Homeಮುಖಪುಟಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

ಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

- Advertisement -
- Advertisement -

‘ಪುರುಷ ಪ್ರಾಧಾನ್ಯತೆ’ಯನ್ನೇ ಪಾಲಿಸಿಕೊಂಡು ಬಂದಿರುವ ಭಾರತೀಯ ಸಮಾಜವು ‘ಮಹಿಳಾ ಪ್ರಾಧಾನ್ಯತೆ’ಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅದರಲ್ಲೂ ‘ಊಳಿಗಮಾನ್ಯ ಪದ್ಧತಿ’ಯನ್ನು ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಪಾಲಿಸಿಕೊಂಡು ಬರುತ್ತಿರುವ ಉತ್ತರ ಭಾರತದಲ್ಲಿ ಮಹಿಳಾ ಮೀಸಲಾತಿ ಎನ್ನುವುದು ನೆಪ ಮಾತ್ರಕ್ಕೆ ಎಂಬಂತಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದು ಜನಪ್ರತಿನಿಧಿಗಳಾಗುವ ಮಹಿಳೆಯರ ಬದಲಿಗೆ, ಅವರ ತಂದೆ, ಸೋದರ, ಗಂಡ ಹಾಗೂ ಪುರುಷ ಸಂಬಂಧಿ ಆಡಳಿತ ನಡೆಸುವುದು ದೇಶದಾದ್ಯಂತ ಮಾಮೂಲಾಗಿಬಿಟ್ಟಿದೆ. ಮಹಿಳಾ ಸರಪಂಚರ ಬದಲಿಗೆ ಆಕೆಯ ಸಹೋದರ ಮಾವ ವೇದಿಕೆ ಹಂಚಿಕೊಂಡಿದ್ದನ್ನು ಪ್ರಶ್ನಿಸಿದ ಪತ್ರಕರ್ತರಿಗೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾರಿಕೆಯ ಉತ್ತರ ನೀಡಿದ್ದಾರೆ.

ಮಹಿಳಾ ಸರಪಂಚರ ಸೋದರ ಮಾವ ವೇದಿಕೆಯಲ್ಲಿ ಅವರನ್ನು ಏಕೆ ಪ್ರತಿನಿಧಿಸುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ‘ನೀವೆಲ್ಲರೂ ವರದಿಗಾರರೆಲ್ಲಾ ಪುರುಷರು ಏಕೆ’ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಅಖಿಲೇಶ್ ನಡುವೆ ಈ ವಿಚಾರವಾಗಿ ಮಾತಿನ ವಿನಿಮಯ ನಡೆಯಿತು. ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬೆಲ್ಹರಾ ಪಂಚಾಯತ್ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ಆಯೋಜಕರು ಸ್ಥಳೀಯ ಸರಪಂಚ್ ಶಬಾನಾ ಖಾತುನ್ ಆಗಿದ್ದರು. ಆದರೆ, ಅವರು ವೇದಿಕೆಯಿಂದ ಕಾಣೆಯಾಗಿದ್ದರು. ಅದಕ್ಕಿಂತ ಮುಖ್ಯವಾಗಿ ಆಕೆಯ ಹೆಸರೂ ಯಾವುದೇ ಹೋರ್ಡಿಂಗ್ಸ್ ನಲ್ಲಿ ಇರಲಿಲ್ಲ. ಬದಲಾಗಿ ಆಕೆಯ ಸೋದರ ಮಾವ ಅಯಾಜ್ ಖಾನ್ ಹಾಜರಿದ್ದರು. ಪೋಸ್ಟರ್‌ಗಳಲ್ಲಿ ಅವರ ಛಾಯಾಚಿತ್ರವಾಗಿದ್ದು, ಅದರ ಪಕ್ಕದಲ್ಲಿ ‘ಅಧ್ಯಕ್ಷರು’ ಎಂದು ಬರೆಯಲಾಗಿದೆ.

ಬೆಳ್ಹಾರ ಪಂಚಾಯಿತಿ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಕಳೆದ ಚುನಾವಣೆಯಲ್ಲಿ ಖತುನ್ ಅವರು ಅಲ್ಲಿಂದ ಆಯ್ಕೆಯಾಗಿದ್ದರು. ಆದರೆ, ಆಕೆ ಯಾವುದೇ ಪಂಚಾಯತ್ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು. ಪಂಚಾಯಿತಿಯ ಎಲ್ಲಾ ನಿರ್ಧಾರಗಳನ್ನು ಆಕೆಯ ಸೋದರ ಮಾವ ತೆಗೆದುಕೊಳ್ಳುತ್ತಾನೆ ಎಂದು ಸ್ಥಳೀಯರು ಹೇಳುತ್ತಾರೆ. ಅಧಿಕೃತ ದಾಖಲೆಗಳನ್ನು ಸಹಿ ಮಾಡಲು ಮಾತ್ರ ಸರಪಂಚರ ಮನೆಗೆ ಕಡತಗಳನ್ನು ಕಳುಹಿಸಲಾಗುತ್ತದೆ.

ವಾಸ್ತವವಾಗಿ, ಅಂತಹ ಹಲವಾರು ಮೀಸಲು ಸ್ಥಾನಗಳಲ್ಲಿ, ಮಹಿಳಾ ಸರಪಂಚ್‌ಗಳ ಪತಿ ಮತ್ತು ಇತರ ಪುರುಷ ಸಂಬಂಧಿಗಳು ಸರಪಂಚ್ ಆಗಿರುತ್ತಾರೆ ಎಂದು ತಿಳಿದುಬಂದಿದೆ. ಚುನಾಯಿತ ಮಹಿಳೆಯರು ದಾಖಲೆಗಳಿಗೆ ಸಹಿ ಮಾಡುವುದಕ್ಕಿಂತ ಹೆಚ್ಚಿನದ್ದೇನೂ ಮಾಡುವುದಿಲ್ಲ.

ಈ ಸಂದರ್ಭದಲ್ಲಿ, ವರದಿಗಾರರ ಗುಂಪು ಅಖಿಲೇಶ್ ಯಾದವ್ ಅವರನ್ನು, ‘ಮಹಿಳಾ ಸರಪಂಚ್ ಪ್ರತಿನಿಧಿಸುವ ವೇದಿಕೆಯಲ್ಲಿ ಪುರುಷ ಸಂಬಂಧಿ ಇದ್ದರೆ, ಮಹಿಳಾ ಸಬಲೀಕರಣದ ಸಂದೇಶವನ್ನು ಹೇಗೆ ಕಳುಹಿಸಬಹುದು’ ಎಂದು ಕೇಳಿದರು. ‘ಇದೇನು ಹೊಸತೇ? ಎಷ್ಟೊಂದು ಪ್ರಧಾನ್‌ಪತಿಗಳು (ಪ್ರಧಾನರ ಗಂಡಂದಿರು) ಇಲ್ಲಿದ್ದಾರೆ. ಇದರಲ್ಲಿ ಸಮಸ್ಯೆ ಏನಿದೆ? ಈಗ ನಾನು ಕೇಳುತ್ತೇವೆರ, ನೀವೆಲ್ಲರೂ (ವರದಿಗಾರರು) ಪುರುಷರೆ ಏಕೆ’ ಎಂದು ಯಾದವ್ ಹಾಕಿದ ಮರು ಪ್ರಶ್ನೆಗೆ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದರು.

ಇದನ್ನೂ ಓದಿ; ಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...