Homeಮುಖಪುಟಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

ಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

- Advertisement -
- Advertisement -

‘ಪುರುಷ ಪ್ರಾಧಾನ್ಯತೆ’ಯನ್ನೇ ಪಾಲಿಸಿಕೊಂಡು ಬಂದಿರುವ ಭಾರತೀಯ ಸಮಾಜವು ‘ಮಹಿಳಾ ಪ್ರಾಧಾನ್ಯತೆ’ಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅದರಲ್ಲೂ ‘ಊಳಿಗಮಾನ್ಯ ಪದ್ಧತಿ’ಯನ್ನು ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಪಾಲಿಸಿಕೊಂಡು ಬರುತ್ತಿರುವ ಉತ್ತರ ಭಾರತದಲ್ಲಿ ಮಹಿಳಾ ಮೀಸಲಾತಿ ಎನ್ನುವುದು ನೆಪ ಮಾತ್ರಕ್ಕೆ ಎಂಬಂತಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದು ಜನಪ್ರತಿನಿಧಿಗಳಾಗುವ ಮಹಿಳೆಯರ ಬದಲಿಗೆ, ಅವರ ತಂದೆ, ಸೋದರ, ಗಂಡ ಹಾಗೂ ಪುರುಷ ಸಂಬಂಧಿ ಆಡಳಿತ ನಡೆಸುವುದು ದೇಶದಾದ್ಯಂತ ಮಾಮೂಲಾಗಿಬಿಟ್ಟಿದೆ. ಮಹಿಳಾ ಸರಪಂಚರ ಬದಲಿಗೆ ಆಕೆಯ ಸಹೋದರ ಮಾವ ವೇದಿಕೆ ಹಂಚಿಕೊಂಡಿದ್ದನ್ನು ಪ್ರಶ್ನಿಸಿದ ಪತ್ರಕರ್ತರಿಗೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾರಿಕೆಯ ಉತ್ತರ ನೀಡಿದ್ದಾರೆ.

ಮಹಿಳಾ ಸರಪಂಚರ ಸೋದರ ಮಾವ ವೇದಿಕೆಯಲ್ಲಿ ಅವರನ್ನು ಏಕೆ ಪ್ರತಿನಿಧಿಸುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ‘ನೀವೆಲ್ಲರೂ ವರದಿಗಾರರೆಲ್ಲಾ ಪುರುಷರು ಏಕೆ’ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಅಖಿಲೇಶ್ ನಡುವೆ ಈ ವಿಚಾರವಾಗಿ ಮಾತಿನ ವಿನಿಮಯ ನಡೆಯಿತು. ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬೆಲ್ಹರಾ ಪಂಚಾಯತ್ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ಆಯೋಜಕರು ಸ್ಥಳೀಯ ಸರಪಂಚ್ ಶಬಾನಾ ಖಾತುನ್ ಆಗಿದ್ದರು. ಆದರೆ, ಅವರು ವೇದಿಕೆಯಿಂದ ಕಾಣೆಯಾಗಿದ್ದರು. ಅದಕ್ಕಿಂತ ಮುಖ್ಯವಾಗಿ ಆಕೆಯ ಹೆಸರೂ ಯಾವುದೇ ಹೋರ್ಡಿಂಗ್ಸ್ ನಲ್ಲಿ ಇರಲಿಲ್ಲ. ಬದಲಾಗಿ ಆಕೆಯ ಸೋದರ ಮಾವ ಅಯಾಜ್ ಖಾನ್ ಹಾಜರಿದ್ದರು. ಪೋಸ್ಟರ್‌ಗಳಲ್ಲಿ ಅವರ ಛಾಯಾಚಿತ್ರವಾಗಿದ್ದು, ಅದರ ಪಕ್ಕದಲ್ಲಿ ‘ಅಧ್ಯಕ್ಷರು’ ಎಂದು ಬರೆಯಲಾಗಿದೆ.

ಬೆಳ್ಹಾರ ಪಂಚಾಯಿತಿ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಕಳೆದ ಚುನಾವಣೆಯಲ್ಲಿ ಖತುನ್ ಅವರು ಅಲ್ಲಿಂದ ಆಯ್ಕೆಯಾಗಿದ್ದರು. ಆದರೆ, ಆಕೆ ಯಾವುದೇ ಪಂಚಾಯತ್ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು. ಪಂಚಾಯಿತಿಯ ಎಲ್ಲಾ ನಿರ್ಧಾರಗಳನ್ನು ಆಕೆಯ ಸೋದರ ಮಾವ ತೆಗೆದುಕೊಳ್ಳುತ್ತಾನೆ ಎಂದು ಸ್ಥಳೀಯರು ಹೇಳುತ್ತಾರೆ. ಅಧಿಕೃತ ದಾಖಲೆಗಳನ್ನು ಸಹಿ ಮಾಡಲು ಮಾತ್ರ ಸರಪಂಚರ ಮನೆಗೆ ಕಡತಗಳನ್ನು ಕಳುಹಿಸಲಾಗುತ್ತದೆ.

ವಾಸ್ತವವಾಗಿ, ಅಂತಹ ಹಲವಾರು ಮೀಸಲು ಸ್ಥಾನಗಳಲ್ಲಿ, ಮಹಿಳಾ ಸರಪಂಚ್‌ಗಳ ಪತಿ ಮತ್ತು ಇತರ ಪುರುಷ ಸಂಬಂಧಿಗಳು ಸರಪಂಚ್ ಆಗಿರುತ್ತಾರೆ ಎಂದು ತಿಳಿದುಬಂದಿದೆ. ಚುನಾಯಿತ ಮಹಿಳೆಯರು ದಾಖಲೆಗಳಿಗೆ ಸಹಿ ಮಾಡುವುದಕ್ಕಿಂತ ಹೆಚ್ಚಿನದ್ದೇನೂ ಮಾಡುವುದಿಲ್ಲ.

ಈ ಸಂದರ್ಭದಲ್ಲಿ, ವರದಿಗಾರರ ಗುಂಪು ಅಖಿಲೇಶ್ ಯಾದವ್ ಅವರನ್ನು, ‘ಮಹಿಳಾ ಸರಪಂಚ್ ಪ್ರತಿನಿಧಿಸುವ ವೇದಿಕೆಯಲ್ಲಿ ಪುರುಷ ಸಂಬಂಧಿ ಇದ್ದರೆ, ಮಹಿಳಾ ಸಬಲೀಕರಣದ ಸಂದೇಶವನ್ನು ಹೇಗೆ ಕಳುಹಿಸಬಹುದು’ ಎಂದು ಕೇಳಿದರು. ‘ಇದೇನು ಹೊಸತೇ? ಎಷ್ಟೊಂದು ಪ್ರಧಾನ್‌ಪತಿಗಳು (ಪ್ರಧಾನರ ಗಂಡಂದಿರು) ಇಲ್ಲಿದ್ದಾರೆ. ಇದರಲ್ಲಿ ಸಮಸ್ಯೆ ಏನಿದೆ? ಈಗ ನಾನು ಕೇಳುತ್ತೇವೆರ, ನೀವೆಲ್ಲರೂ (ವರದಿಗಾರರು) ಪುರುಷರೆ ಏಕೆ’ ಎಂದು ಯಾದವ್ ಹಾಕಿದ ಮರು ಪ್ರಶ್ನೆಗೆ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದರು.

ಇದನ್ನೂ ಓದಿ; ಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...