Homeಅಂತರಾಷ್ಟ್ರೀಯಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

- Advertisement -
- Advertisement -

ಭಾರತದಲ್ಲಿ ಕೋವಿಡ್ ನಿಯಮಾವಳಿಗಳ  ಪಾಲನೆ ಕುರಿತು ಕೇಂದ್ರ ಸರ್ಕಾರ ದೇಶದಲ್ಲಿ ಸಾಕಷ್ಟು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಮಾಸ್ಕ್, ಸಾಮಾಜಿಕ ಅಂತರಗಳ ಪಾಲನೆ ಸೇರಿದಂತೆ ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್ (CAB) ಎಂದು ಸಾಕಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಜನಸಾಮಾನ್ಯರು ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡಗಳನ್ನು ವಿಧಿಸಲಾಗುತ್ತದೆ. ಕಠಿಣ ನಿಯಮಗಳ ಹೊರತಾಗಿಯೂ ಕಟ್ಟು ನಿಟ್ಟಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿದ ನಿದರ್ಶನಗಳು ಭಾರತದಲ್ಲಿ ಹೆಚ್ಚಾಗಿ ಕಾಣಿಸುವುದಿಲ್ಲ. ಜನಸಾಮಾನ್ಯರ ಜೊತೆ ಸರ್ಕಾರದ ಭಾಗವಾಗಿರುವ ಮಂತ್ರಿ, ಸಂಸದ- ಶಾಸಕರು ಮತ್ತು ಅಧಿಕಾರಿಗಳು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಸಾರ್ವಜನಿಕವಾಗಿ ಓಡಾಡುತ್ತಾರೆ. ಸಭೆ ಸಮಾರಂಭಗಳನ್ನು, ಚುನಾವಣಾ ಪ್ರಚಾರಗಳನ್ನು ನಡೆಸುತ್ತಾರೆ. ಈ ಕುರಿತು ಎಲ್ಲಿಯೂ ವರದಿಯಾಗುವುದಿಲ್ಲ. ಕೋವಿಡ್ ನಿಯಮಗಳ ಪಾಲನೆಯ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕಿದ್ದ ಮಂತ್ರಿ ಮಹೋದಯರ ನಿಯಮ ಉಲ್ಲಂಘನೆಗೆ ಭಾರತದಲ್ಲಿ ಯಾವ ಶಿಕ್ಷೆಯೂ ಇಲ್ಲ. ಬ್ರಿಟನ್ ದೇಶದಲ್ಲಿ ಭಾರತದಂತೆ ಅಲ್ಲ. ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಕಾರಣಕ್ಕೆ ಬ್ರಿಟನ್‌ನ ಆರೋಗ್ಯ ಸಚಿವರೇ ಭಾರಿ ಬೆಲೆ ತೆತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಮರೆತು ವರ್ತಿಸುತ್ತಿದ್ದ ಬ್ರಿಟನ್ ಆರೋಗ್ಯ ಮಂತ್ರಿ ಮ್ಯಾಟ್ ಹ್ಯಾಂಕಾಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ತಮ್ಮ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದು ಎಲ್ಲಾ ಸಾಮಾಜಿಕ ಅಂತರವನ್ನು ಮರೆತು ವರ್ತಿಸಿದ್ದರು. ಸಚಿವ ಹ್ಯಾಂಕಾಕ್ ತಮ್ಮ ಉದ್ಯೋಗಿಯೊಬ್ಬರನ್ನು ಕಚೇರಿಯಲ್ಲಿ ಚುಂಬಿಸುತ್ತಿರುವ ದೃಶ್ಯ ಎಲ್ಲೆಡೆ ಹರಿದಾಡಿತ್ತು. ಆರೋಗ್ಯ ಮಂತ್ರಿಗಳೇ ಸಾಮಾಜಿಕ ಅಂತರದ ವಿರುದ್ಧ ವರ್ತಿಸಿದ್ದರ ವಿರುದ್ಧ ಬ್ರಿಟನ್ ಜನತೆ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದರು. ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕೂಡ ಮ್ಯಾಟ್ ಹ್ಯಾಂಕಾಕ್‌ ವಿರುದ್ಧ ಸಾಕಷ್ಟು ವರದಿಗಳು ಭಿತ್ತರವಾಗಿದ್ದವು. ಹ್ಯಾಂಕಾಕ್ ರಾಜೀನಾಮೆಗೆ ಪ್ರಮುಖ ವಿರೋಧ ಪಕ್ಷವಾದ ಲೇಬರ್ ಪಾರ್ಟಿ ಪಟ್ಟು ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸರ್ಕಾರವನ್ನು ಮುಜುಗರದಿಂದ ರಕ್ಷಿಸಲು ಆರೋಗ್ಯ ಸಚಿವ ಮ್ಯಾಟ್  ಹ್ಯಾಂಕಾಕ್‌ ಅವರಿಂದ ರಾಜೀನಾಮೆ ಪಡೆದಿದ್ದಾರೆ.

ದೇಶ ಸಾಂಕ್ರಾಮಿಕದ ಸಂಕಷ್ಟದಲ್ಲಿರುವಾಗ ಕರೊನಾ ವಿರುದ್ಧ ಹೋರಾಡುತ್ತ ಸಾಕಷ್ಟು ಜನರು ತಮ್ಮ ಅಮೂಲ್ಯ ಜೀವವನ್ನು ತ್ಯಾಗ ಮಾಡಿದ್ದಾರೆ. ಸಾವಿರಾರು ಬ್ರಿಟನ್ ಪ್ರಜೆಗಳು ಕೋವಿಡ್ ಕಾರಣದಿಂದ ತಮ್ಮ ಕುಟುಂಬಸ್ಥರನ್ನು, ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಆದರೆ ಕೊರೊನಾ ವಿರುದ್ಧ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿ ನಿಂತು ನನ್ನಿಂದಲೆ ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿರುವುದು ಅಕ್ಷಮ್ಯ ಅಪರಾಧವಾಗಿದೆ. ದೇಶವನ್ನು ಭೀಕರ ವೈರಸ್‌ನಿಂದ ರಕ್ಷಿಸುವ ಹೊಣೆ ಹೊತ್ತು ಬ್ರಿಟನ್ ನಾಗರಿಕರ ತ್ಯಾಗವನ್ನು ಅವಮಾನಿಸುವ ವರ್ತನೆಯಿಂದ ಮುಜುಗರವಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಶನಿವಾರ ಜೂನ್‌ 26 ರಂದು ಬ್ರಿಟನ್ ಪ್ರಧಾನಿ ಬೋರಿಸ್‌ ಜಾನ್ಸ್‌ನ್‌ಗೆ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕಾಕ್ ಪತ್ರ ಬರೆದಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ಅವರಿಂದ ತೆರವಾದ ಆರೋಗ್ಯ ಸಚಿವರ ಸ್ಥಾನಕ್ಕೆ ಸಾಜಿದ್ ಜಾವಿದ್ ಅವರನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ನೇಮಕ ಮಾಡಿದ್ದಾರೆ. ಸಾಜಿದ್ ಜಾವಿದ್ ಅವರು ಹಿಂದೆ ಬ್ರಿಟನ್‌ನ ಹಣಕಾಸು ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.


ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...