Homeಅಂತರಾಷ್ಟ್ರೀಯಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

- Advertisement -
- Advertisement -

ಭಾರತದಲ್ಲಿ ಕೋವಿಡ್ ನಿಯಮಾವಳಿಗಳ  ಪಾಲನೆ ಕುರಿತು ಕೇಂದ್ರ ಸರ್ಕಾರ ದೇಶದಲ್ಲಿ ಸಾಕಷ್ಟು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಮಾಸ್ಕ್, ಸಾಮಾಜಿಕ ಅಂತರಗಳ ಪಾಲನೆ ಸೇರಿದಂತೆ ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್ (CAB) ಎಂದು ಸಾಕಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಜನಸಾಮಾನ್ಯರು ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡಗಳನ್ನು ವಿಧಿಸಲಾಗುತ್ತದೆ. ಕಠಿಣ ನಿಯಮಗಳ ಹೊರತಾಗಿಯೂ ಕಟ್ಟು ನಿಟ್ಟಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿದ ನಿದರ್ಶನಗಳು ಭಾರತದಲ್ಲಿ ಹೆಚ್ಚಾಗಿ ಕಾಣಿಸುವುದಿಲ್ಲ. ಜನಸಾಮಾನ್ಯರ ಜೊತೆ ಸರ್ಕಾರದ ಭಾಗವಾಗಿರುವ ಮಂತ್ರಿ, ಸಂಸದ- ಶಾಸಕರು ಮತ್ತು ಅಧಿಕಾರಿಗಳು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಸಾರ್ವಜನಿಕವಾಗಿ ಓಡಾಡುತ್ತಾರೆ. ಸಭೆ ಸಮಾರಂಭಗಳನ್ನು, ಚುನಾವಣಾ ಪ್ರಚಾರಗಳನ್ನು ನಡೆಸುತ್ತಾರೆ. ಈ ಕುರಿತು ಎಲ್ಲಿಯೂ ವರದಿಯಾಗುವುದಿಲ್ಲ. ಕೋವಿಡ್ ನಿಯಮಗಳ ಪಾಲನೆಯ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕಿದ್ದ ಮಂತ್ರಿ ಮಹೋದಯರ ನಿಯಮ ಉಲ್ಲಂಘನೆಗೆ ಭಾರತದಲ್ಲಿ ಯಾವ ಶಿಕ್ಷೆಯೂ ಇಲ್ಲ. ಬ್ರಿಟನ್ ದೇಶದಲ್ಲಿ ಭಾರತದಂತೆ ಅಲ್ಲ. ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಕಾರಣಕ್ಕೆ ಬ್ರಿಟನ್‌ನ ಆರೋಗ್ಯ ಸಚಿವರೇ ಭಾರಿ ಬೆಲೆ ತೆತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಮರೆತು ವರ್ತಿಸುತ್ತಿದ್ದ ಬ್ರಿಟನ್ ಆರೋಗ್ಯ ಮಂತ್ರಿ ಮ್ಯಾಟ್ ಹ್ಯಾಂಕಾಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ತಮ್ಮ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದು ಎಲ್ಲಾ ಸಾಮಾಜಿಕ ಅಂತರವನ್ನು ಮರೆತು ವರ್ತಿಸಿದ್ದರು. ಸಚಿವ ಹ್ಯಾಂಕಾಕ್ ತಮ್ಮ ಉದ್ಯೋಗಿಯೊಬ್ಬರನ್ನು ಕಚೇರಿಯಲ್ಲಿ ಚುಂಬಿಸುತ್ತಿರುವ ದೃಶ್ಯ ಎಲ್ಲೆಡೆ ಹರಿದಾಡಿತ್ತು. ಆರೋಗ್ಯ ಮಂತ್ರಿಗಳೇ ಸಾಮಾಜಿಕ ಅಂತರದ ವಿರುದ್ಧ ವರ್ತಿಸಿದ್ದರ ವಿರುದ್ಧ ಬ್ರಿಟನ್ ಜನತೆ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದರು. ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕೂಡ ಮ್ಯಾಟ್ ಹ್ಯಾಂಕಾಕ್‌ ವಿರುದ್ಧ ಸಾಕಷ್ಟು ವರದಿಗಳು ಭಿತ್ತರವಾಗಿದ್ದವು. ಹ್ಯಾಂಕಾಕ್ ರಾಜೀನಾಮೆಗೆ ಪ್ರಮುಖ ವಿರೋಧ ಪಕ್ಷವಾದ ಲೇಬರ್ ಪಾರ್ಟಿ ಪಟ್ಟು ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸರ್ಕಾರವನ್ನು ಮುಜುಗರದಿಂದ ರಕ್ಷಿಸಲು ಆರೋಗ್ಯ ಸಚಿವ ಮ್ಯಾಟ್  ಹ್ಯಾಂಕಾಕ್‌ ಅವರಿಂದ ರಾಜೀನಾಮೆ ಪಡೆದಿದ್ದಾರೆ.

ದೇಶ ಸಾಂಕ್ರಾಮಿಕದ ಸಂಕಷ್ಟದಲ್ಲಿರುವಾಗ ಕರೊನಾ ವಿರುದ್ಧ ಹೋರಾಡುತ್ತ ಸಾಕಷ್ಟು ಜನರು ತಮ್ಮ ಅಮೂಲ್ಯ ಜೀವವನ್ನು ತ್ಯಾಗ ಮಾಡಿದ್ದಾರೆ. ಸಾವಿರಾರು ಬ್ರಿಟನ್ ಪ್ರಜೆಗಳು ಕೋವಿಡ್ ಕಾರಣದಿಂದ ತಮ್ಮ ಕುಟುಂಬಸ್ಥರನ್ನು, ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಆದರೆ ಕೊರೊನಾ ವಿರುದ್ಧ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿ ನಿಂತು ನನ್ನಿಂದಲೆ ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿರುವುದು ಅಕ್ಷಮ್ಯ ಅಪರಾಧವಾಗಿದೆ. ದೇಶವನ್ನು ಭೀಕರ ವೈರಸ್‌ನಿಂದ ರಕ್ಷಿಸುವ ಹೊಣೆ ಹೊತ್ತು ಬ್ರಿಟನ್ ನಾಗರಿಕರ ತ್ಯಾಗವನ್ನು ಅವಮಾನಿಸುವ ವರ್ತನೆಯಿಂದ ಮುಜುಗರವಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಶನಿವಾರ ಜೂನ್‌ 26 ರಂದು ಬ್ರಿಟನ್ ಪ್ರಧಾನಿ ಬೋರಿಸ್‌ ಜಾನ್ಸ್‌ನ್‌ಗೆ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕಾಕ್ ಪತ್ರ ಬರೆದಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ಅವರಿಂದ ತೆರವಾದ ಆರೋಗ್ಯ ಸಚಿವರ ಸ್ಥಾನಕ್ಕೆ ಸಾಜಿದ್ ಜಾವಿದ್ ಅವರನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ನೇಮಕ ಮಾಡಿದ್ದಾರೆ. ಸಾಜಿದ್ ಜಾವಿದ್ ಅವರು ಹಿಂದೆ ಬ್ರಿಟನ್‌ನ ಹಣಕಾಸು ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.


ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...