Homeಅಂತರಾಷ್ಟ್ರೀಯಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

- Advertisement -
- Advertisement -

ಭಾರತದಲ್ಲಿ ಕೋವಿಡ್ ನಿಯಮಾವಳಿಗಳ  ಪಾಲನೆ ಕುರಿತು ಕೇಂದ್ರ ಸರ್ಕಾರ ದೇಶದಲ್ಲಿ ಸಾಕಷ್ಟು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಮಾಸ್ಕ್, ಸಾಮಾಜಿಕ ಅಂತರಗಳ ಪಾಲನೆ ಸೇರಿದಂತೆ ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್ (CAB) ಎಂದು ಸಾಕಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಜನಸಾಮಾನ್ಯರು ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡಗಳನ್ನು ವಿಧಿಸಲಾಗುತ್ತದೆ. ಕಠಿಣ ನಿಯಮಗಳ ಹೊರತಾಗಿಯೂ ಕಟ್ಟು ನಿಟ್ಟಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿದ ನಿದರ್ಶನಗಳು ಭಾರತದಲ್ಲಿ ಹೆಚ್ಚಾಗಿ ಕಾಣಿಸುವುದಿಲ್ಲ. ಜನಸಾಮಾನ್ಯರ ಜೊತೆ ಸರ್ಕಾರದ ಭಾಗವಾಗಿರುವ ಮಂತ್ರಿ, ಸಂಸದ- ಶಾಸಕರು ಮತ್ತು ಅಧಿಕಾರಿಗಳು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಸಾರ್ವಜನಿಕವಾಗಿ ಓಡಾಡುತ್ತಾರೆ. ಸಭೆ ಸಮಾರಂಭಗಳನ್ನು, ಚುನಾವಣಾ ಪ್ರಚಾರಗಳನ್ನು ನಡೆಸುತ್ತಾರೆ. ಈ ಕುರಿತು ಎಲ್ಲಿಯೂ ವರದಿಯಾಗುವುದಿಲ್ಲ. ಕೋವಿಡ್ ನಿಯಮಗಳ ಪಾಲನೆಯ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕಿದ್ದ ಮಂತ್ರಿ ಮಹೋದಯರ ನಿಯಮ ಉಲ್ಲಂಘನೆಗೆ ಭಾರತದಲ್ಲಿ ಯಾವ ಶಿಕ್ಷೆಯೂ ಇಲ್ಲ. ಬ್ರಿಟನ್ ದೇಶದಲ್ಲಿ ಭಾರತದಂತೆ ಅಲ್ಲ. ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಕಾರಣಕ್ಕೆ ಬ್ರಿಟನ್‌ನ ಆರೋಗ್ಯ ಸಚಿವರೇ ಭಾರಿ ಬೆಲೆ ತೆತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಮರೆತು ವರ್ತಿಸುತ್ತಿದ್ದ ಬ್ರಿಟನ್ ಆರೋಗ್ಯ ಮಂತ್ರಿ ಮ್ಯಾಟ್ ಹ್ಯಾಂಕಾಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ತಮ್ಮ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದು ಎಲ್ಲಾ ಸಾಮಾಜಿಕ ಅಂತರವನ್ನು ಮರೆತು ವರ್ತಿಸಿದ್ದರು. ಸಚಿವ ಹ್ಯಾಂಕಾಕ್ ತಮ್ಮ ಉದ್ಯೋಗಿಯೊಬ್ಬರನ್ನು ಕಚೇರಿಯಲ್ಲಿ ಚುಂಬಿಸುತ್ತಿರುವ ದೃಶ್ಯ ಎಲ್ಲೆಡೆ ಹರಿದಾಡಿತ್ತು. ಆರೋಗ್ಯ ಮಂತ್ರಿಗಳೇ ಸಾಮಾಜಿಕ ಅಂತರದ ವಿರುದ್ಧ ವರ್ತಿಸಿದ್ದರ ವಿರುದ್ಧ ಬ್ರಿಟನ್ ಜನತೆ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದರು. ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕೂಡ ಮ್ಯಾಟ್ ಹ್ಯಾಂಕಾಕ್‌ ವಿರುದ್ಧ ಸಾಕಷ್ಟು ವರದಿಗಳು ಭಿತ್ತರವಾಗಿದ್ದವು. ಹ್ಯಾಂಕಾಕ್ ರಾಜೀನಾಮೆಗೆ ಪ್ರಮುಖ ವಿರೋಧ ಪಕ್ಷವಾದ ಲೇಬರ್ ಪಾರ್ಟಿ ಪಟ್ಟು ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸರ್ಕಾರವನ್ನು ಮುಜುಗರದಿಂದ ರಕ್ಷಿಸಲು ಆರೋಗ್ಯ ಸಚಿವ ಮ್ಯಾಟ್  ಹ್ಯಾಂಕಾಕ್‌ ಅವರಿಂದ ರಾಜೀನಾಮೆ ಪಡೆದಿದ್ದಾರೆ.

ದೇಶ ಸಾಂಕ್ರಾಮಿಕದ ಸಂಕಷ್ಟದಲ್ಲಿರುವಾಗ ಕರೊನಾ ವಿರುದ್ಧ ಹೋರಾಡುತ್ತ ಸಾಕಷ್ಟು ಜನರು ತಮ್ಮ ಅಮೂಲ್ಯ ಜೀವವನ್ನು ತ್ಯಾಗ ಮಾಡಿದ್ದಾರೆ. ಸಾವಿರಾರು ಬ್ರಿಟನ್ ಪ್ರಜೆಗಳು ಕೋವಿಡ್ ಕಾರಣದಿಂದ ತಮ್ಮ ಕುಟುಂಬಸ್ಥರನ್ನು, ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಆದರೆ ಕೊರೊನಾ ವಿರುದ್ಧ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿ ನಿಂತು ನನ್ನಿಂದಲೆ ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿರುವುದು ಅಕ್ಷಮ್ಯ ಅಪರಾಧವಾಗಿದೆ. ದೇಶವನ್ನು ಭೀಕರ ವೈರಸ್‌ನಿಂದ ರಕ್ಷಿಸುವ ಹೊಣೆ ಹೊತ್ತು ಬ್ರಿಟನ್ ನಾಗರಿಕರ ತ್ಯಾಗವನ್ನು ಅವಮಾನಿಸುವ ವರ್ತನೆಯಿಂದ ಮುಜುಗರವಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಶನಿವಾರ ಜೂನ್‌ 26 ರಂದು ಬ್ರಿಟನ್ ಪ್ರಧಾನಿ ಬೋರಿಸ್‌ ಜಾನ್ಸ್‌ನ್‌ಗೆ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕಾಕ್ ಪತ್ರ ಬರೆದಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ಅವರಿಂದ ತೆರವಾದ ಆರೋಗ್ಯ ಸಚಿವರ ಸ್ಥಾನಕ್ಕೆ ಸಾಜಿದ್ ಜಾವಿದ್ ಅವರನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ನೇಮಕ ಮಾಡಿದ್ದಾರೆ. ಸಾಜಿದ್ ಜಾವಿದ್ ಅವರು ಹಿಂದೆ ಬ್ರಿಟನ್‌ನ ಹಣಕಾಸು ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.


ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...