Homeಮುಖಪುಟಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

ಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

- Advertisement -
- Advertisement -

‘ಪುರುಷ ಪ್ರಾಧಾನ್ಯತೆ’ಯನ್ನೇ ಪಾಲಿಸಿಕೊಂಡು ಬಂದಿರುವ ಭಾರತೀಯ ಸಮಾಜವು ‘ಮಹಿಳಾ ಪ್ರಾಧಾನ್ಯತೆ’ಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅದರಲ್ಲೂ ‘ಊಳಿಗಮಾನ್ಯ ಪದ್ಧತಿ’ಯನ್ನು ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಪಾಲಿಸಿಕೊಂಡು ಬರುತ್ತಿರುವ ಉತ್ತರ ಭಾರತದಲ್ಲಿ ಮಹಿಳಾ ಮೀಸಲಾತಿ ಎನ್ನುವುದು ನೆಪ ಮಾತ್ರಕ್ಕೆ ಎಂಬಂತಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದು ಜನಪ್ರತಿನಿಧಿಗಳಾಗುವ ಮಹಿಳೆಯರ ಬದಲಿಗೆ, ಅವರ ತಂದೆ, ಸೋದರ, ಗಂಡ ಹಾಗೂ ಪುರುಷ ಸಂಬಂಧಿ ಆಡಳಿತ ನಡೆಸುವುದು ದೇಶದಾದ್ಯಂತ ಮಾಮೂಲಾಗಿಬಿಟ್ಟಿದೆ. ಮಹಿಳಾ ಸರಪಂಚರ ಬದಲಿಗೆ ಆಕೆಯ ಸಹೋದರ ಮಾವ ವೇದಿಕೆ ಹಂಚಿಕೊಂಡಿದ್ದನ್ನು ಪ್ರಶ್ನಿಸಿದ ಪತ್ರಕರ್ತರಿಗೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾರಿಕೆಯ ಉತ್ತರ ನೀಡಿದ್ದಾರೆ.

ಮಹಿಳಾ ಸರಪಂಚರ ಸೋದರ ಮಾವ ವೇದಿಕೆಯಲ್ಲಿ ಅವರನ್ನು ಏಕೆ ಪ್ರತಿನಿಧಿಸುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ‘ನೀವೆಲ್ಲರೂ ವರದಿಗಾರರೆಲ್ಲಾ ಪುರುಷರು ಏಕೆ’ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಅಖಿಲೇಶ್ ನಡುವೆ ಈ ವಿಚಾರವಾಗಿ ಮಾತಿನ ವಿನಿಮಯ ನಡೆಯಿತು. ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬೆಲ್ಹರಾ ಪಂಚಾಯತ್ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ಆಯೋಜಕರು ಸ್ಥಳೀಯ ಸರಪಂಚ್ ಶಬಾನಾ ಖಾತುನ್ ಆಗಿದ್ದರು. ಆದರೆ, ಅವರು ವೇದಿಕೆಯಿಂದ ಕಾಣೆಯಾಗಿದ್ದರು. ಅದಕ್ಕಿಂತ ಮುಖ್ಯವಾಗಿ ಆಕೆಯ ಹೆಸರೂ ಯಾವುದೇ ಹೋರ್ಡಿಂಗ್ಸ್ ನಲ್ಲಿ ಇರಲಿಲ್ಲ. ಬದಲಾಗಿ ಆಕೆಯ ಸೋದರ ಮಾವ ಅಯಾಜ್ ಖಾನ್ ಹಾಜರಿದ್ದರು. ಪೋಸ್ಟರ್‌ಗಳಲ್ಲಿ ಅವರ ಛಾಯಾಚಿತ್ರವಾಗಿದ್ದು, ಅದರ ಪಕ್ಕದಲ್ಲಿ ‘ಅಧ್ಯಕ್ಷರು’ ಎಂದು ಬರೆಯಲಾಗಿದೆ.

ಬೆಳ್ಹಾರ ಪಂಚಾಯಿತಿ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಕಳೆದ ಚುನಾವಣೆಯಲ್ಲಿ ಖತುನ್ ಅವರು ಅಲ್ಲಿಂದ ಆಯ್ಕೆಯಾಗಿದ್ದರು. ಆದರೆ, ಆಕೆ ಯಾವುದೇ ಪಂಚಾಯತ್ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು. ಪಂಚಾಯಿತಿಯ ಎಲ್ಲಾ ನಿರ್ಧಾರಗಳನ್ನು ಆಕೆಯ ಸೋದರ ಮಾವ ತೆಗೆದುಕೊಳ್ಳುತ್ತಾನೆ ಎಂದು ಸ್ಥಳೀಯರು ಹೇಳುತ್ತಾರೆ. ಅಧಿಕೃತ ದಾಖಲೆಗಳನ್ನು ಸಹಿ ಮಾಡಲು ಮಾತ್ರ ಸರಪಂಚರ ಮನೆಗೆ ಕಡತಗಳನ್ನು ಕಳುಹಿಸಲಾಗುತ್ತದೆ.

ವಾಸ್ತವವಾಗಿ, ಅಂತಹ ಹಲವಾರು ಮೀಸಲು ಸ್ಥಾನಗಳಲ್ಲಿ, ಮಹಿಳಾ ಸರಪಂಚ್‌ಗಳ ಪತಿ ಮತ್ತು ಇತರ ಪುರುಷ ಸಂಬಂಧಿಗಳು ಸರಪಂಚ್ ಆಗಿರುತ್ತಾರೆ ಎಂದು ತಿಳಿದುಬಂದಿದೆ. ಚುನಾಯಿತ ಮಹಿಳೆಯರು ದಾಖಲೆಗಳಿಗೆ ಸಹಿ ಮಾಡುವುದಕ್ಕಿಂತ ಹೆಚ್ಚಿನದ್ದೇನೂ ಮಾಡುವುದಿಲ್ಲ.

ಈ ಸಂದರ್ಭದಲ್ಲಿ, ವರದಿಗಾರರ ಗುಂಪು ಅಖಿಲೇಶ್ ಯಾದವ್ ಅವರನ್ನು, ‘ಮಹಿಳಾ ಸರಪಂಚ್ ಪ್ರತಿನಿಧಿಸುವ ವೇದಿಕೆಯಲ್ಲಿ ಪುರುಷ ಸಂಬಂಧಿ ಇದ್ದರೆ, ಮಹಿಳಾ ಸಬಲೀಕರಣದ ಸಂದೇಶವನ್ನು ಹೇಗೆ ಕಳುಹಿಸಬಹುದು’ ಎಂದು ಕೇಳಿದರು. ‘ಇದೇನು ಹೊಸತೇ? ಎಷ್ಟೊಂದು ಪ್ರಧಾನ್‌ಪತಿಗಳು (ಪ್ರಧಾನರ ಗಂಡಂದಿರು) ಇಲ್ಲಿದ್ದಾರೆ. ಇದರಲ್ಲಿ ಸಮಸ್ಯೆ ಏನಿದೆ? ಈಗ ನಾನು ಕೇಳುತ್ತೇವೆರ, ನೀವೆಲ್ಲರೂ (ವರದಿಗಾರರು) ಪುರುಷರೆ ಏಕೆ’ ಎಂದು ಯಾದವ್ ಹಾಕಿದ ಮರು ಪ್ರಶ್ನೆಗೆ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದರು.

ಇದನ್ನೂ ಓದಿ; ಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...