ್ಟು ಜನರು ತಮ್ಮ ಅಮೂಲ್ಯ ಜೀವವನ್ನು ತ್ಯಾಗ ಮಾಡಿದ್ದಾರೆ. ಸಾವಿರಾರು ಬ್ರಿಟನ್ ಪ್ರಜೆಗಳು ಕೋವಿಡ್ ಕಾರಣದಿಂದ ತಮ್ಮ ಕುಟುಂಬಸ್ಥರನ್ನು, ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಆದರೆ ಕೊರೊನಾ ವಿರುದ್ಧ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿ ನಿಂತು ನನ್ನಿಂದಲೆ ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿರುವುದು ಅಕ್ಷಮ್ಯ ಅಪರಾಧವಾಗಿದೆ. ದೇಶವನ್ನು ಭೀಕರ ವೈರಸ್‌ನಿಂದ ರಕ್ಷಿಸುವ ಹೊಣೆ ಹೊತ್ತು ಬ್ರಿಟನ್ ನಾಗರಿಕರ ತ್ಯಾಗವನ್ನು ಅವಮಾನಿಸುವ ವರ್ತನೆಯಿಂದ ಮುಜುಗರವಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಶನಿವಾರ ಜೂನ್‌ 26 ರಂದು ಬ್ರಿಟನ್ ಪ್ರಧಾನಿ ಬೋರಿಸ್‌ ಜಾನ್ಸ್‌ನ್‌ಗೆ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕಾಕ್ ಪತ್ರ ಬರೆದಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ಅವರಿಂದ ತೆರವಾದ ಆರೋಗ್ಯ ಸಚಿವರ ಸ್ಥಾನಕ್ಕೆ ಸಾಜಿದ್ ಜಾವಿದ್ ಅವರನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ನೇಮಕ ಮಾಡಿದ್ದಾರೆ. ಸಾಜಿದ್ ಜಾವಿದ್ ಅವರು ಹಿಂದೆ ಬ್ರಿಟನ್‌ನ ಹಣಕಾಸು ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.


ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...