Homeಮುಖಪುಟಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

ಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

- Advertisement -
- Advertisement -

‘ಪುರುಷ ಪ್ರಾಧಾನ್ಯತೆ’ಯನ್ನೇ ಪಾಲಿಸಿಕೊಂಡು ಬಂದಿರುವ ಭಾರತೀಯ ಸಮಾಜವು ‘ಮಹಿಳಾ ಪ್ರಾಧಾನ್ಯತೆ’ಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅದರಲ್ಲೂ ‘ಊಳಿಗಮಾನ್ಯ ಪದ್ಧತಿ’ಯನ್ನು ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಪಾಲಿಸಿಕೊಂಡು ಬರುತ್ತಿರುವ ಉತ್ತರ ಭಾರತದಲ್ಲಿ ಮಹಿಳಾ ಮೀಸಲಾತಿ ಎನ್ನುವುದು ನೆಪ ಮಾತ್ರಕ್ಕೆ ಎಂಬಂತಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದು ಜನಪ್ರತಿನಿಧಿಗಳಾಗುವ ಮಹಿಳೆಯರ ಬದಲಿಗೆ, ಅವರ ತಂದೆ, ಸೋದರ, ಗಂಡ ಹಾಗೂ ಪುರುಷ ಸಂಬಂಧಿ ಆಡಳಿತ ನಡೆಸುವುದು ದೇಶದಾದ್ಯಂತ ಮಾಮೂಲಾಗಿಬಿಟ್ಟಿದೆ. ಮಹಿಳಾ ಸರಪಂಚರ ಬದಲಿಗೆ ಆಕೆಯ ಸಹೋದರ ಮಾವ ವೇದಿಕೆ ಹಂಚಿಕೊಂಡಿದ್ದನ್ನು ಪ್ರಶ್ನಿಸಿದ ಪತ್ರಕರ್ತರಿಗೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾರಿಕೆಯ ಉತ್ತರ ನೀಡಿದ್ದಾರೆ.

ಮಹಿಳಾ ಸರಪಂಚರ ಸೋದರ ಮಾವ ವೇದಿಕೆಯಲ್ಲಿ ಅವರನ್ನು ಏಕೆ ಪ್ರತಿನಿಧಿಸುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ‘ನೀವೆಲ್ಲರೂ ವರದಿಗಾರರೆಲ್ಲಾ ಪುರುಷರು ಏಕೆ’ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಅಖಿಲೇಶ್ ನಡುವೆ ಈ ವಿಚಾರವಾಗಿ ಮಾತಿನ ವಿನಿಮಯ ನಡೆಯಿತು. ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬೆಲ್ಹರಾ ಪಂಚಾಯತ್ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ಆಯೋಜಕರು ಸ್ಥಳೀಯ ಸರಪಂಚ್ ಶಬಾನಾ ಖಾತುನ್ ಆಗಿದ್ದರು. ಆದರೆ, ಅವರು ವೇದಿಕೆಯಿಂದ ಕಾಣೆಯಾಗಿದ್ದರು. ಅದಕ್ಕಿಂತ ಮುಖ್ಯವಾಗಿ ಆಕೆಯ ಹೆಸರೂ ಯಾವುದೇ ಹೋರ್ಡಿಂಗ್ಸ್ ನಲ್ಲಿ ಇರಲಿಲ್ಲ. ಬದಲಾಗಿ ಆಕೆಯ ಸೋದರ ಮಾವ ಅಯಾಜ್ ಖಾನ್ ಹಾಜರಿದ್ದರು. ಪೋಸ್ಟರ್‌ಗಳಲ್ಲಿ ಅವರ ಛಾಯಾಚಿತ್ರವಾಗಿದ್ದು, ಅದರ ಪಕ್ಕದಲ್ಲಿ ‘ಅಧ್ಯಕ್ಷರು’ ಎಂದು ಬರೆಯಲಾಗಿದೆ.

ಬೆಳ್ಹಾರ ಪಂಚಾಯಿತಿ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಕಳೆದ ಚುನಾವಣೆಯಲ್ಲಿ ಖತುನ್ ಅವರು ಅಲ್ಲಿಂದ ಆಯ್ಕೆಯಾಗಿದ್ದರು. ಆದರೆ, ಆಕೆ ಯಾವುದೇ ಪಂಚಾಯತ್ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು. ಪಂಚಾಯಿತಿಯ ಎಲ್ಲಾ ನಿರ್ಧಾರಗಳನ್ನು ಆಕೆಯ ಸೋದರ ಮಾವ ತೆಗೆದುಕೊಳ್ಳುತ್ತಾನೆ ಎಂದು ಸ್ಥಳೀಯರು ಹೇಳುತ್ತಾರೆ. ಅಧಿಕೃತ ದಾಖಲೆಗಳನ್ನು ಸಹಿ ಮಾಡಲು ಮಾತ್ರ ಸರಪಂಚರ ಮನೆಗೆ ಕಡತಗಳನ್ನು ಕಳುಹಿಸಲಾಗುತ್ತದೆ.

ವಾಸ್ತವವಾಗಿ, ಅಂತಹ ಹಲವಾರು ಮೀಸಲು ಸ್ಥಾನಗಳಲ್ಲಿ, ಮಹಿಳಾ ಸರಪಂಚ್‌ಗಳ ಪತಿ ಮತ್ತು ಇತರ ಪುರುಷ ಸಂಬಂಧಿಗಳು ಸರಪಂಚ್ ಆಗಿರುತ್ತಾರೆ ಎಂದು ತಿಳಿದುಬಂದಿದೆ. ಚುನಾಯಿತ ಮಹಿಳೆಯರು ದಾಖಲೆಗಳಿಗೆ ಸಹಿ ಮಾಡುವುದಕ್ಕಿಂತ ಹೆಚ್ಚಿನದ್ದೇನೂ ಮಾಡುವುದಿಲ್ಲ.

ಈ ಸಂದರ್ಭದಲ್ಲಿ, ವರದಿಗಾರರ ಗುಂಪು ಅಖಿಲೇಶ್ ಯಾದವ್ ಅವರನ್ನು, ‘ಮಹಿಳಾ ಸರಪಂಚ್ ಪ್ರತಿನಿಧಿಸುವ ವೇದಿಕೆಯಲ್ಲಿ ಪುರುಷ ಸಂಬಂಧಿ ಇದ್ದರೆ, ಮಹಿಳಾ ಸಬಲೀಕರಣದ ಸಂದೇಶವನ್ನು ಹೇಗೆ ಕಳುಹಿಸಬಹುದು’ ಎಂದು ಕೇಳಿದರು. ‘ಇದೇನು ಹೊಸತೇ? ಎಷ್ಟೊಂದು ಪ್ರಧಾನ್‌ಪತಿಗಳು (ಪ್ರಧಾನರ ಗಂಡಂದಿರು) ಇಲ್ಲಿದ್ದಾರೆ. ಇದರಲ್ಲಿ ಸಮಸ್ಯೆ ಏನಿದೆ? ಈಗ ನಾನು ಕೇಳುತ್ತೇವೆರ, ನೀವೆಲ್ಲರೂ (ವರದಿಗಾರರು) ಪುರುಷರೆ ಏಕೆ’ ಎಂದು ಯಾದವ್ ಹಾಕಿದ ಮರು ಪ್ರಶ್ನೆಗೆ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದರು.

ಇದನ್ನೂ ಓದಿ; ಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...