Homeಅಂತರಾಷ್ಟ್ರೀಯಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

- Advertisement -
- Advertisement -

ಭಾರತದಲ್ಲಿ ಕೋವಿಡ್ ನಿಯಮಾವಳಿಗಳ  ಪಾಲನೆ ಕುರಿತು ಕೇಂದ್ರ ಸರ್ಕಾರ ದೇಶದಲ್ಲಿ ಸಾಕಷ್ಟು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಮಾಸ್ಕ್, ಸಾಮಾಜಿಕ ಅಂತರಗಳ ಪಾಲನೆ ಸೇರಿದಂತೆ ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್ (CAB) ಎಂದು ಸಾಕಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಜನಸಾಮಾನ್ಯರು ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡಗಳನ್ನು ವಿಧಿಸಲಾಗುತ್ತದೆ. ಕಠಿಣ ನಿಯಮಗಳ ಹೊರತಾಗಿಯೂ ಕಟ್ಟು ನಿಟ್ಟಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿದ ನಿದರ್ಶನಗಳು ಭಾರತದಲ್ಲಿ ಹೆಚ್ಚಾಗಿ ಕಾಣಿಸುವುದಿಲ್ಲ. ಜನಸಾಮಾನ್ಯರ ಜೊತೆ ಸರ್ಕಾರದ ಭಾಗವಾಗಿರುವ ಮಂತ್ರಿ, ಸಂಸದ- ಶಾಸಕರು ಮತ್ತು ಅಧಿಕಾರಿಗಳು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಸಾರ್ವಜನಿಕವಾಗಿ ಓಡಾಡುತ್ತಾರೆ. ಸಭೆ ಸಮಾರಂಭಗಳನ್ನು, ಚುನಾವಣಾ ಪ್ರಚಾರಗಳನ್ನು ನಡೆಸುತ್ತಾರೆ. ಈ ಕುರಿತು ಎಲ್ಲಿಯೂ ವರದಿಯಾಗುವುದಿಲ್ಲ. ಕೋವಿಡ್ ನಿಯಮಗಳ ಪಾಲನೆಯ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕಿದ್ದ ಮಂತ್ರಿ ಮಹೋದಯರ ನಿಯಮ ಉಲ್ಲಂಘನೆಗೆ ಭಾರತದಲ್ಲಿ ಯಾವ ಶಿಕ್ಷೆಯೂ ಇಲ್ಲ. ಬ್ರಿಟನ್ ದೇಶದಲ್ಲಿ ಭಾರತದಂತೆ ಅಲ್ಲ. ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಕಾರಣಕ್ಕೆ ಬ್ರಿಟನ್‌ನ ಆರೋಗ್ಯ ಸಚಿವರೇ ಭಾರಿ ಬೆಲೆ ತೆತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಮರೆತು ವರ್ತಿಸುತ್ತಿದ್ದ ಬ್ರಿಟನ್ ಆರೋಗ್ಯ ಮಂತ್ರಿ ಮ್ಯಾಟ್ ಹ್ಯಾಂಕಾಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ತಮ್ಮ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದು ಎಲ್ಲಾ ಸಾಮಾಜಿಕ ಅಂತರವನ್ನು ಮರೆತು ವರ್ತಿಸಿದ್ದರು. ಸಚಿವ ಹ್ಯಾಂಕಾಕ್ ತಮ್ಮ ಉದ್ಯೋಗಿಯೊಬ್ಬರನ್ನು ಕಚೇರಿಯಲ್ಲಿ ಚುಂಬಿಸುತ್ತಿರುವ ದೃಶ್ಯ ಎಲ್ಲೆಡೆ ಹರಿದಾಡಿತ್ತು. ಆರೋಗ್ಯ ಮಂತ್ರಿಗಳೇ ಸಾಮಾಜಿಕ ಅಂತರದ ವಿರುದ್ಧ ವರ್ತಿಸಿದ್ದರ ವಿರುದ್ಧ ಬ್ರಿಟನ್ ಜನತೆ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದರು. ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕೂಡ ಮ್ಯಾಟ್ ಹ್ಯಾಂಕಾಕ್‌ ವಿರುದ್ಧ ಸಾಕಷ್ಟು ವರದಿಗಳು ಭಿತ್ತರವಾಗಿದ್ದವು. ಹ್ಯಾಂಕಾಕ್ ರಾಜೀನಾಮೆಗೆ ಪ್ರಮುಖ ವಿರೋಧ ಪಕ್ಷವಾದ ಲೇಬರ್ ಪಾರ್ಟಿ ಪಟ್ಟು ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸರ್ಕಾರವನ್ನು ಮುಜುಗರದಿಂದ ರಕ್ಷಿಸಲು ಆರೋಗ್ಯ ಸಚಿವ ಮ್ಯಾಟ್  ಹ್ಯಾಂಕಾಕ್‌ ಅವರಿಂದ ರಾಜೀನಾಮೆ ಪಡೆದಿದ್ದಾರೆ.

ದೇಶ ಸಾಂಕ್ರಾಮಿಕದ ಸಂಕಷ್ಟದಲ್ಲಿರುವಾಗ ಕರೊನಾ ವಿರುದ್ಧ ಹೋರಾಡುತ್ತ ಸಾಕಷ್ಟು ಜನರು ತಮ್ಮ ಅಮೂಲ್ಯ ಜೀವವನ್ನು ತ್ಯಾಗ ಮಾಡಿದ್ದಾರೆ. ಸಾವಿರಾರು ಬ್ರಿಟನ್ ಪ್ರಜೆಗಳು ಕೋವಿಡ್ ಕಾರಣದಿಂದ ತಮ್ಮ ಕುಟುಂಬಸ್ಥರನ್ನು, ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಆದರೆ ಕೊರೊನಾ ವಿರುದ್ಧ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿ ನಿಂತು ನನ್ನಿಂದಲೆ ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿರುವುದು ಅಕ್ಷಮ್ಯ ಅಪರಾಧವಾಗಿದೆ. ದೇಶವನ್ನು ಭೀಕರ ವೈರಸ್‌ನಿಂದ ರಕ್ಷಿಸುವ ಹೊಣೆ ಹೊತ್ತು ಬ್ರಿಟನ್ ನಾಗರಿಕರ ತ್ಯಾಗವನ್ನು ಅವಮಾನಿಸುವ ವರ್ತನೆಯಿಂದ ಮುಜುಗರವಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಶನಿವಾರ ಜೂನ್‌ 26 ರಂದು ಬ್ರಿಟನ್ ಪ್ರಧಾನಿ ಬೋರಿಸ್‌ ಜಾನ್ಸ್‌ನ್‌ಗೆ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕಾಕ್ ಪತ್ರ ಬರೆದಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ಅವರಿಂದ ತೆರವಾದ ಆರೋಗ್ಯ ಸಚಿವರ ಸ್ಥಾನಕ್ಕೆ ಸಾಜಿದ್ ಜಾವಿದ್ ಅವರನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ನೇಮಕ ಮಾಡಿದ್ದಾರೆ. ಸಾಜಿದ್ ಜಾವಿದ್ ಅವರು ಹಿಂದೆ ಬ್ರಿಟನ್‌ನ ಹಣಕಾಸು ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.


ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...